Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗಾನಾಡು-ನೀರೋಡಿಯಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನಿಂದ ನಿರ್ಮಿಸಿದ ನೂತನ ಗೃಹ ಹಸ್ತಾಂತರ
    ಊರ್ಮನೆ ಸಮಾಚಾರ

    ಗಂಗಾನಾಡು-ನೀರೋಡಿಯಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನಿಂದ ನಿರ್ಮಿಸಿದ ನೂತನ ಗೃಹ ಹಸ್ತಾಂತರ

    Updated:27/09/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಗಂಗಾನಾಡು-ನೀರೋಡಿಯಲ್ಲಿ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ 9ನೇ ಗೃಹ ’ಶ್ರೀ ವರಲಕ್ಷ್ಮೀ ನಿಲಯ’ ಸೋಮವಾರ ಉದ್ಘಾಟನೆಗೊಂಡಿತು.

    Click Here

    Call us

    Click Here

    ನಿಪ್ಪಾಣಿ ಸಧರ್ಮ ಓಂಶಕ್ತಿ ಮಠದ ಪೀಠಾಧಿಪತಿ ಶ್ರೀ ಅರುಣಾನಂದ ಸ್ವಾಮೀಜಿ ನೂತನ ಗೃಹವನ್ನು ಉದ್ಘಾಟಿಸಿ ಆಶೀರ್ವದಿಸಿ, ಜೀವನದಲ್ಲಿ ಪಂಚಯಜ್ಞಗಳನ್ನು ಮಾಡುವುದು ಅಗತ್ಯವಾಗಿದೆ. ನಮ್ಮನ್ನು ಸೃಷ್ಠಿಸಿದ ದೇವರಿಗೆ ಸಲ್ಲಿಸುವ ದೇವಯಜ್ಞ, ನಮ್ಮನ್ನು ಪ್ರಪಂಚಕ್ಕೆ ಪರಿಚಯಿಸಿದ ಹೆತ್ತವರಿಗೆ ಸಲ್ಲಿಸುವ ಪಿತೃಯಜ್ಞ, ನಮಗೆ ಸಂಸ್ಕಾರ, ಸಂಸ್ಕೃತಿ ತಿಳಿಸಿಕೊಡುವ ಮೂಲಕ ಬದುಕಿಗೆ ಉತ್ತಮ ಮಾರ್ಗ ತೋರಿದ ಗುರು, ಹಿರಿಯರಿಗಾಗಿ ಸಲ್ಲಿಸುವ ಋಷಿಯಜ್ಞ, ಯಾವುದೇ ಫಲಾಪೇಕ್ಷೆ ಇಲ್ಲದೇ ಉಪಕಾರ ಮಾಡುತ್ತಿರುವ ಪಕೃತಿ ಪೂಜೆಯ ಭೂತಯಜ್ಞ, ಸಮಾಜದಲ್ಲಿ ಬದುಕುತ್ತಿರುವ ನಾವು ಸಮಾಜಕ್ಕೇನು ನೀಡಿದ್ದೇವೆ ಎನ್ನುವ ಕಲ್ಪನೆಯೇ ಸ್ವಯಜ್ಷ ಎಂದರು.

    ತನ್ನ ಸಂಪಾದನೆಯ ಒಂದು ಭಾಗವನ್ನು ಈ ಭಾಗದ ಬಡವರ ಅಭ್ಯುದಯಕ್ಕಾಗಿ ವಿನಿಯೋಗಿಸುತ್ತಿರುವುದು ದೇವರಿಗೂ ಪ್ರೀಯವಾದ ಕಾರ್ಯವಾಗಿದೆ. ಸತ್ಪಾತ್ರರಿಗೆ ಮಾಡಿದ ದಾನ ಪರಿಪೂರ್ಣ ಎಂದೆನಿಕೊಳ್ಳುತ್ತದೆ. ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಕಳಕಳಿ ಹೊಂದಿರುವ ಗೋವಿಂದ ಬಾಬು ಪೂಜಾರಿ ಇವರು ತಮ್ಮ ಸತ್ಕಾರ್ಯಗಳ ಮೂಲಕ ಶ್ರೇಷ್ಠ ಮಾನವರಲ್ಲಿ ಒಬ್ಬರಾಗಿದ್ದಾರೆ ಎಂದರು.

