ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ: ಪ್ರೌಢಶಾಲಾ ವಿಭಾಗದಲ್ಲಿ ರವೀಂದ್ರ ಪಿ. ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಬೈಂದೂರು ತಾಲೂಕಿನ ಪ್ರೌಢಶಾಲಾ ವಿಭಾಗದಲ್ಲಿ ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಹಿಂದಿ ಶಿಕ್ಷಕ ರವೀಂದ್ರ ಪಿ. ಬೈಂದೂರು ಆಯ್ಕೆಯಾಗಿದ್ದಾರೆ.

Call us

Click Here

ಹಿಂದಿ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ರವೀಂದ್ರ ಅವರು ಈತನಕ ವಿದ್ಯಾರ್ಥಿಗಳ ಸುಲಭ ಕಲಿಕೆಗಾಗಿ ಐದು ವ್ಯಾಕರಣ ಸಂಬಂಧಿ ಪುಸ್ತಕಗಳನ್ನು ಬರೆದು ಪ್ರಕಟಿಸಿದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿರುವ ಅವರು ಈವರೆಗೆ ಭಕ್ತಿಗೀತೆ, ಭಾವಗೀತೆ, ಪರಿಸರ ಸಂಬಂಧಿತ ಗೀತೆಗಳನ್ನು ರಚಿಸಿ ಧ್ವನಿ ಸುರುಳಿಗಳನ್ನು ಬಿಡುಗಡೆ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Leave a Reply