Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಂಗಳೂರು ವಿ.ವಿಯಿಂದ ‘ಕುಂದಾಪ್ರ ಕನ್ನಡ ಅಧ್ಯಯನ ಪೀಠ’ ಆರಂಭಕ್ಕೆ ನಿರ್ಧಾರ
    ಊರ್ಮನೆ ಸಮಾಚಾರ

    ಮಂಗಳೂರು ವಿ.ವಿಯಿಂದ ‘ಕುಂದಾಪ್ರ ಕನ್ನಡ ಅಧ್ಯಯನ ಪೀಠ’ ಆರಂಭಕ್ಕೆ ನಿರ್ಧಾರ

    Updated:27/06/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ:
    ಕುಂದಾಪುರ ನೆಲದ ಭಾಷೆ ಕುಂದಾಪ್ರ ಕನ್ನಡದ ಅಭಿವೃದ್ಧಿ ಹಾಗೂ ತುಲನಾತ್ಮಕ ಅಧ್ಯಯನದ ದೃಷ್ಟಿಯಿಂದ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಆರಂಭಿಸಲು ಮಂಗಳೂರು ವಿಶ್ವವಿದ್ಯಾನಿಲಯ ನಿರ್ಧರಿಸಿದ್ದು, ಕುಂದಾಪ್ರ ಕನ್ನಡ ಭಾಷೆಯ ಉಳಿವು, ಪ್ರಸರಣ ಹಾಗೂ ದಾಖಲಾತಿ ದೃಷ್ಟಿಯಿಂದ ದಶಕಗಳ ಬೇಡಿಕೆಗೆ ಜೀವಕಳೆ ಬಂದಂತಾಗಿದೆ.

    Click Here

    Call us

    Click Here

    ಕುಂದಾಪ್ರ ಕನ್ನಡ ಅಧ್ಯಯನ ಪೀಠ ಆರಂಭಕ್ಕೆ ಕಳೆದೆರಡು ವರ್ಷಗಳಿಂದ ಹೆಚ್ಚಿನ ಆಸ್ಥೆ ವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಸರಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಿತ್ತು. ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ಆರಂಭದಲ್ಲಿ ವಿಶ್ವ ವಿದ್ಯಾನಿಲಯದ ಆಂತರಿಕ ಸಂಪನ್ಮೂಲದಿಂದ ರೂ.25 ಲಕ್ಷ ಹಣವನ್ನು ಮೀಸಲಿರಿಸಲಾಗಿದ್ದು, ಸರಕಾರದ ಅನುದಾನವನ್ನು ನಿರೀಕ್ಷಿಸಲಾಗಿದೆ.

    ಕುಂದಾಪ್ರ ಕನ್ನಡದಲ್ಲಿ ಸಾಹಿತ್ತಿಕ ಚಟುವಟಿಕೆಗಳು, ತುಲನಾತ್ಮಕ ಅಧ್ಯಯನ, ಸಂಶೋಧನೆ, ವಿಚಾರ ಸಂಕೀರಣ, ಭಾಷಾ ಬೆಳವಣಿಗೆಗೆ ಪೂಕರ ಕಾರ್ಯಕ್ರಮಗಳು, ಈ ನೆಲದ ಐತಿಹ್ಯವನ್ನು ಬೆಳಕಿಗೆ ತರುವ ಕಾರ್ಯಚಟುವಟಿಕೆಗಳು ಸೇರಿದಂತೆ ಹಲವು ವಿಚಾರಗಳು ಅಧ್ಯಯನ ಪೀಠದ ಮೂಲಕ ನಡೆಯಲಿದೆ. ಕುಂದಾಪ್ರ ಡಾಟ್ ಕಾಂ ವರದಿ.