    ನೂತನ ಗೃಹದ ಕೀಲಿಕೈಯನ್ನು ಫಲಾನುಭವಿ ಸೌಂತ್‌ಮನೆ ರಾಮ ಮರಾಠಿ ದಂಪತಿಗೆ ಹಸ್ತಾಂತರಿಸಿ ಮಾತನಾಡಿದ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟೀ ಡಾ. ಗೋವಿಂದ ಬಾಬು ಪೂಜಾರಿ, ಟ್ರಸ್ಟ್ ಮೂಲಕ ನಿರ್ಮಿಸಲಾಗಿರುವ ಒಂಭತ್ತನೇ ಮನೆ ಇದಾಗಿದೆ. ಟ್ರಸ್ಟ್ ಮೂಲಕ ನಿರಂತರವಾಗಿ ಸೇವಾ ಕಾರ್ಯಗಳನ್ನು ಮಾಡುತ್ತಾ ಬರಲಾಗುತ್ತಿದೆ. ಮುಂದಿನ ದಿನಗಳಲ್ಲಿ ಟ್ರಸ್ಟ್ ವತಿಯಿಂದ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡುವ ಚಿಂತನೆಯಿದೆ ಎಂದರು.

    https://youtu.be/lHl5wrRZD28
    Watch Video

    ಈ ವೇಳೆ ರಾಜನಾರಾಯಣವಿಠಲ ಗುರೂಜಿ, ಆರ್‌ಎಸ್‌ಎಸ್‌ನ ಹಿರಿಯ ಸ್ವಯಂಸೇವಕ ಅಚ್ಚುತ ಕಲ್ಮಾಡಿ, ಛತ್ರಪತಿ ಶಿವಾಜಿ ಯುವಸೇನೆ ಅಧ್ಯಕ್ಷ ಮಹಾಲಿಂಗ ನಾಯ್ಕ್, ವಣಕೊಡ್ಲು ದೇವಳದ ಅನುವಂಶಿಕ ಧರ್ಮದರ್ಶಿ ಡಾ. ರಾಜಮೋಹನ್ ಶೆಟ್ಟಿ, ನೀರೋಡಿ ಗುರಿಕಾರ ನಾರಾಯಣ ಮರಾಠಿ, ಬಾಬು ಪೂಜಾರಿ ಮತ್ತು ಮಂಜಮ್ಮ ದಂಪತಿಗಳು, ಮಾಲತಿ ಗೋವಿಂದ ಪೂಜಾರಿ ಇದ್ದರು. ಛತ್ರಪತಿ ಶಿವಾಜಿ ಯುವಸೇನೆ ವತಿಯಿಂದ ಡಾ. ಗೋವಿಂದ ಬಾಬು ಪೂಜಾರಿ ಇವರನ್ನು ಸನ್ಮಾನಿಸಲಾಯಿತು. ನಾಗರಾಜ ಪಿ. ಯಡ್ತರೆ ಕಾರ್ಯಕ್ರಮ ನಿರ್ವಹಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಶಿಕ್ಷಣ ಅವಶ್ಯಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    23/12/2025

    ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ

    23/12/2025

    ಕಾಂಗ್ರೆಸ್ ಪುಡಾರಿಗಳಿಂದ ಬಿಜೆಪಿ ಯುವಮೋರ್ಚಾ ಜಿಲ್ಲಾದ್ಯಕ್ಷರ ವಿರುದ್ದ ಅಪಪ್ರಚಾರ: ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ

    23/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಶಿಕ್ಷಣ ಅವಶ್ಯಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
    • ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ
    • ಕಾಂಗ್ರೆಸ್ ಪುಡಾರಿಗಳಿಂದ ಬಿಜೆಪಿ ಯುವಮೋರ್ಚಾ ಜಿಲ್ಲಾದ್ಯಕ್ಷರ ವಿರುದ್ದ ಅಪಪ್ರಚಾರ: ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ
    • ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.