Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
    ಊರ್ಮನೆ ಸಮಾಚಾರ

    ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

    Updated:28/09/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಪಟ್ಟಣ ಪಂಚಾಯತ್ ರಚನೆಯಾಗಿ ಒಂದು ವರ್ಷ ಎಂಟು ತಿಂಗಳಾಗಿದೆ. ಈ ಅವಧಿಯಲ್ಲಿ 125 ಕೋಟಿ ಅನುದಾನ ಬಂದಿದೆ. ರಾಜ್ಯದಲ್ಲಿಯೇ ಹೆಚ್ಚು ಅನುದಾನ ಪಡೆದ ಕ್ಷೇತ್ರ ಬೈಂದೂರಾಗಿದೆ. ಈ ಕ್ಷೇತ್ರ ಸಾಕಷ್ಟು ಹಿಂದುಳಿದಿದ್ದು ಅಭಿವೃದ್ದಿಯಾಗುತ್ತಿದೆ. ಅಧಿಕಾರಿಗಳು ಯಾವ ಕೆಲಸ ಆಗಬೇಕು, ಅನುದಾನ ಅವಶ್ಯಕತೆ ಇತ್ಯಾದಿಗಳನ್ನು ನನ್ನ ಗಮನ ತರಬೇಕು ಎಂದು ಬೈಂದೂರು ಕ್ಷೇತ್ರದ ಶಾಸಕ ಬಿ. ಎಂ.ಸುಕುಮಾರ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಬೈಂದೂರು ಅಂಬೇಡ್ಕರ್ ಭವನದಲ್ಲಿ ನಡೆದ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮತ್ತು ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಪರಿಹರಿಸುವ ಕೆಲಸ ಮಾಡಬೇಕು. ಜನರಿಗೆ ವ್ಯವಸ್ಥೆಯ ಬಗ್ಗೆ ಬೇಸರ ಮೂಡದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಜನರ ನೋವನ್ನು ಅರ್ಥ ಮಾಡಿಕೊಂಡು ಸ್ಪಂದಿಸುವ ಕೆಲಸ ಮಾಡಬೇಕು ಎಂದರು.

    ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಕಾಮಗಾರಿಯ ಪ್ರಗತಿಯನ್ನು ವಿಚಾರಿಸಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾಮಗಾರಿಯನ್ನು ಅಧಿಕಾರಿಗಳು ಗಮನಿಸಬೇಕು. ಈ ಹಿಂದೆ ಕುಂದಾಪುರ ಮಿನಿವಿಧಾನಸೌಧ ಕಾಮಗಾರಿಯನ್ನು ನೆನಪು ಮಾಡಿಕೊಳ್ಳಿ. ಇಲ್ಲಿ ಹಾಗಾಗಬಾರದು. ಕಾಮಗಾರಿಯ ಗುಣಮಟ್ಟದಲ್ಲಿ ಲೋಪ ಕಂಡು ಬಂದರೆ ಅದಕ್ಕೆ ಅಧಿಕಾರಿಗಳೇ ನೇರ ಹೊಣೆ ಆಗಬೇಕಾಗುತ್ತದೆ ಎಂದು ಎಚ್ಚರಿಸಿದರು.

    94ಸಿ, ವಿದ್ಯುತ್, ತೋಟಗಾರಿಕೆ, ಕೃಷಿ, ಪಶುಸಂಗೋಪನೆ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಜನರಿಗಾಗಿ ಕೆಲಸ ಮಾಡಬೇಕು ಎಂದರು. ಹುಚ್ಚು ನಾಯಿಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು ಈ ಬಗ್ಗೆ ಇಲಾಖೆಗಳು ಉಚಿತ ಚುಚ್ಚುಮದ್ದು ನೀಡುವ ಕೆಲಸವನ್ನು ವೇಗಗೊಳಿಸಬೇಕು ಎಂದರು.