    ಅಧ್ಯಯನ ಪೀಠ ಕುಂದಾಪುರದಲ್ಲಿಯೇ ಆಗಲಿ:
    ಮಂಗಳೂರು ವಿಶ್ವವಿದ್ಯಾನಿಲಯ ಆರಂಭಿಸಲಿರುವ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಕುಂದಾಪುರದಲ್ಲಿಯೇ ಆಗುವುದು ಸೂಕ್ತ ಹಾಗೂ ಸಮಂಜಸವೂ ಆಗಿದೆ. ಬೇರೆ ಭಾಷಾ ಪ್ರಭಾವ ಇರುವಲ್ಲಿ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಆರಂಭವಾದರೆ ಅದಕ್ಕೆ ಹೆಚ್ಚಿನ ಮನ್ನಣೆಯಾಗಲೀ, ವಿಸ್ತಾರವಾದ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳುವುದಕ್ಕಾಗಲಿ ಸಾಧ್ಯವಾಗದಿರಬಹುದು. ಅದರ ಬದಲಿಗೆ ಕುಂದಾಪುರ ಕನ್ನಡ ಸೊಗಡು ಹೊಂದಿರುವ ಯಾವುದಾದರೂ ಸರಕಾರಿ ಅಥವಾ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಕುಂದಾಪ್ರ ಕನ್ನಡ ಅಧ್ಯಯನ ಪೀಠವಾಗುವುದು ಸೂಕ್ತ ಎಂದು ಕುಂದಾಪ್ರ ಕನ್ನಡಿಗರು ಅಭಿಪ್ರಾಯ ಪಟ್ಟಿದ್ದಾರೆ. ಕುಂದಾಪ್ರ ಡಾಟ್ ಕಾಂ ವರದಿ.

    * ಮಂಗಳೂರು ವಿವಿಯಲ್ಲಿ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಆರಂಭಿಸುವ ಬಗ್ಗೆ ಸಿಂಡಿಕೇಟ್ ಸಭೆಗಳಲ್ಲಿ ಸತತವಾಗಿ ಚರ್ಚೆಯಾಗಿದೆ. 3 ತಿಂಗಳ ಹಿಂದೆಯೇ ಸರಕಾರಕ್ಕೂ ವಿವಿ ಪ್ರಸ್ತಾಪ ಕಳುಹಿಸಿದೆ. ಆರಂಭಿದಲ್ಲಿ ಆಂತರಿಕ ಸಂಪನ್ಮೂಲವನ್ನು ಬಳಸಿಕೊಂಡು ಅಧ್ಯಯನ ಕೇಂದ್ರ ಸ್ಥಾಪಿಸುವ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಕುಂದಾಪ್ರ ಕನ್ನಡ ಅಧ್ಯಯನ ಕೇಂದ್ರವನ್ನು ಕುಂದಾಪ್ರ ಕನ್ನಡ ಭಾಷಿಕರೇ ಹೆಚ್ಚಿರುವ ಭಾಗದ ಯಾವುದಾದರೂ ಸರಕಾರಿ ಅಥವಾ ಅನುದಾನಿತ ಕಾಲೇಜಿನಲ್ಲಿ ಆರಂಭಿಸಬೇಕು ಎಂಬುದು ನನ್ನ ಅಭಿಪ್ರಾಯವಾಗಿತ್ತು. ಅಧ್ಯಯನ ಕೇಂದ್ರದ ಕಾರ್ಯಚಟುವಟಿಕೆಗಳನ್ನು ಮುಂದುವರಿಸಲು ಸ್ನಾತಕೋತ್ತರ ವಿಭಾಗದ ನುರಿತ ಪ್ರಾಧ್ಯಾಪಕರು ಬೇಕಾಗಿರುವುದರಿಂದ ವಿವಿಯಲ್ಲಿಯೇ ಆರಂಭಿಸುವುದು ಸೂಕ್ತ ಎಂಬ ಅಭಿಪ್ರಾಯವೂ ಸಬೆಯಲ್ಲಿ ವ್ಯಕ್ತವಾಗಿತ್ತು. ಕುಂದಾಪುರದಲ್ಲಿಯೇ ಅಧ್ಯಯನ ಕೇಂದ್ರ ಆರಂಭ ಸೂಕ್ತ ಎಂಬ ಅಭಿಪ್ರಾಯವನ್ನು ಮರುವಿಮರ್ಷೆ ಮಾಡುವಂತೆ ಮುಂದಿನ ಸಿಂಡಿಕೇಟ್ ಸಭೆಯಲ್ಲಿ ತಿಳಿಸಲಾಗುವುದು. – ಪ್ರೋ. ಕರುಣಾಕರ ಎ. ಕೋಟೆಗಾರ್, ಸಿಂಡಿಕೇಟ್ ಸದಸ್ಯರು, ಮಂಗಳೂರು ವಿಶ್ವವಿದ್ಯಾನಿಲಯ

