ಕುಂದಾಪುರ: ಇತ್ತಿಚಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ಜಿಲ್ಲೆ ಇವರ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಹಿರಿಯಡ್ಕ ಇಲ್ಲಿ ನಡೆದ ಜಿಲ್ಲಾ ಮಟ್ಟ ವಾಲಿಬಾಲ್ ಪಂದ್ಯಾಟದಲ್ಲಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಕೋಡಿ ಪ್ರಥಮ ಸ್ಥಾನ ಗಳಿಸಿದೆ. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಹಾಜಿ ಮಾಸ್ಟರ್ ಮೆಹಮೂದ್, ನಿರ್ದೇಶಕರಾದ ಪ್ರೊ.ಚಂದ್ರಶೇಖರ ದೋಮ ಹಾಗೂ ಮುಖ್ಯೋಪಾಧ್ಯಾಯರಾದ ಶ್ರೀ ರವೀಂದ್ರ ಹಾಗೂ ದೈಹಿಕ ಶಿಕ್ಷಕರಾದ ಜೆಫ್ ಸನ್ನಿ ಡಿಸೋಜ ಶುಭ ಹಾರೈಸಿದರು.
ಸುನಿಲ್ ಹೆಚ್. ಜಿ. ಬೈಂದೂರು
ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.





