Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ: ಹಿರಿಯ ಶಿಲ್ಪಿ ರತ್ನಾಕರ ಎಸ್. ಗುಡಿಗಾರ್ ಅವರಿಗೆ ಶಿಲ್ಪಕಲಾ ಅಕಾಡೆಮಿಯ ಗೌರವ ಪ್ರಶಸ್ತಿ
    ಊರ್ಮನೆ ಸಮಾಚಾರ

    ಉಪ್ಪುಂದ: ಹಿರಿಯ ಶಿಲ್ಪಿ ರತ್ನಾಕರ ಎಸ್. ಗುಡಿಗಾರ್ ಅವರಿಗೆ ಶಿಲ್ಪಕಲಾ ಅಕಾಡೆಮಿಯ ಗೌರವ ಪ್ರಶಸ್ತಿ

    Updated:30/08/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ನೂರಾರು ದೈವ ದೇವರುಗಳಿಗೆ ಮೂರ್ತರೂಪ ನೀಡಿದ ಹಿರಿಯ ಶಿಲ್ಪಿ ಉಪ್ಪುಂದದ ರತ್ನಾಕರ ಎಸ್. ಗುಡಿಗಾರ್ ಅವರು ಅವರಿಗೆ 2021ನೇ ಸಾಲಿನ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ಉಪ್ಪುಂದ ನ್ಯೂ ಜನತಾ ಕಾಲೋನಿ ನಿವಾಸಿಯಾಗಿರುವ ರತ್ನಾಕರ ಗುಡಿಗಾರ್ ಅವರು ಕಳೆದ 60 ವರ್ಷಗಳಿಂದ ವಂಶಪಾರಂಪರ್ಯವಾಗಿ ಬಂದ ಮರದಿಂದ ದೇವರ ಮೂರ್ತಿ ಕೆತ್ತನೆ ಕಾಯಕವನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ತಮ್ಮ 84 ವರ್ಷದ ವಯಸ್ಸಿನಲ್ಲಿಯೂ ಸೇವಾ ಕಾರ್ಯವನ್ನು ಮುಂದುವರಿಸಿರುವ ಗುಡಿಗಾರರು, ವರ್ಷಕ್ಕೆ 150ಕ್ಕೂ ಹೆಚ್ಚು ದೇವರ ಮೂರ್ತಿ ಕೆತ್ತನೆ ಮಾಡುತ್ತಿದ್ದಾರೆ. ದೆಹಲಿ, ಭೂಪಾಲ್, ಚೆನೈ ಹಾಗೂ ರಾಜ್ಯದ ವಿವಿಧೆಡೆ ಇವರ ಕೆತ್ತನೆಯ ಮೂರ್ತಿಗಳು ಪೂಜಿಸಲ್ಪಡುತ್ತಿದೆ. ಉಡುಪಿ ಜಿಲ್ಲೆಯ ನೂರಾರು ದೈವಸ್ಥಾನಗಳ ದೇವರ ಮೂರ್ತಿಯನ್ನು ಕೆತ್ತನೆ ಮಾಡಿ ಪ್ರಸಿದ್ಧಿ ಪಡೆದಿದ್ದಾರೆ. ಒಂದು ಅಡಿಯಿಂದ 28 ಅಡಿಯ ತನಕದ ಮೂರ್ತಿಯನ್ನು ಅವರು ಕೆತ್ತನೆ ಮಾಡಿದ್ದಾರೆ.

