Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಿಯಂತ್ರಣ ತಪ್ಪಿ ಸಮುದ್ರಕ್ಕೆ ಉರುಳಿದ ಕಾರು: ಚಾಲಕ‌ ಮೃತ್ಯು, ಓರ್ವ ನಾಪತ್ತೆ, ಇಬ್ಬರು ಆಸ್ಪತ್ರೆಗೆ ದಾಖಲು
    ಅಪಘಾತ-ಅಪರಾಧ ಸುದ್ದಿ

    ನಿಯಂತ್ರಣ ತಪ್ಪಿ ಸಮುದ್ರಕ್ಕೆ ಉರುಳಿದ ಕಾರು: ಚಾಲಕ‌ ಮೃತ್ಯು, ಓರ್ವ ನಾಪತ್ತೆ, ಇಬ್ಬರು ಆಸ್ಪತ್ರೆಗೆ ದಾಖಲು

    Updated:03/07/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ:
    ಬೀಜಾಡಿ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರಪಾಲಾದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದಾನೆ. ಓರ್ವ ನಾಪತ್ತೆಯಾಗಿದ್ದು, ಇಬ್ಬರು ಗಾಯಾಳುಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಮರವಂತೆ ಬೀಚ್ ಬಳಿ ದುರ್ಘಟನೆ ನಡೆದಿದೆ.

    Click Here

    Call us

    Click Here

    ಘಟನೆಯಲ್ಲಿ ಬೀಜಾಡಿಯ ಗೋಳಿಬೆಟ್ಟು ನಿವಾಸಿ ವಿರಾಜ್ ಆಚಾರ್ಯ(28) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ರೋಶನ್‌ ಎಂಬವರು ನಾಪತ್ತೆಯಾಗಿದ್ದು, ಸಮುದ್ರದಲ್ಲಿ ಕೊಚ್ಚಿ ಹೋಗಿರುವ ಶಂಕೆ‌ ವ್ಯಕ್ತವಾಗಿದೆ. ಸಂದೇಶ್ ಹಾಗೂ ಕಾರ್ತಿಕ್ ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಶನಿವಾರ ತಡರಾತ್ರಿ ಕುಂದಾಪುರದಿಂದ ಕೆಂಪು ಬಣ್ಣದ ಸ್ವಿಫ್ಟ್ ಕಾರಿನಲ್ಲಿ ವಿರಾಜ್ ಹಾಗೂ ಅವರ ಸಹೋದರ ಸಂಬಂಧಿಗಳು ಕುಂದಾಪುರ ಕಡೆಯಿಂದ ಬೈಂದೂರು‌ ಕಡೆಗೆ ಪ್ರಯಾಣಿಸುತ್ತಿದ್ದರು. ವಿರಾಜ್ ಸ್ವತಃ ಕಾರನ್ನು ಚಾಲನೆ‌ ಮಾಡುತ್ತಿದ್ದರು ಎನ್ನಲಾಗಿದೆ. ಮರವಂತೆ ಬೀಚ್ ಸಮೀಪ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಸುಮಾರು 40 ಅಡಿ ಕೆಳಕ್ಕೆ ಉರುಳಿದೆ. ಸಮುದ್ರದ ತಡೆಗೋಡೆಗಳಿಗೆ ಹಾಕಲಾಗಿದ್ದ ಬಂಡೆಕಲ್ಲುಗಳ‌ ಮೇಲೆ ಉರುಳಿಬಿದ್ದ ಕಾರು ಸಮುದ್ರದ ತಳಭಾಗದ ಬಂಡೆಕಲ್ಲುಗಳ ಬದಿ ಬಂದು ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಸಂದೇಶ್ ಹಾಗೂ ಕಾರ್ತಿಕ್ ಕಾರಿನಿಂದ ಹೊರಕ್ಕೆ ಬಿದ್ದಿದ್ದಾರೆ. ಅಪಘಾತದಲ್ಲಿ ಗಾಯಾಳುವಾದ ಸಂದೇಶ್ ರಾ.ಹೆ ಮೇಲಕ್ಕೆ ಬಂದು ಸಹಾಯಕ್ಕಾಗಿ ವಾಹನಗಳನ್ನು ನಿಲ್ಲಿಸುವ ಪ್ರಯತ್ನ ಮಾಡಿದರೂ ಫಲಕಾರಿಯಾಗಿರಲಿಲ್ಲ‌‌. ತದನಂತರ ನಡೆದುಕೊಂಡೆ ಸುಮಾರು ಎರಡು ಕಿ.ಮೀ ದೂರದ ತ್ರಾಸಿ‌ ಜಂಕ್ಷನ್ ನನ್ನು ತಲುಪಿದ್ದ ಅವರು ಅಲ್ಲಿದ್ದ‌ ಕೋಟೇಶ್ವರ ಬೀಜಾಡಿ ಪರಿಸರದ‌ ಕೆಲ ಯುವಕರಿಗೆ ಘಟನೆಯ ಬಗ್ಗೆ ಮಾಹಿತಿ‌ ನೀಡಿ ಅವರನ್ನು‌ ಕರೆದುಕೊಂಡು ದುರಂತ‌ ನಡೆದ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಬಂಡೆಕಲ್ಲುಗಳ‌‌ ನಡುವೆ ಗಾಯಾಳುವಾಗಿ ಪತ್ತೆಯಾದ ಕಾರ್ತಿಕ್ ಅವರನ್ನು ರಕ್ಷಣೆ ಮಾಡಿ ಚಿಕಿತ್ಸೆಗೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.

