Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಪದಕ ವಿಜೇತ ಗುರುರಾಜ ಪೂಜಾರಿಗೆ ಜಿಲ್ಲಾಡಳಿತ ಗೌರವ, ಹುಟ್ಟೂರಲ್ಲಿ ಸ್ವಾಗತ
    ಉಡುಪಿ ಜಿಲ್ಲೆ

    ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಪದಕ ವಿಜೇತ ಗುರುರಾಜ ಪೂಜಾರಿಗೆ ಜಿಲ್ಲಾಡಳಿತ ಗೌರವ, ಹುಟ್ಟೂರಲ್ಲಿ ಸ್ವಾಗತ

    Updated:07/08/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಆ.7:
    ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ವೇಯ್ಟ್ ಲಿಪ್ಟಿಂಗ್ ಸ್ಪರ್ದೆಯಲ್ಲಿ ಕಂಚಿನ ಪದಕ ಪಡೆದು, ಹುಟ್ಟೂರಿಗೆ ಮರಳಿದ ಗುರುರಾಜ ಪೂಜಾರಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದ ಬಳಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

    Click Here

    Call us

    Click Here

    ನಂತರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಪೌರಾಯುಕ್ತ ಡಾ. ಉದಯ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಗುರುರಾಜ ಪೂಜಾರಿ ಅವರನ್ನು ಸನ್ಮಾನಿಸಿದರು.

    ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅವಧಿಯಲ್ಲಿ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಪದಕ ಪಡೆಯುವ ಮೂಲಕ ಗುರುರಾಜ ಪೂಜಾರಿ ಅವರು ಉಡುಪಿ ಜಿಲ್ಲೆಯ ಸಂಭ್ರಮವನ್ನು ಹೆಚ್ಚಿಸಿದ್ದು, ದೇಶದಲ್ಲಿ ಜಿಲ್ಲೆಯ ಹೆಸರನ್ನು ಪ್ರಖ್ಯಾತಗೊಳಿಸಿದ್ದಾರೆ. ಗ್ರಾಮೀಣ ಪ್ರದೇಶದ ಪ್ರತಿಭೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಹ ಉನ್ನತ ಸಾಧನೆಗಳನ್ನು ಮಾಡಲು ಸಾಧ್ಯ ಎಂಬುದನ್ನು ತೋರಿಸಿಕೊಟ್ಟಿರುವ ಇವರ ಸಾಧನೆ ಜಿಲ್ಲೆಯ ಯುವಜನತೆಗೆ ಹಾಗೂ ಕ್ರೀಡಾಪಟುಗಳಿಗೆ ಸದಾ ಸ್ಪೂರ್ತಿಯಾಗಿದೆ . ಜಿಲ್ಲೆಯಲ್ಲಿ ಉತ್ತಮ ಕ್ರೀಡಾಂಗಣ ಹಾಗೂ ಕ್ರೀಡಾ ಸೌಲಭ್ಯಗಳಿದ್ದು ಕ್ರೀಡಾಪಟುಗಳು ಈ ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಸಾಧನೆ ಮಾಡಬೇಕು ಎಂದರು.

    ಜಿಲ್ಲಾಡಳಿತದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಗುರುರಾಜ ಪೂಜಾರಿ, ಈ ಬಾರಿಯ ಕಾಮನ್ ವೆಲ್ಸ್ ಗೇಮ್ಸ್ ನಲ್ಲಿ ರಜತ ಪಡೆಯುವ ಗುರಿಯಿಂದ 4 ವರ್ಷಗಳಿಂದ ಕಠಿಣ ಪರಿಶ್ರಮ ಪಟ್ಟಿದ್ದು, ಬರ್ಮಿಂಗ್ ಹ್ಯಾಂ ಗೆ ತೆರಳಿದ ನಂತರ ಅನಾರೋಗÀ್ಯ ಸಮಸ್ಯೆ ತಲೆದೋರಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸುವುದೇ ಅನುಮಾನವಾಗಿತ್ತು ಆದರೆ ಕೋಚ್ ನ ಮಾರ್ಗದರ್ಶನ , ಆತ್ಮ ವಿಶ್ವಾಸ ಮತ್ತು ಎಲ್ಲರ ಹಾರೈಕೆಯಿಂದ ಗುಣಮುಖನಾಗಿ ಸ್ಪರ್ದೇಯಲ್ಲಿ ಭಾಗವಹಿಸಿ , ತೀವ್ರ ಪೈಪೋಟಿಯ ನಡುವೆ ಕಂಚಿನ ಪದಕ ಪಡೆದು, ವೇಯ್ಟ್ ಲಿಪ್ಟಿಂಗ್ ನ 61 ಕೆಜಿ ವಿಭಾಗದಲ್ಲಿ ದೇಶಕ್ಕೆ ಇದೇ ಮೊದಲ ಬಾರಿಗೆ ಪದಕ ಪಡೆದ ಇತಿಹಾಸ ಸೃಷ್ಠಿಸಲು ಸಾಧ್ಯವಾಯಿತು. ನನ್ನ ಈ ಸಾಧನೆಗೆ ಪ್ರೋತ್ಸಾಹ ನೀಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ ಅವರು, ಕಳೆದ ಬಾರಿಯ ಕಾಮನ್ ವೆಲ್ಸ್ ಗೇಮ್ಸ್ ನಲ್ಲಿ ಪದಕ ಪಡೆದಾಗಲೂ ಸಹ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಜನತೆ ನೀಡಿದ ಗೌರವವನ್ನು ನೆನಪು ಮಾಡಿಕೊಂಡರು. ಕ್ರೀಡಾಪಟುಗಳು ನಿರ್ದಿಷ್ಟ ಗುರಿಯೊಂದಿಗೆ ಕಠಿಣ ಪರಿಶ್ರಮ ಪಟ್ಟರೆ ಉನ್ನತ ಸಾಧನೆಗಳನ್ನು ಮಾಡಲು ಸಾಧ್ಯ ಎಂದರು.

