Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಸಾಪಗೆ ನೂರರ ಸಂಭ್ರಮ: ನಾಗೂರಿನಲ್ಲಿ ಎರಡು ದಿನಗಳ ಕನ್ನಡ ವರ್ಷಾಚರಣೆಗೆ ಚಾಲನೆ
    ಊರ್ಮನೆ ಸಮಾಚಾರ

    ಕಸಾಪಗೆ ನೂರರ ಸಂಭ್ರಮ: ನಾಗೂರಿನಲ್ಲಿ ಎರಡು ದಿನಗಳ ಕನ್ನಡ ವರ್ಷಾಚರಣೆಗೆ ಚಾಲನೆ

    Updated:08/10/20151 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕನ್ನಡ ಕೃತಿಗಳಿಗೆ ನೋಬೆಲ್ ಪ್ರಶಸ್ತಿ ಪಡೆಯುವ ಅರ್ಹತೆ ಇದೆ: ಡಾ. ಯು.ಪಿ.ಉಪಾಧ್ಯಾಯ

    Click Here

    Call us

    Click Here

    ಬೈಂದೂರು: ಒಳ್ಳೆಯ ಕೃತಿಗಳಿಗೆ ಒಳ್ಳೆಯ ಓದುಗರು ಇದ್ದೇ ಇರುತ್ತಾರೆ. ಕನ್ನಡದಲ್ಲಿ ಉತ್ತಮ ಕೃತಿಗಳು ಹೊರಬರಬೇಕು. ಆ ಕೃತಿಗಳು ಓದುಗರಿಗೆ ಸಿಗುವಂತಾಗಬೇಕು. ಆಯಾಯ ವಯೋಮಾನದವರನ್ನು ಲಕ್ಷ್ಯವಾಗಿಸಿಟ್ಟುಕೊಂಡು ಕೃತಿಗಳನ್ನು ರಚನೆ ಮಾಡುವ ಪ್ರವೃತ್ತಿ ಬೆಳೆದಾಗ ಕನ್ನಡ ಸಾಹಿತ್ಯ ವಿಫುಲವಾಗಿ ಬೆಳೆಯುತ್ತದೆ ಎಂದು ಹಿರಿಯ ಸಾಹಿತಿ, ಬಹುಭಾಷಾ ವಿದ್ವಾಂಸ ಡಾ. ಯು.ಪಿ.ಉಪಾಧ್ಯಾಯ ಅಭಿಪ್ರಾಯಪಟ್ಟರು.

    ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಖಂಬದಕೋಣೆ ಆರ್.ಕೆ.ಸಂಜೀವರಾವ್ ಜನ್ಮಶತಾಬ್ದಿ ಆಚರಣಾ ಸಮಿತಿಯ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನೂರರ ಸಂಭ್ರಮದ ಅಂಗವಾಗಿ ಆರ್.ಕೆ.ಸಂಜೀವ ರಾವ್ ವೇದಿಕೆಯಲ್ಲಿ ನಡೆದ ಕನ್ನಡ ವರ್ಷಾಚರಣೆ-ಕನ್ನಡ ಸಾಹಿತ್ಯ ಪರಿಷತ್ತಿನ ಶತಮಾನೋತ್ಸವ ಎಂಬ ಎರಡು ದಿನಗಳ ಸಾಹಿತ್ಯೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

    ಕೇವಲ ಕಥೆ ಕಾದಂಬರಿ ಬರೆದವರು ಮಾತ್ರ ಸಾಹಿತಿಗಳೆಂದು ಪರಿಗಣಿಸಲಾಗದು. ಇತರ ಪ್ರಕಾರಗಳ ಬರಹಗಳು ಸಾಹಿತ್ಯದ ಸಾಲಿಗೆ ಸೇರುತ್ತದೆ. ಕನ್ನಡ ಸಾಹಿತ್ಯಕ್ಕೆ ಭಾರತದಲ್ಲಿ ದೊಡ್ಡ ಸ್ಥಾನಮಾನವಿದೆ. ನೋಬೆಲ್ ಪ್ರಶಸ್ತಿ ಪಡೆಯುವ ಅರ್ಹತೆಯೂ ಇದೆ. ಆದರೆ ಭಾಷಾ ತೊಡಕಿನಿಂದ ಅದು ಪ್ರಸರಣ ಆಗುತ್ತಿಲ್ಲ, ಎಲ್ಲರನ್ನೂ ತಲುಪುತ್ತಿಲ್ಲ. ರಾಜ್ಯದ ಲೇಖಕರಲ್ಲಿ ಕನಿಷ್ಠ 25 ಸಾಹಿತಿಗಳ ತಲಾ ಒಂದೊಂದು ಕೃತಿಯನ್ನಾದರೂ ಆಂಗ್ಲ ಭಾಷೆಗೆ ವಿಮರ್ಶೆಗಳ ಸಹಿತವಾಗಿ ತರ್ಜುಮೆ ಮಾಡಿ, ದೇಶದ ವಿವಿದೆಡೆ ಹಾಗೂ ವಿದೇಶಗಳಿಗೆ ಪ್ರಸರಣ ಮಾಡಿದರೆ ಕನ್ನಡ ಸಾಹಿತ್ಯದ ಮಹತ್ವ ಗೊತ್ತಾಗುತ್ತದೆ. ಕನ್ನಡದ ಸಾಹಿತ್ಯಗಳು ಅತ್ಯಂತ ಗಟ್ಟಿಯಾಗಿ, ಸಮೃದ್ಧವಾಗಿವೆ. ಅವು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಾಗ ಕನ್ನಡದ ಹಿರಿಮೆ ಹೆಚ್ಚುತ್ತದೆ. ಅಂಥಹ ಕೆಲಸವನ್ನು ಕನ್ನಡ ಸಾಹಿತ್ಯ ಪರಿಷತ್ ಮಾಡುವ ಅವಶ್ಯಕತೆ ಇದೆ ಎಂದರು.

    ಕನ್ನಡದಲ್ಲಿ ಓದುಗರಿಗೆ ಕೊರತೆಯಿಲ್ಲ. ಲೇಖಕ ತನಗೆ ಖುಷಿಗಾಗಿ ಬರೆಯುವ ಬದಲು ಓದುಗರ ಅಭಿರುಚಿಗೆ ತಕ್ಕಂತೆ ಬರೆದರೇ ಅವರ ಕೃತಿಗಳು ಜನರಿಗೆ ತಲುಪುತ್ತದೆ ಹಾಗೂ ಅವರ ಸಾಹಿತ್ಯ ಸಮಾಜಕ್ಕೊಂದು ಸಂದೇಶ ನೀಡುತ್ತದೆ ಎಂದರು.

    Click here

    Click here

    Click here

    Call us

    Call us

    ವಿದೇಶಗಳಲ್ಲಿ ಬೆಳೆದಂತೆ ಇಲ್ಲಿ ಸಾಹಿತ್ಯ ಜನರನ್ನು ಪರಿಣಾಮಕಾರಿಯಾಗಿ ತಲುಪಿಲ್ಲ. ವಿದೇಶಗಳಲ್ಲಿ ಮಕ್ಕಳ ಕೃತಿಯೊಂದು ಬಿಡುಗಡೆಯಾಗುತ್ತದೆ ಎಂದರೆ ಮೊದಲೆ ಕಾಯ್ದಿರಿಸುವಿಕೆ ಹಾಗೂ ಬೆಳಿಗ್ಗೆ ಅಂಗಡಿಯ ಮುಂದೆ ಸರದಿ ಸಾಲು ಕಾಣುತ್ತೇವೆ. ಆವತ್ತೆ ಹೊಸ ಕೃತಿಯನ್ನು ಓದುವ ತುಡಿತವನ್ನು ಗಮನಿಸಬಹುದು. ಅಂಥಹ ಸಾಹಿತ್ಯ ಸೃಷ್ಟಿ ಕನ್ನಡದಲ್ಲೂ ಆಗಬೇಕು. ಕನ್ನಡದಲ್ಲಿ ಓದುವ ಆಸಕ್ತಿ ಬೆಳೆಸುವ ಕೆಲಸ ಆಗಬೇಕು ಎಂದು ಹೇಳಿದರು.

