Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಮಾವೇಶ
    ಊರ್ಮನೆ ಸಮಾಚಾರ

    ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಮಾವೇಶ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕೋಟ: ಶೈಕ್ಷಣಿಕವಾಗಿ ವರ್ಷವು ಉತ್ತಮ ಫಲಿತಾಂಶವನ್ನು ನೀಡುತ್ತಿರುವ ಉಡುಪಿ ಜಿಲ್ಲೆಯನ್ನು ಹೊರ ಜಿಲ್ಲೆಯವರು ಬುದ್ಧಿವಂತ ಜಿಲ್ಲೆ ಎಂದು ಸಹಜವಾಗಿ ಕರೆಯುತ್ತಾರೆ. ಮುಂದುವರಿದ ಜಿಲ್ಲೆ ಬುದ್ಧಿವಂತರ ಜಿಲ್ಲೆ ಎಂದು ಕರೆಯಿಸಿ ಕೊಳ್ಳುತ್ತಾ, ವಿವಿಧ ಅಭಿವೃದ್ಧಿ ಪರ ಯೋಜನೆಯಿಂದ ವಂಚಿತರಾಗುತ್ತಾ ನಾವು ಹಿಂದೆ ಬರುತ್ತಿರುವ ಬಗ್ಗೆ ಗಮನ ಹರಿಸಿಲ್ಲ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಅವರು ಕೋಟ ಕಾರಂತ ಥೀಂ ಪಾರ್ಕನಲ್ಲಿ ಕಾರಂತ ಹುಟ್ಟೂರ ಪ್ರಶಸ್ತಿ ಪ್ರಧಾನ ಸಮಾರಂಭ ಅಂಗವಾಗಿ ಕರ್ನಾಟಕ ರಾಜ್ಯ ಪ್ರೌಢಶಾಲಾಸಹಶಿಕ್ಷಕರ ಸಂಘ ಉಡುಪಿ ಜಿಲ್ಲಾ ಘಟಕ, ಗೀತಾನಂದ ಫೌಂಡೇಶನ್ ಮಣೂರು ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಮಾವೇಶ ಪ್ರೇರಣ ಜ್ಞಾನದ ಪ್ರತಿಬಿಂಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡುತ್ತಾ, ಶಿಕ್ಷಣ ಕ್ಷೇತ್ರದ ಸಮಸ್ಯೆ ಅಗಾಧವಾದದ್ದು, ಅದರಲ್ಲಿ ಶಿಕ್ಷಕರ ಮತ್ತು ಶಿಕ್ಷಣದ ಸಮಸ್ಯೆ ಪ್ರತ್ಯೇಕವಾಗಿ ಗಮನಿಸಿದರೆ ಸಾಕಷ್ಟು ಸಮಸ್ಯೆಗಳನ್ನು ಕಾಣಬಹುದು. ರಾಜ್ಯದ ೪೮ ಸಾವಿರ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸುಮಾರು 10 ಸಾವಿರ ಶಾಲೆಯಲ್ಲಿ ಸೂಕ್ತ ಶೌಚಾಲಯದ ವ್ಯವಸ್ಥೆ ಸಮರ್ಪಕವಾಗಿಲ್ಲ. ಈ ನಿಟ್ಟಿನಲ್ಲಿ ವಾಸ್ತವಿಕ ನೆಲೆಗಟ್ಟಿನಲ್ಲಿ ಸಮಸ್ಯೆಗಳ ಸಮಾಲೋಚನೆ ನಡೆಸಿ ಪರಿಹಾರ ಕಂಡು ಕೊಳ್ಳಬೇಕಾಗಿದೆ. ಇಂದು ನಮ್ಮನ್ನು ಕಾಡುತ್ತಿರುವ ಅತ್ಯಂತ ದೊಡ್ಡ ಸಮಸ್ಯೆ ಮಾದಕ ದ್ರವ್ಯಗಳ ವ್ಯಸನ ಮತ್ತು ಭಯೋತ್ಪಾದನೆ. ವರ್ಷವು ಮಾದಕ ದ್ರವ್ಯ ವ್ಯವಸನ ನಿವಾರಣೆಗೆ ಒಂದುವರೆ ಲಕ್ಷ ಕೋಟಿ ಖರ್ಚು ಮಾಡಲಾಗುತ್ತಿದೆ. ಅಪರಾಧ ಪ್ರಕರಣಗಳು ಕೂಡ ಹೆಚ್ಚುತ್ತಿದ್ದು, 68 ಶೇಕಡಾ ಅಪರಾಧಿಗಳು ನಮ್ಮ ಯುವಕರು ಎನ್ನುವುದು ಒಂದೆಡೆಯಾದರೆ ಅವರನ್ನು ೯೦ಶೇಕಡಾ ಜನ ವಿದ್ಯಾವಂತರು ಎನ್ನುವುದು ನೋವಿನ ವಿಚಾರವಾಗಿದೆ. ಶಿಕ್ಷಕರೇಲ್ಲರೂ ಮುಂದಿನ ದಿನಗಳಲ್ಲಿ ರಾಷ್ಟ್ರಪ್ರೇಮಿ ನಾಗರೀಕರನ್ನು ಸೃಷ್ಟಿಸಬೇಕಾದ ಅಗತ್ಯತೆ ಇದೆ ಎಂದರು.

    ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ದಿವಾಕರ ಶೆಟ್ಟಿ ಉದ್ಘಾಟಿಸಿದರು. ಅವರು ಮಾತನಾಡಿ ಶಿಕ್ಷಕರ ನಿರಂತರ ಶ್ರಮ ಮತ್ತು ಕಠಿಣ ಪರಿಶ್ರಮ ನಮ್ಮನ್ನು ಇಂದು ಶಿಕ್ಷಣ ಕ್ಷೇತ್ರದಲ್ಲಿ ಪ್ರಥಮ ಸ್ಥಾನಕ್ಕೆ ತಂದಿದೆ. ನಮ್ಮ ಮುಂದಿನ ಗುರಿ 65 ಶೇಕಡಾ ಫಲಿತಾಂಶ ದಾಖಲಿಸುವುದಾಗಿದೆ. ಗುಣಮಟ್ಟದ ಶಿಕ್ಷಣದ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುವುದು ಎಂದರು.

    ಕೋಟತಟ್ಟು ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಹಂದೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ನಿವೃತ್ತ ಶಿಕ್ಷಕ ವಿಠ್ಠಲ ವಿ.ಗಾಂವ್ಕರ್, ನಿವೃತ್ತ ಶಿಕ್ಷಕ ಚಂದ್ರ ಶೇಖರ ಅಡಿಗ, ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಅಶೋಕ ಕುಮಾರ್ ಶೆಟ್ಟಿ, ಗೋಕಾಕ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳೇಗಾರ್ ಉಪಸ್ಥಿತರಿದ್ದರು. ಇದೇ ಸಂದರ್ಭ ಉಡುಪಿ ಜಿಲ್ಲಾ ಕಸಾಪ ಪ್ರಕಟಿಸಿದ ಪುಸ್ತಕಗಳನ್ನು ಉಚಿತವಾಗಿ ಪ್ರೌಢಶಾಲೆಗಳಿಗೆ ವಿತರಿಸಲಾಯಿತು.

    ಶಿಕ್ಷಕ ಪ್ರೇಮಾನಂದ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕ ಕಿರಣ ಹೆಗ್ಡೆ ಸ್ವಾಗತಿಸಿ ಪ್ರಸ್ತಾವಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಶಿಕ್ಷಕರು ಬಹು ಸಂಖ್ಯೆಯಲ್ಲಿ ಭಾಗವಹಿಸಿದರು.DSC_0136

    Click here

    Click here

    Click here

    Call us

    Call us

    Karantha Theme park
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    seven − 2 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.