ಕುಂದಾಪುರ ಎಕ್ಸಲೆಂಟ್ ಪಿಯು ಕಾಲೇಜು: ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದ ಪೂರ್ವಭಾವಿ ಭೂಮಿ ಪೂಜೆ ಸಂಪನ್ನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಡಿ.1:
ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ, ಕುಂದಾಪುರ ಇದರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 08, 09 ಮತ್ತು 10ರಂದು ನಡೆಯಲಿರುವ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದ ಕ್ರೀಡಾಂಗಣ ಭೂಮಿ ಪೂಜೆ ಕಾಲೇಜಿನ ಕ್ರೀಡಾಂಗಣದಲ್ಲಿ ನೆರವೆರಿತು.

Call us

Click Here

ಎಂ. ಎಂ. ಹೆಗ್ಡೆ ಎಜುಕೇಶನಲ್ ಆಂಡ್ ಚಾರಿಟೆಬಲ್ ಟ್ರಸ್ಟ್ನ ಅದ್ಯಕ್ಷರಾದ ಎಂ. ಮಹೇಶ್ ಹೆಗ್ಡೆ ಅವರು ಈ ವೇಳೆ ಮಾತನಾಡಿ, ಪದವಿ ಪೂರ್ವ ಶಿಕ್ಷಣ ಇಲಾಖೆ ನೀಡಿದ ಜವಾಬ್ದಾರಿಯನ್ನು ಸ್ವೀಕರಿಸಿದ ಸಂಸ್ಥೆಯು ಕಳೆದ ಕೆಲವು ದಿನಗಳಿಂದ ಸಿದ್ದತೆ ಆರಂಭಿಸಿದೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಲಿ ಎಂದರು.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅದ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಅವರು ಮಾತಾನಾಡಿ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದ ಆಯೋಜನೆ ನಮ್ಮ ಕಾಲೇಜಿಗೆ ಒದಗಿ ಬಂದಿರುವುದು ಒಂದು ಸುವರ್ಣ ಅವಕಾಶವಾಗಿದೆ. ಅದನ್ನು ಬಹಳ ಅಚ್ಚುಕಟ್ಟಾಗಿ ನಿಬಾಯಿಸಲು ಪಣ ತೋಟ್ಟಿದ್ದೆವೆ ಎಂದರು.

ಪುರೋಹಿತರಾದ ಶಂಕರನಾರಾಯಣ ಉಡುಪ ಅವರ ನೇತೃತ್ವದಲ್ಲಿ ನಡೆದ ಭೂಮಿ ಪೂಜೆಯಲ್ಲಿ ನೆರವೇರಿತು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಮತ್ತು ಖಚಾಂಚಿ ಭರತ್ ಶೆಟ್ಟಿ ಉಪಸ್ಥಿತರಿದ್ದು ಶುಭ ಕೊರಿದರು.

Leave a Reply