ಕುಂದಾಪುರ: ಐ.ಟಿ. ಕಂಪೆನಿಯಲ್ಲಿ ದೊರೆಯುವ ಉದ್ಯೋಗ ಮಾಹಿತಿ, ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಭಾಗದ ವತಿಯಿಂದ ಅಂತಿಮ ವರ್ಷದ ಬಿ.ಸಿ.ಎ. ಮತ್ತು ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಐಟಿ ಕಂಪೆನಿಗಳಲ್ಲಿ ದೊರೆಯುವ ಉದ್ಯೋಗ ಮಾಹಿತಿ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

Call us

Click Here

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಗ್ಲೋಬಲ್ ಲಾಜಿಕ್ ಹಿಟಾಚಿ ಗ್ರೂಪ್ ಕಂಪೆನಿಯ ಮ್ಯಾನೇಜರಾದ ವಿಪಿನ್ ಕುಮಾರ್ ನಿಟ್ಟೂರು ಇವರು ಐ.ಟಿ. ಕಂಪೆನಿಗಳಲ್ಲಿ ವಿದ್ಯಾರ್ಥಿಗಳಿಗೆ ಇರುವಂತಹ ವಿಪುಲ ಅವಕಾಶಗಳ ಕುರಿತು ಸವಿಸ್ತಾರವಾದ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಮಾತನಾಡಿ, ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಹೆಚ್ಚಿನ ಉಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ಕಾಲೇಜಿನ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಸ್ವಾಗತಿಸಿ, ಉಪನ್ಯಾಸಕ ಶ್ರೀಕಾಂತ್ ವಂದಿಸಿದರು. ಉಪನ್ಯಾಸಕಿ ಪವಿತ್ರಾ ಶೆಟ್ಟಿ ನಿರೂಪಿಸಿದರು.

Click here

Click here

Click here

Click Here

Call us

Call us

Leave a Reply