    Click here

    Click here

    Click here

    Call us

    Call us

    ನಾಮಕಾವಸ್ಥೆ ಆಗದಿರಲಿ:
    ಬಹುಪಾಲು ಅಧ್ಯಯನ ಪೀಠಗಳು ನಾಮಕಾವಸ್ಥೆಯ ಸಂಸ್ಥೆಗಳಾಗಿವೆ. ಸರಕಾರದಿಂದ ಸಮರ್ಪಕ ಅನುದಾನ ದೊರೆಯದಿರುವುದು, ಜಾತಿ ಹಾಗೂ ಹುದ್ದೆಯ ರಾಜಕಾರಣ, ಹಾಲಿ ಉಪನ್ಯಾಸಕರಿಗೆ ವಹಿಸುವ ಹೆಚ್ಚುವರಿ ಜವಾಬ್ದಾರಿ ಮೊದಲಾದ ಕಾರಣಗಳಿಂದಾಗಿ ಅಧ್ಯಯನ ಪೀಠಗಳು ಸೊರಗಿವೆ. ಕುಂದಾಪ್ರ ಕನ್ನಡ ಅಧ್ಯಯನ ಪೀಠ ಆರಂಭಿಸುವ ನಿರ್ಧಾರ ಸ್ವಾಗತಾರ್ಹವೇ ಆದರೂ ಆರಂಭಿಕ ನಿಧಿಯ ಜೊತೆಗೆ ಸರಕಾರ ಹೆಚ್ಚಿನ ಅನುದಾನ ಒದಗಿಸುವುದು ಅಗತ್ಯವಿದೆ. ಕುಂದಾಪ್ರ ಡಾಟ್ ಕಾಂ ವರದಿ.

    ಕುಂದಾಪ್ರ ಕನ್ನಡ ವಿಶಿಷ್ಟ ಭಾಷಾ ಪ್ರಾಕಾರವಾಗಿದ್ದು, ಅದರ ಉಳಿವು ಹಾಗೂ ದಾಖಲಿಕರಣ ಬಹುಮುಖ್ಯವಾಗಿದೆ. ಇದಕ್ಕೆ ಪುರಕವಾಗಿ ಕುಂದಾಪ್ರ ಕನ್ನಡದ ಸಾಹಿತ್ಯ ಚಟುವಟಿಕೆಗಳು ನಡೆಯುವುದು, ಪುಸ್ತಕಗಳು ಪ್ರಕಟಗೊಳ್ಳುವುದು ಮತ್ತು ಆ ಮೂಲಕ ಕುಂದಾಪ್ರ ಕನ್ನಡದ ಭಾಷಿಕರನ್ನು ಸೆಳೆಯುವುದು ಬಹುಮುಖ್ಯವಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧ್ಯಯನ ಪೀಠದ ಜವಾಬ್ದಾರಿ ಹೊರುವವರು ಯೋಚಿಸಬೇಕಿದೆ. / ಕುಂದಾಪ್ರ ಡಾಟ್ ಕಾಂ ವರದಿ/

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು

    05/12/2025

    ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ

    05/12/2025

    ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ
    • ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d