    ಆಪತ್ಭಾಂಧವ ಇಬ್ರಾಹಿಂ‌ ಮತ್ತವರ ತಂಡ ಸ್ಥಳೀಯರ ಸಹಕಾರವನ್ನು ಪಡೆದುಕೊಂಡು ಕಾರನ್ನು ಮೇಲಕ್ಕೆತ್ತುವ ಪ್ರಯತ್ನ‌ ಮಾಡಿದರಾದರೂ ಮಳೆ ಹಾಗೂ ಇತರ ಕಾರಣದಿಂದ ಇದು ಸಾಧ್ಯವಾಗಿರಲಿಲ್ಲ. ಈ ನಡುವೆ ಸಮುದ್ರದ ಅಲೆಗಳ ಭಾರೀ‌ ಒತ್ತಡದಿಂದ ಅಲೆಗಳು ಕಾರಿನ‌ ಮೇಲ್ಭಾಗಕ್ಕೆ ಅಪ್ಪಳಿಸಿ ಅಪ್ಪಳಿಸಿ ಕಾರು ನಜ್ಜುಗುಜ್ಜಾಗಿದೆ. ಕಾರನ್ನು‌ ಮೇಲೆಕ್ಕೆತ್ತುವ ಪ್ರಯತ್ನ‌ ಮಾಡಿದರೂ ವಿಪರೀತ ಮಳೆಯಿಂದಾಗಿ ಕಾರ್ಯಚರಣೆ ಮೊಟಕುಗೊಳಿಸಲಾಗಿತ್ತು.

    ಭಾನುವಾರ ಮುಂಜಾನೆಯಿಂದ ಮತ್ತೆ ಕಾರ್ಯಾಚರಣೆ ಆರಂಭಿಸಿ ಸ್ಥಳೀಯ ಮುಳುಗುತಜ್ಞ ದಿನೇಶ್ ಗಂಗೊಳ್ಳಿ ಮತ್ತವರ ತಂಡ, ಆಪತ್ಭಾಂದವ ಇಬ್ರಾಹಿಂ ಗಂಗೊಳ್ಳಿ‌, ನದೀಮ್ ಮತ್ತವರ ತಂಡ ಹಾಗೂ ಸ್ಥಳೀಯರ ನೆರವಿನಿಂದ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರನ್ನು ಮೇಲಕ್ಕೆತ್ತಲಾಗಿದೆ‌. ಸೀಟ್ ಬೆಲ್ಟ್ ಧರಿಸಿದ್ದ ಸ್ಥಿತಿಯಲ್ಲೇ ವಿರಾಜ್ ಅವರ ಮೃತದೇಹ ಪತ್ತೆಯಾಗಿದೆ‌. ಕಾರಿನಲ್ಲಿದ್ದ ಇನ್ನೋರ್ವ ರೋಶನ್ ಅವರ ಪತ್ತೆ ಕಾರ್ಯ ಮುಂದುವರೆದಿದ್ದು, ಸಮುದ್ರದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗುತ್ತಿದೆ.

    Click here

    Click here

    Click here

    Click Here

    Call us

    Call us

    ಕುಂದಾಪುರದ ಡಿವೈಎಸ್ಪಿ ಶ್ರೀಕಾಂತ್ ಕೆ, ಸರ್ಕಲ್ ಇನ್ಸ್‌ಪೆಕ್ಟರ್ ಸಂತೋಷ್ ಕಾಯ್ಕಿಣಿ, ಗಂಗೊಳ್ಳಿ‌ ಠಾಣಾಧಿಕಾರಿ ವಿನಯ್ ಕುಮಾರ್, ಕುಂದಾಪುರ ಸಂಚಾರಿ ಠಾಣೆಯ ಠಾಣಾಧಿಕಾರಿ ಸುಧಾ ಪ್ರಭು ಸ್ಥಳಕ್ಕೆ ಭೇಟಿ‌ ನೀಡಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    twelve + 11 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.