    ಕಾರ್ಯಕ್ರಮದಲ್ಲಿ ಗುರುರಾಜ ಪೂಜಾರಿ ಅವರ ತಂದೆ, ಪತ್ನಿ , ಅಜ್ಜರಕಾಡು ಕ್ರೀಡಾ ವಸತಿ ಶಾಲೆಯ ಕ್ರೀಡಾಪಟುಗಳು, ನೇಷನ್ ಫಸ್ಟ್ ತಂಡದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ತಲ್ಲೂರಿನಲ್ಲಿ ಸ್ವಾಗತ, ಶಾಸಕರಿಂದ ಸನ್ಮಾನ:
    ಪದಕ ಗೆದ್ದು ಹುಟ್ಟೂರಿಗೆ ಮರಳಿಗೆ ಗುರುರಾಜ ಪೂಜಾರಿ ಅವರನ್ನು ತಲ್ಲೂರಿನಲ್ಲಿ ಸ್ವಾಗತಿಸಿ ವಂಡ್ಸೆಗೆ ಕರೆಯೊಯ್ಯಲಾಯಿತು. ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ತಮ್ಮ ನಿವಾಸದಲ್ಲಿ ಗುರುರಾಜ ಪೂಜಾರಿಯವರನ್ನು ಸನ್ಮಾನಿಸಿಸಿದರು. ಈ ಸಂದರ್ಭ ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಗೋಪಾಲ ನಾಡ, ರಮೇಶ ಪೂಜಾರಿ, ರೋಹಿತ್ ಕುಮಾರ್ ಶೆಟ್ಟಿ ಸೇರಿದಂತೆ ವಿವಿಧ ಮುಖಂಡರು ಇದ್ದರು.

    ಕುಂದಾಪುರದಲ್ಲಿ ಸನ್ಮಾನ:
    ಕುಂದಾಪುರದ ನ್ಯೂ ಹರ್ಕೂಲೆನ್ ಜಿಮ್’ನಲ್ಲಿ ಗುರುರಾಜ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಕುಂದಾಪುರದ ನ್ಯೂ ಹರ್ಕೂಲೆನ್ ಜಿಮ್ ಮಾಲಿಕ ಸತೀಶ್ ಖಾರ್ವಿ, ನ್ಯಾಯವಾದಿ ರವಿಕಿರಣ ಮುರ್ಡೇಶ್ವರ್, ಕಲಾಕ್ಷೇತ್ರ ಕುಂದಾಪುರದ ಕಿಶೋರ್ ಕುಮಾರ್ ಕುಂದಾಪುರ, ರಾಜೇಶ್ ಕಾವೇರಿ, ದೈಹಿಕ ಶಿಕ್ಷಣ ನಿರ್ದೇಶಕ ಸುಕೇಶ್ ಶೆಟ್ಟಿ, ಶಿಕ್ಷಕ ಸಚಿನ್ ಶೆಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ಇದನ್ನೂ ಓದಿ:
    ► ಕಾಮನ್ ವೆಲ್ತ್ ಕ್ರೀಡಾಕೂಟ: ವೆಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಗುರುರಾಜ ಪೂಜಾರಿಗೆ ಕಂಚು – https://kundapraa.com/?p=61063 .
    ► ಕುಂದಾಪುರ ಚಿತ್ತೂರಿನ ಗುರುರಾಜ್ ಪೂಜಾರಿಗೆ ಏಕಲವ್ಯ ಪ್ರಶಸ್ತಿ – https://kundapraa.com/?p=27689 .
    ► ಕಾಮನ್ವೆಲ್ತ್ ಗೇಮ್ಸ್: ವೆಯ್ಟ್ ಲಿಫ್ಟಿಂಗ್’ನಲ್ಲಿ ಬೆಳ್ಳಿ ಗೆದ್ದ ಕುಂದಾಪುರದ ಗುರುರಾಜ್ ಪೂಜಾರಿ – https://kundapraa.com/?p=28094 .
    ► ಕಾಮನ್‌ವೆಲ್ತ್ ವೇಯ್ಟ್ ಲಿಫ್ಟಿಂಗ್: ಕುಂದಾಪುರ ಗುರುರಾಜ್ ಪೂಜಾರಿಗೆ ಚಿನ್ನ – https://kundapraa.com/?p=18493 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    4 − 2 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.