ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಬಾಲಕಿಯರು ಪ್ರಥಮ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ರತ್ತೂಬಾಯಿ ಜನತಾ ಪ್ರೌಢಶಾಲೆ ಬೈಂದೂರು ಆಶ್ರಯದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ಬಾಲಕಿಯರ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಬಿದ್ಕಲ್ಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

Call us

Click Here

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು , ಬೋಧಕ, ಬೋಧಕೇತರ ವೃಂದದವರು ಮತ್ತು ಹಳೆ ವಿದ್ಯಾರ್ಥಿಗಳು ಮತ್ತು ಊರವರು ಅಭಿನಂದನೆ ಸಲ್ಲಿಸಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.

ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ವಿವಿವಿ ಮಂಡಳಿ ಉಪಾಧ್ಯಕ್ಷ ಎಸ್. ರಾಜು ಪೂಜಾರಿ ಅವರು ವಿಜೇತರಿಗೆ ಬಹುಮಾನ ವಿತರಿಸಿದರು. ಈ ವೇಳೆ ಉಡುಪಿ ಅರಣ್ಯ ಸಂಚಾರಿದಳದ ಎಸಿಎಫ್ ಶ್ರೀಧರ ಪಿ., ಉದ್ಯಮಿಗಳಾದ ವೆಂಟರಮಣ ಬಿಜೂರು, ಕೃಷ್ಣಯ್ಯ ಮದ್ದೋಡಿ, ಕ್ಷೇತ್ರ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ಚಂದ್ರಶೇಖರ ಶೆಟಿ, ಶ್ರೀ ವಿ.ವಿ.ವಿ. ಮಂಡಳಿ ನಿರ್ದೇಶಕರಾದ ಕೆ. ರಘುರಾಮ ಪೂಜಾರಿ, ರತ್ತೂಬಾಯಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಮಂಜು ಕಾಳವಾರ, ಆನಂದ ಮದ್ದೋಡಿ, ಪೋಷಕ ಪ್ರತಿನಿಧಿ ರವೀಂದ್ರ ಶ್ಯಾನುಭಾಗ್, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗುರುರಾಜ ಎಸ್. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply