Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಿರುಚಿತ್ರಗಳಿಗೂ ಸಿನಿಮಾಗಳಂತೆ ಪ್ರಬುದ್ಧತೆ ಅಗತ್ಯ: ಸುನಿಲ್ ಕುಮಾರ್ ದೇಸಾಯಿ
    alvas nudisiri

    ಕಿರುಚಿತ್ರಗಳಿಗೂ ಸಿನಿಮಾಗಳಂತೆ ಪ್ರಬುದ್ಧತೆ ಅಗತ್ಯ: ಸುನಿಲ್ ಕುಮಾರ್ ದೇಸಾಯಿ

    Updated:02/07/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಅತ್ಯಂತ ಕಡಿಮೆ ಅವಧಿಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಕಥೆ ಹೇಳುವ ಸಾಮರ್ಥ್ಯ ಕಿರುಚಿತ್ರಗಳಿಗೆ ಇದೆ ಎಂದು ಹೆಸರಾಂತ ಚಿತ್ರ ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ ಹೇಳಿದರು.

    Click Here

    Call us

    Click Here

    ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗವು ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕಿರುಚಿತ್ರ ಸ್ಪರ್ಧೆ ‘ಆಳ್ವಾಸ್ ಅರೆನಾ’ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸ್ಪರ್ಧೆಗೆ ಬಂದ ಎಲ್ಲಾ ಕಿರುಚಿತ್ರಗಳು ಕಥೆಯ ಆಯ್ಕೆ, ಅಭಿನಯ, ಛಾಯಾಗ್ರಹಣ, ನಿರೂಪಣೆಯಲ್ಲಿ ಪ್ರಬುದ್ಧತೆ ಮೆರೆದಿವೆ. ಮುಖ್ಯವಾಹಿನಿಯ ಚಿತ್ರಗಳಿಗೂ ಈ ಕಿರುಚಿತ್ರಗಳು ಸ್ಪರ್ಧೆಯನ್ನೊಡ್ಡಿವೆ ಎಂದು ಹೇಳಿದರು.

    ಆಳ್ವಾಸ್ ಅರೆನಾ ಉತ್ತಮ ಕಿರುಚಿತ್ರವಾಗಿ ‘ಅಜ್ಜಿಮನೆ’ಕಿರುಚಿತ್ರ 2ನೇ ಸ್ಥಾನ ಪಡೆದುಕೊಂಡಿತು

    ವಿಜೇತ ವಸತಿಯುತ ವಿಶೇಷ ಮಕ್ಕಳ ಶಾಲೆಯ ಸಂಸ್ಥಾಪಕಿ ಡಾ. ಕಾಂತಿ ಹರೀಶ್ ಮಾತನಾಡಿ, ಪತ್ರಿಕೋದ್ಯಮ ವಿದ್ಯಾರ್ಥಿಗಳು ಸಾಮಾಜಿಕ ಕಾಳಜಿ ಇರುವ ಚಿತ್ರ ನಿರ್ಮಿಸಿದರೆ ಸಮಾಜಕ್ಕೆ ಒಳಿತಾಗುತ್ತದೆ. ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳು ನಿರ್ಮಿಸಿದ ವಿಜೇತ ವಿಶೇಷ ಶಾಲೆಯ ಸಾಕ್ಷ ಚಿತ್ರಕ್ಕೆ ಹಲವೆಡೆಯಿಂದ ಉತ್ತಮ ಸ್ಪಂದನೆ ದೊರಕಿದೆ. ಇದರಿಂದ ಚಿತ್ರೋದ್ಯಮವು ಸಮಾಜಮುಖಿ ವಸ್ತುವಿಷಯವನ್ನು ಆರಿಸಿಕೊಂಡರೆ ಸಮಾಜದಲ್ಲಿ ಧನಾತ್ಮಕ ಬದಲಾವಣೆ ಸಾಧ್ಯ ಎಂಬ ಸಂದೇಶ ರವಾನೆಯಾಗುತ್ತದೆ ಎಂದರು.

    ಉದ್ಯಮಿ ಶಶಿಧರ್ ಶೆಟ್ಟಿ ಮಾತನಾಡಿ, ಕಲ್ಪನೆ ಮತ್ತು ಸಾಧಿಸುವ ಛಲ ಇದ್ದರೆ ಸದಭಿರುಚಿಯ ಹಾಗೂ ಸಾಮಾಜಿಕ ಸಂದೇಶವುಳ್ಳ ಚಿತ್ರ ನಿರ್ಮಿಸಬಹುದು ಎಂದು ಅಭಿಪ್ರಾಯಪಟ್ಟರು. ಒಳ್ಳೆಯ ಚಿತ್ರ ನಿರ್ಮಾಣ ಮಾಡಲು ಶೈಕ್ಷಣಿಕ ಅರ್ಹತೆ ಹೊಂದಿದ್ದರೆ ಸಾಲದು ಒಳ್ಳೆಯ ಅಭಿರುಚಿಯೂ ಇರಬೇಕು ಎಂದರು.