    ಇವತ್ತು ಕನ್ನಡದ ಸಾಹಿತ್ಯದ ವಿವಿಧ ಪ್ರಕಾರಗಳಿಗೆ ಮನ್ನಣೆ ಲಭಿಸುತ್ತಿದೆ. ಸಂಶೋಧನೆ, ಸೃಜನಶೀಲ ಸಾಹಿತ್ಯಕ್ಕೂ ಅವಕಾಶಗಳು ಸೃಷ್ಟಿಯಾಗುತ್ತಿವೆ. ಅಂತೆಯೇ ಸಾಹಿತಿಗಳು ಜನರ ಅಭಿರುಚಿ ಮತ್ತು ವಯೋಮಾನದವರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಸದಾಭಿರುಚಿಯ ಸಾಹಿತ್ಯ ಮಾಡಿದಾಗ ಅದು ಪರಿಣಾಮಕಾರಿಯಾಗಿ ಜನರನ್ನು ತಲುಪುತ್ತದೆ. ಶಾಲೆಗಳಲ್ಲಿ ಕೂಡಾ ಮಕ್ಕಳಿಗೆ ಕನ್ನಡದ ಸುಂದರ ಸಾಹಿತ್ಯ ಇರುವ ಗೀತೆಗಳನ್ನು ಹೇಳಿಕೊಡುವ ಮೂಲಕ ಮಕ್ಕಳಲ್ಲಿ ಕನ್ನಡಾಸಕ್ತಿ ಬೆಳೆಸಬೇಕು. ಕನ್ನಡದಲ್ಲಿ ಅಸಂಖ್ಯವಾದ ಮಕ್ಕಳನ್ನು ಕುಣಿಸುವಂಥಹ ಸಾಹಿತ್ಯ ಇದೆ. ಅದರ ಸದುಪಯೋಗ ಆಗಬೇಕು ಎಂದರು.

    ಜಿಲ್ಲೆಯ ೧೧ ಮಂದಿ ಹಿರಿಯ ಸಾಧಕರಿಗೆ ಈ ಸಂದರ್ಭದಲ್ಲಿ ಶತಮಾನೋತ್ಸವದ ಗೌರವಾರ್ಪಣೆ ಸಲ್ಲಿಸಲಾಯಿತು. ಆಶಯ ನುಡಿಗಳನ್ನಾಡಿದ ಕಸಾಪ ರಾಜ್ಯಾಧ್ಯಕ್ಷ ಪುಂಡಲೀಕ ಹಾಲಂಬಿಯವರನ್ನು ಹುಟ್ಟೂರಿನ ಪರವಾಗಿ ಸನ್ಮಾನಿಸಲಾಯಿತು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಮಹಾಪ್ರಬಂಧಕ ಕೆ.ಎಸ್. ಪ್ರಕಾಶರಾವ್, ಕಿರಿಮಂಜೇಶ್ವರ ಗ್ರಾ.ಪಂ ಅಧ್ಯಕ್ಷೆ ಲಲಿತಾ ಖಾರ್ವಿ, ಆರ್. ಕೆ. ಸಂಜೀವರಾವ್ ಜನ್ಮಶತಾಬ್ದಿ ಆಚರಣಾ ಸಮಿತಿ ಅಧ್ಯಕ್ಷ ಎಸ್.ಜನಾರ್ದನ ಮರವಂತೆ ಉಪಸ್ಥಿತರಿದ್ದರು.

    ಕಸಾಪ ತಾಲೂಕು ಅಧಕ್ಷ ಕುಂದಾಪುರ ನಾರಾಯಣ ಖಾರ್ವಿ ಸ್ವಾಗತಿಸಿದರು, ಸೂರಾರು ನಾರಾಯಣ ಮಡಿ ವಂದಿಸಿದರು. ಆರೂರು ತಿಮ್ಮಪ್ಪ ಶೆಟ್ಟಿ ನಿರೂಪಿಸಿದರು.

    _MG_1356_MG_1357_MG_1372_MG_1399 _MG_1397 _MG_1387 _MG_1376 _MG_1375

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025

    1 Comment

    1. Subrahmanya Basri K.S. on 10/10/2015 11:33 am

      Thank you for focusing on Kannada Activities – Kannada Varshacharane at Sandeepan School, Nagur, Byndoor

      Reply
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.