Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರ್ಮಫಲ ತ್ಯಾಗಿಯೇ ನಿಜವಾದ ಸಂನ್ಯಾಸಿ: ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ
    ಊರ್ಮನೆ ಸಮಾಚಾರ

    ಕರ್ಮಫಲ ತ್ಯಾಗಿಯೇ ನಿಜವಾದ ಸಂನ್ಯಾಸಿ: ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಪ್ರತಿಫಲಾಪೇಕ್ಷೆ ಇಲ್ಲದೇ ಮಾಡುವ ಸೇವೆ ಎಲ್ಲಕ್ಕಿಂತ ದೊಡ್ಡದು. ಅಪೇಕ್ಷೆಯೊಂದಿಗೆ ಮಾಡುವ ಕಾರ್ಯದಿಂದ ತಾತ್ಕಾಲಿಕವಾಗಿ ತೃಪ್ತಿ ದೊರೆತರೂ ಭಗವಂತನ ಸಾಕ್ಷಾತ್ಕಾರ ಸಾಧ್ಯವಾಗದು ಎಂದು ಏಳಜಿತ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಶ್ರೀಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿ ಬೈಂದೂರು ವತಿಯಿಂದ ಹಮ್ಮಿಕೊಂಡಿದ್ದ ಸಪ್ತಾಹ ಗೀತಾ ಜಯಂತಿ ಉತ್ಸವ – 2022 ಉದ್ಘಾಟಿಸಿ ಮಾತನಾಡಿ, ಕಲಿಯುಗದಲ್ಲಿ ಕರ್ಮಫಲ ತ್ಯಾಗ ಮಾಡುವುದು ಸುಲಭದ ಮಾತಲ್ಲ. ದೇವರ ಪೂಜಾಕಾರ್ಯದಲ್ಲಿ ಭಕ್ತಿಯಿಂದ ತೊಡಗಿಕೊಳ್ಳುವುದು ಕೂಡ ಕಷ್ಟದ ಕೆಲಸ. ಎಲ್ಲಾ ಅಪೇಕ್ಷೆಯನ್ನೂ ಮೀರಿ ಕರ್ಮಫಲ ತ್ಯಾಗ ಮಾಡುವವರೇ ನಿಜವಾದಿ ಸಂನ್ಯಾಸಿ ಎಂದೆನಿಸಿಕೊಳ್ಳುವರು ಎಂದು ನುಡಿದರು.

    ಬೈಂದೂರು ಶ್ರೀಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿ ಅಧ್ಯಕ್ಷ ಬಿ. ರಾಮಕೃಷ್ಣ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯಕ್, ಸ್ಪರ್ಧಾ ಸಮಿತಿ ಮುಖ್ಯಸ್ಥ ವಿಶ್ವೇಶ್ವರ ಅಡಿಗ, ಬೈಂದೂರು ರಾಮಕ್ಷತ್ರಿಯ ಸಂಘದ ಅಧ್ಯಕ್ಷ ರಾಮಕೃಷ್ಣ ಸಿ., ರತ್ತೂಬಾಯಿ ಜನತಾ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಆನಂದ ಮದ್ದೋಡಿ ಉಪಸ್ಥಿತರಿದ್ದರು.

    ಶ್ರೀಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿಯ ಕಾರ್ಯದರ್ಶಿ ಕೇಶವ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಮಂಜುನಾಥ ಬಿಜೂರು ಧನ್ಯವಾದ ಸಲ್ಲಿಸಿದರು. ಬಳಿಕ ವಿವಿಧ ಸ್ವರ್ಧಾ ಕಾರ್ಯಕ್ರಮಗಳು ಜರುಗಿದವು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ

    07/07/2026

    ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ

    07/07/2026

    ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    07/07/2026
    Leave A Reply Cancel Reply

    eighteen + eighteen =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.