Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾ ಮಟ್ಟದ ‘ಅಂಬೇಡ್ಕರ್ ಓದು’ ಅಭಿಯಾನಕ್ಕೆ ಚಾಲನೆ
    ಊರ್ಮನೆ ಸಮಾಚಾರ

    ಜಿಲ್ಲಾ ಮಟ್ಟದ ‘ಅಂಬೇಡ್ಕರ್ ಓದು’ ಅಭಿಯಾನಕ್ಕೆ ಚಾಲನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರನ್ನು ಇಂದಿನ ವಿದ್ಯಾರ್ಥಿಗಳು ಅಧ್ಯಯನ ಮಾಡಿ ದೇಶಕ್ಕೆ ಅವರ ಕೊಡುಗೆಯನ್ನು ತಿಳಿಯಬೇಕಾಗಿರುವುದು ಇಂದಿನ ಅಗತ್ಯವಾಗಿದೆ ಎಂದು ಉಡುಪಿ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಅವರು ಕರೆ ನೀಡಿದರು.

    Click Here

    Call us

    Click Here

    ಅವರು ಸಮುದಾಯ ಸಾಂಸ್ಕೃತಿಕ ಸಂಘಟನೆ ರಿ. ಕುಂದಾಪುರ ಮತ್ತು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಉಡುಪಿ ಜಿಲ್ಲೆ ಇವರು ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಅಂಬೇಡ್ಕರ್ ಓದು ಅಭಿಯಾನವನ್ನು ಸಂವಿಧಾನದ ಪ್ರಸ್ತಾವನೆಯನ್ನು ಸಭಿಕರಿಗೆ ಪ್ರತಿಜ್ಞಾ ವಿಧಿಯಾಗಿ ಬೋಧಿಸುವುದರ ಮೂಲಕ ಚಾಲನೆಗೊಳಿಸಿ ಮಾತನಾಡಿದರು.

    ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ಮೂರೂ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಅಂಬೇಡ್ಕರ್ ಅವರ ಸಾರ್ವಜನಿಕ ಜೀವನದ ಒಂದು ಮಹತ್ವದ ಘಟನೆಯ ಕುರಿತು ಯಾವುದೇ ಮಾಧ್ಯಮದಲ್ಲಿ ಪೋಸ್ಟರ್ ರಚನೆ, ಜೈ ಭೀಮ್ ಕ್ವಿಜ್, ಅಂಬೇಡ್ಕರ್ ಅವರ ಜೀವನದ ಕುರಿತಾದ ಯಾವುದೇ ಒಂದು ಮಹತ್ವದ ಘಟನೆಯನ್ನು ಆಧರಿಸಿದ ವೀಡಿಯೋ ಭಾಷಣ, ಸಂವಿಧಾನದ ಪ್ರಸ್ತಾವನೆಯ ಸಂಯೋಜಿತ ಓದು. ಸಂವಿಧಾನ ಪ್ರಸ್ತಾವನೆಯ ಸಮೂಹಗಾನ, ಅಂಬೇಡ್ಕರ್ ಹಾಗೂ ಅವರಿಗೆ ಸಂಬಂಧಿಸಿದ ಯಾವುದೇ ಘಟನೆಯನ್ನು ಆಧರಿಸಿದ ಚಿತ್ರ ರಚನೆ, ಅಂಬೇಡ್ಕರ್ ಬದುಕು, ಬರಹ, ಚಿಂತನೆಗಳನ್ನು ಆಧರಿಸಿದ ಕಿರುನಾಟಕ ಇತ್ಯಾದಿ ಸ್ಪರ್ಧೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿರುವುದನ್ನು ಪ್ರಶಂಶಿಸಿದರು.

    ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಉಡುಪಿ ಜಿಲ್ಲಾ ಪ್ರಧಾನ ಸಂಘಟನಾ ಸಂಚಾಲಕ ಪಿ ಮಂಜುನಾಥ ಗಿಳಿಯಾರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಉಪಸ್ಥಿತರಿದ್ದ ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ದೋಮ ಚಂದ್ರಶೇಖರ, ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾದ ಸಂಚಾಲಕರಾದ ರಾಘವೇಂದ್ರ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

    ಸಮುದಾಯ ಕುಂದಾಪುರದ ಉಪಾಧ್ಯಕ್ಷರಾದ ವಾಸುದೇವ ಗಂಗೇರ ಅವರ ತಂಡ ಆರಂಭಗೀತೆ ಹಾಡಿದರು. ಸಮುದಾಯ ಕುಂದಾಪುರದ ಅಧ್ಯಕ್ಷರಾದ ಉದಯ ಗಾಂವಕರ ಸ್ವಾಗತ ಕೋರಿ ಪ್ರಾಸ್ತಾವನೆಗೈದರು. ಸಮುದಾಯ ಕುಂದಾಪುರದ ಕೋಶಾಧಿಕಾರಿ ಬಾಲಕೃಷ್ಣ ಸಂವಿಧಾನದ ಪ್ರಸ್ತಾವನೆಯನ್ನು ಹಂಚಿ ಸ್ವಾಗತ ಕೋರಿದರು. ಕುಂದಾಪುರ ದಲಿತ ಸಂಘರ್ಷ ಸಮಿತಿಯ ಸಂಚಾಲಕರಾದ ರಾಜು ಬೆಟ್ಟಿನಮನೆ ಅವರು ಧನ್ಯವಾದಗೈದರು. ಕಾರ್ಯಕ್ರಮವನ್ನು ಸಮುದಾಯ ಕುಂದಾಪುರದ ಕಾರ್ಯದರ್ಶಿ ಡಾ. ಸದಾನಂದ ಬೈಂದೂರು ನಿರೂಪಿಸಿದರು.

    Click here

    Click here

    Click here

    Call us

    Call us

    ಸಭಾ ಕಾರ್ಯಕ್ರಮದ ನಂತರ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ “ಭಾರತ ಭಾಗ್ಯವಿಧಾತಾ” ವಿಡಿಯೋ ಪ್ರದರ್ಶನ ಮಾಡಲಾಯಿತು. ಸಮುದಾಯ ಕುಂದಾಪುರ, ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಹಾಗೂ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು ಕಲ್ಪಿಸಬೇಕು: ಜಯಕರ ಶೆಟ್ಟಿ

    11/07/2026

    ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

    11/07/2026

    ಉಪ್ಪುಂದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ತ್ಯಾಗಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಭೇಟಿ

    11/07/2026
    Leave A Reply Cancel Reply

    1 × five =

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಐಆರ್ ಕುರಿತು ಡಿಸಿ ಜೊತೆ ಸಂವಾದ: ಸನ್ಮತಿ ಪತ್ರಿಕೆಯ ಸಂಚಿಕೆ ಬಿಡುಗಡೆ
    • ಜವಾಹರ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು ಕಲ್ಪಿಸಬೇಕು: ಜಯಕರ ಶೆಟ್ಟಿ
    • ತಂತ್ರವೇ ಯಶಸ್ಸಿನ ಮೂಲ; ಕೇವಲ ಕಲ್ಪನೆಗಳಿಂದ ಉದ್ಯಮ ಯಶಸ್ವಿಯಾಗುವುದಿಲ್ಲ: ವೇಣು ಶರ್ಮಾ
    • ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.