    Click here

    Click here

    Click here

    Call us

    Call us

    Watch Video

    ತಗ್ಗರ್ಸೆ ಶಾಲೆಯ ಕಟ್ಟಡ ಶಿಥಿಲಗೊಂಡಿದೆ. ಗೆದ್ದಲು ಹಿಡಿದಿದೆ. ಮಕ್ಕಳ ತಲೆ ಮೇಲೆ ಗೆದ್ದಲು ಬೀಳುತ್ತಿದೆ ಎಂದು ಅಲ್ಲಿನ ಎಸ್.ಡಿ.ಎಂ.ಸಿ ಅಧ್ಯಕ್ಷರು ಶಾಸಕರ ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಶಾಸಕರು, ಕೂಡಲೇ ಲೋಕೋಪಯೋಗಿ ಇಂಜಿನಿಯರ್ ಶಿಥಿಲಗೊಂಡಿರುವ ಕಟ್ಟಡ ಪರಿಶೀಲಿಸಿ, ಇಲಾಖೆ ವರದಿ ನೀಡಬೇಕು. ಆ ಕಟ್ಟಡ ತೆರವು ಮಾಡಿ, ಹೊಸ ಕಟ್ಟಡಕ್ಕೆ ಅನುದಾನ ಕಲ್ಪಿಸಲಾಗುವುದು ಎಂದರು.

    ಬೈಂದೂರು ಪಟ್ಟಣ ಪಂಚಾಯತಿಯನ್ನಾಗಿಸಿದ ಬಗ್ಗೆ ಶಾಸಕರು ಹಾಗೂ ಯಡ್ತರೆ ಪಂಚಾಯತಿ ಮಾಜಿ ಸದಸ್ಯರುಗಳ ನಡುವೆ ಜಟಾಪಟಿ ನಡೆಯಿತು. ಸಾರ್ವಜನಿಕರು ಪ್ರಾಧಿಕಾರ ಹಾಗೂ ವಿವಿಧ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಸಭೆಯಲ್ಲಿ ನಾಗರಾಜ ಶೆಟ್ಟಿ, ಗಣೇಶ್ ಪೂಜಾರಿ, ಗಿರೀಶ್ ಬೈಂದೂರು, ಸದಾಶಿವ ಪಡುವರಿ, ಸುಶೀಲಾ ದೇವಾಡಿಗ, ಸುಬ್ರಹ್ಮಣ್ಯ ಬಿಜೂರು, ವೆಂಕಟರಮಣ ಹೇನಬೇರು, ವೀರಭದ್ರ ಗಾಣಿಗ ಮೊದಲಾದವರು ವಿವಿಧ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು. ಇಲಾಖಾ ಅಧಿಕಾರಿಗಳು ಪ್ರತಿಕ್ರಿಯಿಸಿದರು.

    ರೈತ ಮುಖಂಡ ದೀಪಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶ ಉಡುಪಿ ಇದರ ಯೋಜನಾ ನಿರ್ದೇಶಕಿ ಪ್ರತಿಭಾ ಆರ್, ಬೈಂದೂರು ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭಾರತಿ, ಜಿ.ಪಂ. ಮಾಜಿ ಸದಸ್ಯರಾದ ಶಂಕರ ಪೂಜಾರಿ, ಸುರೇಶ ಬಟ್ವಾಡಿ, ಶಂಕರ ಪೂಜಾರಿ ಉಪಸ್ಥಿತರಿದ್ದರು.

    ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್ ಕುಮಾರ್ ಸ್ವಾಗತಿಸಿದರು. ಬೈಂದೂರು ತಾಲೂಕು ತಹಶೀಲ್ದಾರ್ ಶ್ರೀಕಾಂತ್ ಎಸ್.ಹೆಗಡೆ ವಂದಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರ್ವಹಿಸಿದರು. ಇದಕ್ಕೂ ಮೊದಲು ಪಟ್ಟಣ ಪಂಚಾಯತ್ನ ನೂತನ ಜೆಸಿಬಿ ವಾಹನವನ್ನು ಶಾಸಕರು ಉದ್ಘಾಟಿಸಿದರು.


    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಶಿಕ್ಷಣ ಅವಶ್ಯಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    23/12/2025

    ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ

    23/12/2025

    ಕಾಂಗ್ರೆಸ್ ಪುಡಾರಿಗಳಿಂದ ಬಿಜೆಪಿ ಯುವಮೋರ್ಚಾ ಜಿಲ್ಲಾದ್ಯಕ್ಷರ ವಿರುದ್ದ ಅಪಪ್ರಚಾರ: ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ

    23/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಶಿಕ್ಷಣ ಅವಶ್ಯಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
    • ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ
    • ಕಾಂಗ್ರೆಸ್ ಪುಡಾರಿಗಳಿಂದ ಬಿಜೆಪಿ ಯುವಮೋರ್ಚಾ ಜಿಲ್ಲಾದ್ಯಕ್ಷರ ವಿರುದ್ದ ಅಪಪ್ರಚಾರ: ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ
    • ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.