Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಜ್ಞಾವಂತ ಮತದಾರನಿಂದ ಉತ್ತಮ ನಾಯಕ: ಶಾಸಕ ವೈ.ಎಸ್.ವಿ. ದತ್ತ
    ಊರ್ಮನೆ ಸಮಾಚಾರ

    ಪ್ರಜ್ಞಾವಂತ ಮತದಾರನಿಂದ ಉತ್ತಮ ನಾಯಕ: ಶಾಸಕ ವೈ.ಎಸ್.ವಿ. ದತ್ತ

    Updated:05/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು ಪ್ರಜ್ಞಾವಂತರಾಗಿ ಕಾರ್ಯವೆಸಗಿದರೆ ಉತ್ತಮ ನಾಯಕರನ್ನು ಆರಿಸಲು ಸಾಧ್ಯವಿದೆ. ವ್ಯವಸ್ಥೆ ಸಂಪೂರ್ಣವಾಗಿ ಆರೋಗ್ಯಕರವಾಗಬೇಕಾದಲ್ಲಿ ರಾಜಕಾರಣಿಗಳ ಜೊತೆಗೆ ಮತದಾರರ ಕೊಡುಗೆ ಕೂಡ ಅಮೂಲ್ಯವಾದದು ಎಂದು ಕಡೂರು ಶಾಸಕ ಜೆಡಿಎಸ್ ಧುರೀಣ ವೈ.ಎಸ್.ವಿ.ದತ್ತ ಹೇಳಿದರು.

    Click Here

    Call us

    Click Here

    ಅವರು ಗುಂಡ್ಮಿಯ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಬಹುಮಖಿ ಸಾಲಿಗ್ರಾಮ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಂಸದೀಯ ಪ್ರಜಾಪ್ರಭುತ್ವ ಮತ್ತು ವರ್ತಮಾನ ಪ್ರಸ್ತುತತೆ ಎಂಬ ವಿಷಯ ಕುರಿತು ಉಪನ್ಯಾಸ ನೀಡಿ, ಗಾಂಧಿ ಯುಗ ಅಂತ್ಯವಾಗಿದೆ ಪ್ರಾಮಾಣಿಕವಾಗಿ ರಾಜಕೀಯದಲ್ಲಿರುವ ನಾವು ನೀವು ವಾನಪ್ರಸ್ಥಾಶ್ರಮಕ್ಕೆ ತೆರಳುವ ಸಂದರ್ಭ ಬಂದಿದೆ. ಆದರೆ ನಿರಾಶೆಯಲ್ಲಿಯೂ ಕ್ರಿಯಾಶೀಲತೆಯನ್ನು ನಂಬಿ ಬಂದಿರುವ ನಾನು ವ್ಯವಸ್ಥೆಯ ಬದಲಾವಣೆಯ ಬಗ್ಗೆ ಇನ್ನೂ ಆಶಾವಾದಿಯಾಗಿ ಎದುರು ನೋಡುತ್ತಿದ್ದೇನೆ. ೧೨೧೫ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ ದಿನ ಇಂಗ್ಲೇಂಡ್‌ನ ರಾಜ ಜಾನ್‌ನ ಆಡಳಿತ ವ್ಯವಸ್ಥೆ ವಿರುದ್ಧ ಜನಾದೋಲನವಾಗಿ ಮ್ಯಾಗ್ನಾ ಕಾರ್ಟಾ ನೀಡಿದಾಗ, ಆಡಳಿತ ವ್ಯವಸ್ಥೆ ಜನ ಶಕ್ತಿಯ ಮನವಿಗೆ ಬಾಗಿದ ದಿನವಾಗಿದೆ. ಆದರೆ ಇಂದು ಅಂತಹ ಮನವಿಗಳಿಗೆ ಸೂಕ್ತ ನ್ಯಾಯ ಸಿಗುವ ನಿರೀಕ್ಷೆ ಇರಿಸಿದರೆ ಅದು ಆಶ್ಚರ್ಯವೆನಿಸಿಕೊಳ್ಳುತ್ತದೆ. ನಮ್ಮ ದೇಶದ ಆಡಳಿತ ವ್ಯವಸ್ಥೆಗೆ ಸಂಸದೀಯ ಪ್ರಜಾಪ್ರಭುತ್ವವೇ ಸೂಕ್ತ ಮತ್ತು ಪ್ರಸ್ತುತ. ಆದರೆ ಅದರ ಮೌಲ್ಯವನ್ನು ಕಾಪಾಡಬೇಕಾದ ಅಗತ್ಯತೆ ಇದೆ. ಹಿಂದೆ ರಾಜಕಾರಣಿಗಳಿಗೆ ಜನರ ಬಗ್ಗೆ ಅಂಜಿಕೆ ಇತ್ತು, ಆದರೆ ಇಂದು ಜನರ ವಿಚಾರ ಬಿಡಿ ನಾನಾ ಕಾನೂನು ಕಟ್ಟಲೆಗಳಿದ್ದರೂ ಕೂಡ ಹೆದರಿಕೆ ಇಲ್ಲದಿರುವುದು ಬೇಸರದ ಸಂಗತಿ. ಈ ಹಿನ್ನಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಮಾನದಂಡ ಬದಲಾಗಬೇಕಿದೆ ಅಗತ್ಯತೆ ಇದೆ ಎಂದರು.

    ಕೋಟ ಶ್ರೀ ಅಮೃತೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಆನಂದ ಸಿ.ಕುಂದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.

    ಬಹುಮುಖಿ ಸಾಲಿಗ್ರಾಮದ ಡಾ.ಕೃಷ್ಣ ಕಾಂಚನ್ ಕಾರ್ಯಕ್ರಮ ನಿರೂಪಿಸಿದರು. ಡಾ.ಸೂರ್ಯನಾರಾಯಣ ಉಪಾಧ್ಯ ಸ್ವಾಗತಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಾಗರದ ಸಾಕೇತ ಕಲಾವಿದರಿಂದ ರಾಮ ನಿರ್ಯಾಣ ಯಕ್ಷಗಾನ ಕಾರ್ಯಕ್ರಮ ನಡೆಯಿತು.

    ಅಶ್ವಥ್ ಆಚಾರ್ಯ ಯಡಬೆಟ್ಟು

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    1 + seventeen =

    Call us

    Click Here

    Call us

    Call us

    Call us
    Highest Viewed Recently
    • ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.