    ರತ್ನಾಕರ ಗುಡಿಗಾರ ಸೇವೆಯನ್ನು ಗುರುತಿಸಿ ಸಾಂಪ್ರದಾಯಿಕ ಶಿಲ್ಪ ವಿಭಾಗದಲ್ಲಿ ಗೌವರ ಪ್ರಶಸ್ತಿಗೆ ಆಯ್ಕೆಮಾಡಲಾಗಿದ್ದು, ಪ್ರಶಸ್ತಿಯು ರೂ.50,000 ಮೊತ್ತು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

    ವಿವಿಧ ಸಂಘಟನೆಗಳಿಂದ ಸನ್ಮಾನ

    ರತ್ನಾಕರ ಎಸ್. ಗುಡಿಗಾರ್ ಅವರು ಅವರಿಗೆ 2021ನೇ ಸಾಲಿನ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಗೌರವ ಪ್ರಶಸ್ತಿಗೆ ಭಾಜನರಾಗಿರುವುದನ್ನು ಗುರುತಿಸಿ ಶ್ರೀ ಮಹಾದೇವ ಸಾಂಸ್ಕ್ರತಿಕ ಪ್ರತಿಷ್ಟಾನ ಮಕ್ಕಿ ದೇವಸ್ಥಾನ ಹಾಗೂ ಮಕ್ಕಿ ದೇವಸ್ಥಾನ ಗೆಳೆಯರ ಬಳಗದಿಂದ ಸನ್ಮಾನಿಸಲಾಯಿತು. ಮಕ್ಕಿದೇವಸ್ಥಾನದ ನಾಗರಾಜ ಭಟ್ಟ ಸನ್ಮಾನ ನೆರವೇರಿಸಿದರು. ಈ ಸಂದರ್ಭ ಅನಂತ ಭಟ್ಟ, ಉಮೇಶ ಆಚಾರ್ಯ, ಸಂತೋಷ್ ಕಾಡಿನತಾರು, ವಿಘ್ನೇಶ್ವರ, ಅಭಿಷೇಕ್, ನಾಗರಾಜ ಶೆಟ್ಟಿ, ಪ್ರಣವ ಭಟ್ ಮೊದಲಾದವರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ರತ್ನಾಕರ ಎಸ್. ಗುಡಿಗಾರ್ ಅವರು ಪ್ರಶಸ್ತಿಗೆ ಆಯ್ಕೆಯಾಗಿರುವುದನ್ನು ಗುರುತಿಸಿ ಉಪ್ಪುಂದ ಸಾರ್ವಜನಿಕರು ಸನ್ಮಾನಿಸಿದ್ದಾರೆ. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್. ಮದನ್ ಕುಮಾರ್, ಉಪ್ಪುಂದ ಗ್ರಾಮ ಪಂಚಾಯತ್ ಸದಸ್ಯರುಗಳಾದ ಶೇಖರ್ ಪೂಜಾರಿ ಹಾಗೂ ಪ್ರಕಾಶ್ ಆಚಾರ್ಯ, ಬಾಬು ಗಾಣಿಗ, ಉದಯ ಪೂಜಾರಿ, ಮಂಜುನಾಥ ಆಚಾರ್ಯ, ಗಣಪತಿ ಆಚಾರ್ಯ, ಕೃಷ್ಣ ಗುಡಿಗಾರ್, ಆನಂದ ಪುತ್ರನ್ ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟದ ಪಂಚವರ್ಣದಿಂದ ಸಾಲುಮರದ ತಿಮ್ಮಕ್ಕನಿಗೆ ನುಡಿನಮನ

    15/11/2025

    ಕುಂದಾಪುರ ಆರ್.ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ

    15/11/2025

    ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯ ಸಂಭ್ರಮ

    15/11/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಟದ ಪಂಚವರ್ಣದಿಂದ ಸಾಲುಮರದ ತಿಮ್ಮಕ್ಕನಿಗೆ ನುಡಿನಮನ
    • ಸರಸ್ವತಿ ವಿದ್ಯಾಲಯದಲ್ಲಿ ಸಿ.ಎ ಪ್ರಶಿಕ್ಷಣಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮ 
    • ಕುಂದಾಪುರ ಆರ್.ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ
    • ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯ ಸಂಭ್ರಮ
    • ವಿದ್ಯಾರ್ಥಿಗಳು ಸಂಸ್ಕಾರಯುತ ಬದುಕು ರೂಪಿಸಿಕೊಳ್ಳಿ: ಆರ್‌ಜೆ ನಯನಾ ಶೆಟ್ಟಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d