    ಕಾರ್ಯಕ್ರಮದಲ್ಲಿ ಸುನಿಲ್ ಕುಮಾರ್ ದೇಸಾಯಿ, ಡಾ. ಕಾಂತಿ ಹರೀಶ್ ಮತ್ತು ಶಶಿಧರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

    Click here

    Click here

    Click here

    Click Here

    Call us

    Call us

    ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಯುವಜನತೆ ಚಿತ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಮತ್ತು ಸೃಜನಾತ್ಮಕವಾಗಿ ತೊಡಗಿಸಿಕೊಂಡರೆ ಚಿತ್ರೋದ್ಯಮವು ಉತ್ತಮ ಚಿತ್ರಗಳಿಂದ ಮನ್ನಣೆ ಪಡೆಯಬಹುದು ಎಂದರು.
    ಎರಡನೆ ಆವೃತ್ತಿಯ ರಾಷ್ಟ್ರ ಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ೮೦ಕ್ಕೂ ಅಧಿಕ ಸಿನಿಮಾಗಳು ನೋಂದಣಿಗೊಂಡಿದ್ದು, ಖ್ಯಾತ ನಟ ಹಾಗೂ ನಿರ್ದೇಶಕ ಸುರೇಶ ಹೆಬ್ಳೀಕರ್, ಮಂಡ್ಯ ರಮೇಶ್, ನೆನಪಿರಲಿ ಪ್ರೇಮ್, ಹಾಗೂ ಸುನಿಲ್ ಕುಮಾರ್ ತೀರ್ಪುಗಾರರಾಗಿ ಕೆಲಸ ನಿರ್ವಹಿಸಿದ್ದಾರೆ.

    ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ವಿಭಾಗದ ಸಂಯೋಜಕ ಪ್ರಸಾದ ಶೆಟ್ಟಿ, ಮಾನವಿಕ ವಿಭಾಗದ ಡೀನ್ ಸಂಧ್ಯಾ ಕೆ. ಎಸ್ ಉಪಸ್ಥಿತರಿದ್ದರು.

    ಆಳ್ವಾಸ್ ಅರೆನಾ ಎರಡನೇ ಆವೃತ್ತಿಯ ಉತ್ತಮ ಕಿರುಚಿತ್ರವಾಗಿ ನಿಶಿತ್ ಶೆಟ್ಟಿ ನಿರ್ದೇಶನದ ‘ವೃಷಿ’ ಕಿರುಚಿತ್ರವು 9,999 ರೂಪಾಯಿ ನಗದು ಬಹುಮಾನದೊಂದಿಗೆ ಮೊದಲ ಸ್ಥಾನ, ಅಜ್ಜಿಮನೆ ಕಿರುಚಿತ್ರ 6,666 ರೂಪಾಯಿ ನಗದು ಬಹುಮಾನದೊಂದಿಗೆ ದ್ವಿತೀಯ ಸ್ಥಾನ ಹಾಗೂ ವಿಕಾಸ್ ನಿರ್ದೇಶನದ ಮಾತು-ಕಥೆ ತೃತೀಯ ಸ್ಥಾನ ಪಡೆಯಿತು. ವಿಶೇಷ ಕೆಟಗರಿಯಲ್ಲಿ 4 ಸಿನಿಮಾಗಳನ್ನು ಉತ್ತಮ ನಿರ್ದೇಶಕ, ನಟ, ಛಾಯಗ್ರಾಹಣ ಹಾಗೂ ಸಂಕಲನಕ್ಕೆ ಆರಿಸಲಾಗಿತ್ತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ರಾಷ್ಟ್ರಸೇವೆಯ ಕನಸಿಗೆ ಆಳ್ವಾಸ್ ಪ.ಪೂ ಕಾಲೇಜಿನಿಂದ ಬಲ: ಎನ್ ಡಿಎಯಲ್ಲಿ 24 ವಿದ್ಯಾರ್ಥಿಗಳು ಉತ್ತೀರ್ಣ

    09/05/2026
    Leave A Reply Cancel Reply

    twelve + 8 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.