Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆ: ಕಡಲ ಕೊರೆತ ತಡೆಗೆ ತುರ್ತು ಅನುದಾನ. ಶಾಶ್ವತ ಕಾಮಗಾರಿಗೂ ಯೋಜನೆ – ಸಿಎಂ ಬಸವರಾಜ ಬೊಮ್ಮಾಯಿ
    Uncategorized

    ಮರವಂತೆ: ಕಡಲ ಕೊರೆತ ತಡೆಗೆ ತುರ್ತು ಅನುದಾನ. ಶಾಶ್ವತ ಕಾಮಗಾರಿಗೂ ಯೋಜನೆ – ಸಿಎಂ ಬಸವರಾಜ ಬೊಮ್ಮಾಯಿ

    Updated:13/07/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಮರವಂತೆ ಭಾಗದಲ್ಲಿ ಹೆಚ್ಚುತ್ತಿರುವ ಕಡಲಕೊರೆತವನ್ನು ತಕ್ಷಣಕ್ಕೆ ತಡೆಯುವ ನಿಟ್ಟಿನಲ್ಲಿ ಕೂಡಲೇ ಅನುದಾನ ಬಿಡುಗಡೆಗೊಳಿಸಲಾಗುವುದು ಅಲ್ಲದೇ ಕಡಲಕೊರೆತ ಶಾಶ್ವತ ತಡೆ ಯೋಜನೆಯನ್ನು ಕೂಡ ಜಾರಿಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಹೇಳಿದರು.

    Click Here

    Call us

    Click Here

    ಅವರು ಬುಧವಾರ ಮರವಂತೆಯ ಕಡಲಕೊರೆತದಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಈ ಹಿಂದೆ ಕಡಲಕೊರೆತ ತಡೆಗೆ ಕರಾವಳಿಯ ಕೆಲವು ಭಾಗಗಳಲ್ಲಿ ಸಮರ್ಪಕವಾಗಿ ಕಲ್ಲುಗಳನ್ನು ಹಾಕದಿರುವುದು ಗಮನಕ್ಕೆ ಬಂದಿದೆ. ಹಾಗಾಗಿ ಎಲ್ಲಾ ಭಾಗದಲ್ಲಿಯೂ ಪರಿಶೀಲನೆ ನಡೆಸಿ ಕಳಪೆ ಕಾಮಗಾರಿ ಆಗಿರುವಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು, ಅಗತ್ಯವಿರುವ ಕಡೆಗಳಲ್ಲಿ ಶಾಶ್ವತ ಕಾಮಗಾರಿ ನಡೆಸಲು ಸಂಪೂರ್ಣ ಕಡಲತೀರದ ಡಿಪಿಆರ್ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

    ಮರವಂತೆ ಬಂದರು ಮುಂದುವರಿದ ಕಾಮಗಾರಿಗೆ 84 ಕೋಟಿ ರೂ. ಘೋಷಿಸಲಾಗಿದ್ದು, ಅದನ್ನು ಶೀಘ್ರ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ನೆರೆಹಾವಳಿಯಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಈಗಾಗಲೇ ಪರಿಹಾರ ನೀಡಲು ಸರಕಾರ ಘೋಷಿಸಿದೆ ಎಂದರು.

    ಮರವಂತೆ ಭಾಗದಲ್ಲಿ ಕಡಲಕೊರೆತದಿಂದಾಗಿ ಜನರು ಅನುಭವಿಸುತ್ತಿರುವ ಸಂಕಷ್ಟಗಳ ಬಗ್ಗೆ ಸ್ಥಳೀಯರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.

    ಈ ಸಂದರ್ಭ ಕಂದಾಯ ಸಚಿವ ಆರ್. ಅಶೋಕ್, ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಡಾ. ಮನೋಜ್ ರಾಜನ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ತುರ್ತು 500 ಕೋಟಿ ಬಿಡುಗಡೆ:
    ಇದಕ್ಕೂ ಪೂರ್ವದಲ್ಲಿ ಅವರು ಉಡುಪಿಯಲ್ಲಿ ಮಳೆ ಹಾಗೂ ಹಾಗೂ ಪರಿಹಾರ ಕಾರ್ಯಗಳ ಬಗ್ಗೆ ಕರಾವಳಿ ಜಿಲ್ಲೆಗಳ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಆರ್.ಡಿ.ಪಿ.ಆರ್/ ಲೋಕೋಪಯೋಗಿ ರಸ್ತೆಗಳು , ವಿದ್ಯುತ್, ಸೇತುವೆ ದುರಸ್ತಿಗಾಗಿ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

    ಪುನಃ ಆಗಸ್ಟ್ ನಲ್ಲಿ ಪರಿಶೀಲನೆ ಮಾಡಿ ಅಗತ್ಯಕ್ಕೆ ಅನುಸಾರವಾಗಿ ಹಣ ಬಿಡುಗಡೆ ಮಾಡಲಾಗುವುದು. ಪ್ರವಾಹವನ್ನು ಸಮರೋಪಾದಿಯಲ್ಲಿ ಎದುರಿಸಲು ಅಧಿಕಾರಿಗಳು, ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಜಿಲ್ಲಾಡಳಿತ ಹಾಗೂ ಶಾಸಕರು ಸನ್ನದ್ದರಾಗಿದ್ದೇವೆ. ಜನರ ಸಂಕಷ್ಟ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ಕಳೆದ ವರ್ಷ 14 ಲಕ್ಷ ಹೆಕ್ಟೇರ್ ಗೆ 1600 ಕೋಟಿ ರೂ.ಗಳನ್ನು ರೈತರ ಬೆಳೆಗಳಿಗೆ ಪರಿಹಾರವನ್ನು ಒಂದು ತಿಂಗಳಲ್ಲಿ ಬಿಡುಗಡೆ ಮಾಡಿತ್ತು. ಅದೇ ರೀತಿ ಈ ವರ್ಷವೂ ಕೂಡಲೇ ಹಣ ಬಿಡುಗಡೆ ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

    05/12/2025

    ಕಥೆ ಹೇಳುವ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆಯ ಪ್ರಣತಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    ಹಿಂದಿ ಭಾಷಣ ಸ್ಪರ್ಧೆ: ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d