Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪ್ರ ಕನ್ನಡದ ಸಾಹಿತಿ, ಶಿಕ್ಷಕಿ ಸುಮಿತ್ರಾ ಐತಾಳ್ ನಿಧನ
    ಊರ್ಮನೆ ಸಮಾಚಾರ

    ಕುಂದಾಪ್ರ ಕನ್ನಡದ ಸಾಹಿತಿ, ಶಿಕ್ಷಕಿ ಸುಮಿತ್ರಾ ಐತಾಳ್ ನಿಧನ

    Updated:01/12/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಡಿ.1:
    ಕುಂದಾಪುರದ ಸಾಹಿತಿ, ಶಿಕ್ಷಕಿ ಸುಮಿತ್ರಾ ಐತಾಳ್ (58) ಅವರು ಇಂದು ಸಂಜೆ ಅಸೌಖ್ಯದಿಂದ ನಿಧನರಾದರು. ಕೆಲ ಸಮಯದಿಂದ ಅವರು ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.

    Click Here

    Call us

    Click Here

    ಕಿರಿಮಂಜೇಶ್ವರ ಸರಕಾರಿ ಪ್ರೌಢ ಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿದ್ದ ಸೇವೆ ಸಲ್ಲಿಸುತ್ತಿದ್ದ ಸುಮಿತ್ರಾ ಐತಾಳ್ ಅವರು ಕುಂದಾಪ್ರ ಕನ್ನಡದಲ್ಲಿ ರೂಪಕ, ನಾಟಕ, ಸಾಹಿತ್ಯ ರಚನೆ ಮಾಡಿ ಕುಂದಗನ್ನಡಕ್ಕೆ ಅಪಾರ ಸೇವೆ ಸಲ್ಲಿಸಿದ್ದರು.

    ಬಿ.ಇಡ್, ಎಂ.ಎ ವ್ಯಾಸಂಗ ಪೂರೈಸಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುವುದರ ಜೊತೆಗೆ ಸಾಹಿತ್ಯಿಕ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಸುಮಿತ್ರಾ ಅವರು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಭಾವಗಾನ, ಅಂತರಗಂಗೆ, ಗಡಿಯಾರ, ಹಣತೆ, ಮೌನರತಿ ಕವನ ಸಂಕಲನ, ಫಲಿತಾಂಶ ಕಥಾಸಂಕಲನವನ್ನು ಪ್ರಕಟಿಸಿದ್ದರು. ಅಲ್ಲದೇ ವಿಜಯ ಕರ್ನಾಟಕ, ಕುಂದಪ್ರಭ, ಕುಂದಾಪುರ ಮಿತ್ರ ಪತ್ರಿಕೆಗಳಲ್ಲಿ ಅವರ ಲೇಖನಗಳು ಪ್ರಕಟಗೊಂಡಿದ್ದವು. ’ಬಾ ಗೆಳತಿ’ ಮಹಿಳಾ ಸ್ಪಂದನ ಕಾರ್ಯಕ್ರಮ, ದೂರದರ್ಶನದಲ್ಲಿ ಸಾಹಿತ್ಯದ ನುಡಿ ಕಾರ್ಯಕ್ರಮದಲ್ಲಿ ಕೂಡಾ ಅವರು ಭಾಗವಹಿಸಿದ್ದರು.

    ಕೆಲವು ದಿನಗಳ ಹಿಂದೆ ಅವರ ಪುಸ್ತಕ ಬಿಡುಗಡೆ, ನಾಟಕ ಪ್ರದರ್ಶನ ಕಾರ್ಯಕ್ರಮ ವ್ಯವಸ್ಥೆ ಮಾಡಲಾಗಿತ್ತು. ಆದರೆ ಅವರ ಅನಾರೋಗ್ಯದ ಕಾರಣ ಮುಂದೂಡಲಾಗಿತ್ತು. ಸಾಹಿತ್ಯ ಹಾಗೂ ಶೈಕ್ಷಣಿಕ ಕ್ಷೇತ್ರದ ಅವರ ಸೇವೆಗಾಗಿ ಹಲವು ಪ್ರಶಸ್ತಿಗಳು ಸಂದಿದ್ದವು. ಅವರು ಪತಿ, ಪುತ್ರನನ್ನು ಅಗಲಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    nine − seven =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.