Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಲದ ಆಘಾತ ತಡೆದು ನಿಂತ ಸತ್ವಭರಿತ ಕಲೆ ಯಕ್ಷಗಾನ: ಗೃಹ ಸಚಿವ ಅರಗ ಜ್ಞಾನೇಂದ್ರ
    ಊರ್ಮನೆ ಸಮಾಚಾರ

    ಕಾಲದ ಆಘಾತ ತಡೆದು ನಿಂತ ಸತ್ವಭರಿತ ಕಲೆ ಯಕ್ಷಗಾನ: ಗೃಹ ಸಚಿವ ಅರಗ ಜ್ಞಾನೇಂದ್ರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ನಾಗೂರಿನಲ್ಲಿ ಯಕ್ಷಗಾನ ತಾಳಮದ್ದಲೆ ಸಪ್ತಾಹ ಉದ್ಘಾಟಿಸಿ ಅಭಿಮತ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಯಕ್ಷಗಾನ, ತಾಳಮದ್ದಲೆಯಂತಹ ಹತ್ತಾರು ಕಲಾ ಪ್ರಾಕಾರಗಳು ಸಾಂಸ್ಕೃತಿಕ ತಳಹದಿಯಲ್ಲಿ ಬೆಳೆದು ಬಂದಿದೆ. ಕಾಲದ ಆಘಾತಗಳನ್ನು ತಡೆದು ನಿಲ್ಲುವ ಶಕ್ತಿ ಸತ್ವಭರಿತ ಕಲೆಯಾದ ಯಕ್ಷಗಾನಕ್ಕಿದೆ ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

    ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಪ್ರಸ್ತುತಿಯಲ್ಲಿ ಕಿರಿಮಂಜೇಶ್ವರ-ನಾಗೂರು ಸುತ್ತಲಿನ ನಾಗರಿಕರ ಸಹಯೋಗದಲ್ಲಿ ನಾಗೂರು ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದ ಕೋಟ ವೈಕುಂಠ ನಾಯ್ಕರ ಸ್ಮರಣ ವೇದಿಕೆಯಲ್ಲಿ ನಡೆದ ೮ನೇ ವರ್ಷದ ಯಕ್ಷಗಾನ ತಾಳಮದ್ದಲೆ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.

    ಹಿಂದಿನ ಪರಂಪರೆಯ ಪ್ರದರ್ಶನಗಳಿಗೆ ಹೋಲಿಸಿದಾಗ ಈಗಿನವು ಅಂತ:ಸತ್ವ ಕಳೆದುಕೊಂಡಿವೆ ಎಂಬ ಟೀಕೆ ಇದೆ. ಯಕ್ಷಗಾನ ತಾಳಮದ್ದಲೆ ಪುರಾಣಗಳನ್ನು ಪ್ರತಿಪಾದಿಸುವ ತತ್ವಾದರ್ಶಗಳನ್ನು ತೆರೆದಿಡುತ್ತದೆ. ಪುರಾಣಗಳ ಮರು ಅವಲೋಕನ ಮತ್ತು ಮರುಸೃಷ್ಟಿಯ ಮೂಲಕ ಅವುಗಳಲ್ಲಿ ಸಮಕಾಲೀನ ಸನ್ನಿವೇಶಗಳಿಗೆ ಮತ್ತು ಬದುಕಿಗೆ ಅನ್ವಯವಾಗುವ ವಿಚಾರಗಳನ್ನು ಹೊರಗೆಡವಲಾಗುತ್ತದೆ. ಆದುದರಿಂದ ಅದು ನಿಜ ಅರ್ಥದಲ್ಲಿ ಒಂದು ಜ್ಞಾನಯಜ್ಞವಾಗಿದೆ ಎಂದರು.

    ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲಾಪೋಷಕರು ಹಾಗೂ ಪ್ರೇಕ್ಷಕರು ಕಲೆ ಮತ್ತು ಕಲಾವಿದರ ಹಿಂದಿರುವ ದೊಡ್ಡಶಕ್ತಿ. ಸಾಂಸ್ಕೃತಿಕ ಅಭಿರುಚಿ, ಅಭಿಮಾನ ಹಾಗೂ ಹಿರಿಯರ ಸನ್ನಡತೆಯ ಸಹಕಾರದಿಂದ ಸತತ ಎಂಟು ವರ್ಷಗಳಿಂದ ಆಚರಿಸುತ್ತಾ ಬಂದಿರುವ ಯಕ್ಷಗಾನ ತಾಳಮದ್ದಲೆ ಸಪ್ತಾಹ ಪರಿಸರದ ಕಲಾಸಕ್ತರ ಮನಮುಟ್ಟುವಲ್ಲಿ ಯಶಸ್ಸು ಕಂಡಿರುವುದು ಕಲಾಕೃಷಿಯ ಸಾರ್ಥಕತೆಯನ್ನು ಬಿಂಬಿಸುತ್ತದೆ ಎಂದರು.

    Click here

    Click here

    Click here

    Click Here

    Call us

    Call us

    ನಿವೃತ್ತ ಯಕ್ಷಗಾನದ ಖ್ಯಾತ ಸ್ತ್ರೀವೇಷಧಾರಿ ದಯಾನಂದ ಬಳೆಗಾರ್ ದಂಪತಿಯನ್ನು ಸಚಿವರು ತೆಕ್ಕಟ್ಟೆ ಆನಂದ ಮಾಸ್ತರ್ ನೆನಪಿನ ಕಲಾತಪಸ್ವಿ ಪ್ರಶಸ್ತಿ ಪ್ರದಾನಿಸಿ ಗೌರವಿಸಿದರು. ಟ್ರಸ್ಟ್ ವತಿಯಿಂದ ಗೃಹಸಚಿವರನ್ನು ಸನ್ಮಾನಿಸಲಾಯಿತು.

    ಉದ್ಯಮಿ ಉಮೇಶ ಕೋಟ ವೈಕುಂಠ ನಾಯ್ಕ್, ಅರ್ಥಧಾರಿ ಉಜಿರೆ ಅಶೋಖ ಭಟ್, ಸುನಂದಾ ಆನಂದರಾಯ ಶ್ಯಾನುಭಾಗ್ ಉಪಸ್ಥಿತರಿದ್ದರು. ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಸ್ವಾಗತಿಸಿ ಪ್ರಾಸ್ತಾವಿಸಿದರು. ಗೋವಿಂದ ಎಂ. ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    18 + 9 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.