Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲೇಖಕರು ‘ಭಯೋತ್ಪಾದಕ’ರಾಗಬೇಡಿ: ಡಾ. ಸಿ. ಆರ್. ಚಂದ್ರಶೇಖರ್
    alvas nudisiri

    ಲೇಖಕರು ‘ಭಯೋತ್ಪಾದಕ’ರಾಗಬೇಡಿ: ಡಾ. ಸಿ. ಆರ್. ಚಂದ್ರಶೇಖರ್

    Updated:04/11/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಆರೋಗ್ಯ ಸಂಬಂಧಿ ಲೇಖನಗಳನ್ನು ಬರೆಯುವ ಲೇಖಕರು ಎಚ್ಚರಿಕೆಯನ್ನು ವಹಿಸಬೇಕು. ಕಾಯಿಲೆಗಳ ಬಗ್ಗೆ ಬರೆಯುವಾಗ ಲೇಖನದ ಕೊನೆಯಲ್ಲಿ ರೋಗಿಗಳಿಗೆ ಭಯಹುಟ್ಟಿಸವಂತಹ ’ಭಯೋತ್ಪಾದಕ’ರಾಗದೆ, ರೋಗಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಧನಾತ್ಮಕ ಅಂಶಗಳಿಂದ ಲೇಖನವನ್ನು ಮುಕ್ತಾಯಗೊಳಿಸಿಬೇಕು ಎಂದು ಖ್ಯಾತ ಮನೋರೋಗ ತಜ್ಞರು ಹಾಗೂ ವೈದ್ಯ ಸಾಹಿತಿ ಡಾ. ಸಿ. ಆರ್. ಚಂದ್ರಶೇಖರ್ ಕರೆ ನೀಡಿದರು.

    Click Here

    Call us

    Click Here

    ಅವರು ಆಳ್ವಾಸ್ ಕಾಲೇಜಿನಲ್ಲಿ ನಡೆದ ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆಯ ೮೮ನೇ ರಾಜ್ಯ ಸಮ್ಮೇಳನದ ಎರಡನೇ ದಿನದಂದು ನಡೆದ ಪತ್ರಿಕೋದ್ಯಮ ವಿದ್ಯಾರ್ಥಿಗಳ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ವೈದ್ಯಕೀಯ ಲೇಖನಗಳನ್ನು ಬರೆಯುವಾಗ ಕೇವಲ ಇಂಟರ್‌ನೆಟ್ ಮೂಲವನ್ನು ಮಾತ್ರ ಅವಲಂಬಿತವಾಗಿರದೆ, ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಜೊತೆಗೆ ತಮ್ಮ ಸ್ವಾನುಭವ ಅಥವಾ ತಜ್ಞರ ಹಾಗೂ ರೋಗಿಗಳ ಅನುಭವಗಳನ್ನು ಸಂಗ್ರಹಿಸಿ ಬರೆಯುವ ಮೂಲಕ ಉತ್ತಮ ಲೇಖನಗಳನ್ನು ರಚಿಸಬಹುದು ಎಂದರು.

    ಬರಹಗಾರರು ಕಾಲಮಿತಿ, ಪುಟಗಳ ಮಿತಿ, ಪದಗಳ ಮಿತಿ ಹಾಗೂ ಓದುಗರ ಸಹನೆಯ ಮಿತಿಯನ್ನು ಗಮನದಲ್ಲಿರಿಸಿಕೊಂಡು- ಚಿಕ್ಕ ವಾಕ್ಯಗಳನ್ನು ಒಳಗೊಂಡ ಸಂಕ್ಷಿಪ್ತ ಬರಹವನ್ನು ಬರೆಯಬೇಕು. ಅನುಭವದಿಂದ ಹುಟ್ಟುವ ಸಾಹಿತ್ಯ ಅತ್ಯದ್ಭುತ ಸಾಹಿತ್ಯ ವಾಗಿರುತ್ತದೆ. ಲೇಖಕರು ಭಾಷೆಯ ಮೇಲೆ ಪಾಂಡಿತ್ಯ ಸಾಧಿಸಲು ಸಾಹಿತ್ಯ ಕೃತಿಗಳನ್ನು ಓದಬೇಕು, ಉತ್ತಮ ಭಾಷಣವನ್ನು ಕೇಳಬೇಕು ಜೊತೆಗೆ ಬರವಣೆಗೆಯನ್ನು ಅಭ್ಯಾಸ ಮಾಡಿದಾಗ ಉತ್ತಮ ಲೇಖನವನ್ನು ರಚಿಸಲು ಸಾಧ್ಯ ಎಂದು ಹೇಳಿದರು.

    ಕನ್ನಡ ವೈದ್ಯ ಬರಹಗಾರರ ಸಮಿತಿಯ ಅಧ್ಯಕ್ಷ ಡಾ. ಅರವಿಂದ ಪಟೇಲ್, ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ. ವೀಣಾ ಎಂ ಸುಳ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು.

    ವಿದ್ಯಾರ್ಥಿಗಳಾದ ಸೌರಭ್, ಅಖಿಲಾ, ಪವಿತ್ರಾ, ಶಿವಾನಿ, ಅಯನಾ, ಅರ್ಪಿತಾ, ಹಾಗೂ ಅಧ್ಯಯನ ವೈದ್ಯಕೀಯ ಬರಹಗಳ ಲೇಖನಗಳನ್ನು ಪ್ರಸ್ತುತ ಪಡಿಸಿದರು. ಕಾರ‍್ಯಕ್ರಮದಲ್ಲಿ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    Click here

    Click here

    Click here

    Click Here

    Call us

    Call us

    ವಿದ್ಯಾರ್ಥಿನಿ ಪವಿತ್ರಾ ನಿರೂಪಿಸಿ, ಅಖಿಲಾ ಸ್ವಾಗತಿಸಿ, ಅಯನಾ ಅತಿಥಿಯನ್ನು ಪರಿಚಯಿಸಿ, ಅನನ್ಯ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    30/04/2026
    Leave A Reply Cancel Reply

    13 + one =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.