Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ನಗರ ಪ್ರವೇಶಕ್ಕೆ ಅವಕಾಶ. ಅಂತಿಮವಾಗಿ ಬೊಬ್ಬರ್ಯನಕಟ್ಟೆ ಬಳಿ ರಾ.ಹೆ. ಪ್ಲೈಓವರ್ ಡಿವೈಡರ್ ತೆರವು
    ಊರ್ಮನೆ ಸಮಾಚಾರ

    ಕುಂದಾಪುರ ನಗರ ಪ್ರವೇಶಕ್ಕೆ ಅವಕಾಶ. ಅಂತಿಮವಾಗಿ ಬೊಬ್ಬರ್ಯನಕಟ್ಟೆ ಬಳಿ ರಾ.ಹೆ. ಪ್ಲೈಓವರ್ ಡಿವೈಡರ್ ತೆರವು

    Updated:09/10/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಸಾರ್ವಜನಿಕರ ಹೋರಾಟದ ಬಳಿಕ ಅಂತಿಮವಾಗಿ ರಾಷ್ಟ್ರೀಯ ಹೆದ್ದಾರಿಯಿಂದ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ನಗರಕ್ಕೆ ಪ್ರವೇಶ ದೊರೆತಿದೆ. ಬೊಬ್ಬರ್ಯನಕಟ್ಟೆ ಜಂಕ್ಷನ್ ಬಳಿ ಚತುಷ್ಪಥ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಕುಂದಾಪುರ ನಗರ ಪ್ರವೇಶಿಸಲು ಶನಿವಾರ ತಾಲೂಕು ಆಡಳಿತ ಅವಕಾಶ ನೀಡಿದೆ.

    Click Here

    Call us

    Click Here

    ಚತುಷ್ಪಥ ಕಾಮಗಾರಿಯ ಪ್ಲೈಓವರ್ ನಿರ್ಮಾಣ ಆರಂಭ ಆದಾಗಲಿಂದಲೂ ಕುಂದಾಪುರ ನಗರಕ್ಕೆ ಪ್ರವೇಶ ಪಡೆಯಲು ಹಂಗಳೂರಿನಿಂದಲೇ ಸರ್ವಿಸ್ ರೋಡಿಗೆ ತೆರಳಬೇಕಾಗಿತ್ತು. ನಾಗರಿಕರಿಗೂ ಇದರಿಂದ ಸಾಕಷ್ಟು ಅನಾನುಕೂಲ ಎದುರಾಗಿತ್ತು. ಅದಕ್ಕಾಗಿ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿಯೇ ಪ್ಲೈಓವರ್ ಚತುಷ್ಪಥ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಪ್ರವೇಶ ಕಲ್ಪಿಸಬೇಕೆಂದು ಕುಂದಾಪುರದ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು, ಹಾಗೂ ಪುರಸಭೆ ಹೋರಾಟ ನಡೆಸಿಕೊಂಡು ಬಂದಿದ್ದವು.

    ಪುರಸಭೆಯ ನಿಯೋಗ ಹಾಗೂ ಸಾರ್ವಜನಿಕರು ಕೇಂದ್ರ ಕೃಷಿಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಗೆ ಪ್ರತ್ಯೇಕ ಮನವಿ ಸಲ್ಲಿಸಿದ್ದರು. ಬಳಿಕ ಸಚಿವರು ಉಡುಪಿ ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿದ್ದರು. ಆದೇಶಕ್ಕೆ ಸ್ಪಂದಿಸಿದ ಜಿಲ್ಲಾಡಳಿತವು ಸ್ಥಳ ಪರಿಶೀಲನೆ ನಡೆಸಿ ಕುಂದಾಪುರ ನಗರ ಪ್ರವೇಶಕ್ಕೆ ಅನುಮತಿ ನೀಡುವಂತೆ ಹೆದ್ದಾರಿ ಇಲಾಖೆಗೆ ನಿರ್ದೇಶನ ನೀಡಿತ್ತು.

    ಹೆದ್ದಾರಿ ಯೋಜನಾ ಪ್ರಾಧಿಕಾರದ ಪಿಡಿ ಲಿಂಗೇಗೌಡ ಮಾರ್ಚ್ ತಿಂಗಳಿನಲ್ಲಿ ಸ್ಥಳಕ್ಕೆ ಭೇಟಿ ನೀಡಿ ಫೈಓವರ್ ಹೆದ್ದಾರಿಯಿಂದ ಕುಂದಾಪುರ ನಗರ ಪ್ರವೇಶಿಸಲು ಸರ್ವಿಸ್ ರಸ್ತೆಗಿದ್ದ ಡಿವೈಡರ್ ತೆರವು ಗೊಳಿಸುವ ಭರವಸೆ ನೀಡಿದ್ದರು. ಅದರಂತೆ ಶನಿವಾರ ಡಿವೈಡರ್ ತೆರವುಗೊಳಿಸಿ ಫೈಓವರ್ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಸಂಪರ್ಕ ಕಲ್ಪಿಸಲಾಗಿದೆ.

    ಎರಡೂ ಬದಿಯಲ್ಲಿಯೂ ಡಿವೈಡರ್ ತೆರವುಗೊಳಿಸಿ:
    ಫ್ಲೈಓವರಿನ ಒಂದು ಬದಿಯಲ್ಲಿ ಮಾತ್ರ ಡಿವೈಡರ್ ತೆರವುಗೊಳಿಸಿ ನಗರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇನ್ನೊಂದು ಬದಿಯಲ್ಲಿ ಈವರೆಗೆ ಡಿವೈಡರ್ ತೆರವುಗೊಳಿಸಿಲ್ಲ. ಎರಡೂ ಬದಿಯಲ್ಲಿಯೂ ಡಿವೈಡರ್ ತೆರವುಗೊಳಿಸಿ ಅಗತ್ಯವಿರುವಲ್ಲಿ ಬೀದಿದೀಪ ವ್ಯವಸ್ಥೆ ಮಾಡಿದರೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

    Click here

    Click here

    Click here

    Call us

    Call us

    ಇದನ್ನೂ ಓದಿ:
    ► ಪುರಸಭಾ ವ್ಯಾಪ್ತಿಯಲ್ಲಿಯೇ ಕುಂದಾಪುರ ನಗರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್, ಯೋಜನಾ ನಿರ್ದೇಶಕರ ಭೇಟಿ – https://kundapraa.com/?p=58106 .
    ► ಕುಂದಾಪುರ ನಗರದಿಂದ ಫ್ಲೈ ಓವರ್‌ಗೆ ಪ್ರವೇಶ – ನಿರ್ಗಮನಕ್ಕೆ ಅವಕಾಶಕ್ಕೆ 30ರೊಳಗೆ ಕ್ರಮ – https://kundapraa.com/?p=53929 .
    ► ಪ್ಲೈಓವರ್ ಮೂಲಕ ನಗರಕ್ಕೆ ಪ್ರವೇಶ ಪ್ರಸ್ತಾಪವನ್ನು ಅಧಿಕಾರಿಗೆ ತಲುಪಿಸಲಾಗುವುದು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ – https://kundapraa.com/?p=51410 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.