Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ, ಆಕರ್ಷಕ ಪುರಮೆರವಣಿಗೆ
    ಊರ್ಮನೆ ಸಮಾಚಾರ

    ಕುಂದಾಪುರ: ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ, ಆಕರ್ಷಕ ಪುರಮೆರವಣಿಗೆ

    Updated:10/12/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಯಶಸ್ವಿ ವಾಲಿಬಾಲ್ ಪಂದ್ಯಾಟ ಆಯೋಜನೆ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಡಿ.8:
    ತಾಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಪ.ಪೂ. ಶಿಕ್ಷಣ ಇಲಾಖೆ, ಸುಣ್ಣಾರಿ ಸುಜ್ಞಾನ ಎಜುಕೇಶನ್ ಟ್ರಸ್ಟ್ ಹಾಗೂ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಡಿ.8 ರಿಂದ ಡಿ.10ರ ತನಕ ನಡೆಯಲಿರುವ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ಗುರುವಾರ ಸಂಜೆ ಉದ್ಘಾಟನೆಗೊಂಡಿತು.

    Watch Video

    ಉಡುಪಿಯ ಶ್ರೀ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಗುರುವಾರ ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಆಶೀರ್ವಚನ ನೀಡಿ, ವಾಲಿಬಾಲ್ ಕ್ರೀಡೆಯು ಆಟದ ಜತೆ ಬದುಕಿನ ಪಾಠವನ್ನು ಕಲಿಸುತ್ತದೆ. ಬದುಕಿನಲ್ಲಿ ಬರುವ ಹೊಡೆತಗಳಿಗೆ ಕುಗ್ಗದೆ, ಮುಂದುವರೆಯುವುದರಿಂದ ಜೀವನೋತ್ಸಾಹವದ ಜತೆ ಯಶಸ್ಸು ದೊರಕುತ್ತದೆ ಎಂದು ಹೇಳಿದರು.

    ಪಥ ಸಂಚಲನದ ಗೌರವ ರಕ್ಷೆ ಸ್ವೀಕರಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ ಶಿಕ್ಷಣದಲ್ಲಿ ಪಠ್ಯದ ಜತೆಗೆ ಕ್ರೀಡೆಯೂ ಅಗತ್ಯ. ಕ್ರೀಡಾಪಟುಗಳಿಗೆ ನೀಡುವಂತಹ ಪ್ರೋತ್ಸಾಹ ಧನ ಸಹಿತ ಮೂಲ ಸೌಕರ್ಯಗಳನ್ನು ಹೆಚ್ಚಿಸುವ ಮೂಲಕ ಸರಕಾರ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡಬೇಕು ಎಂದು ಹೇಳಿದರು.

    ಮಾಜಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ವಿದೇಶದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಇರುವ ಪ್ರೋತ್ಸಾಹ ಹಾಗೂ ಅನುದಾನ ನಮ್ಮ ದೇಶದಲ್ಲಿ ಇಲ್ಲ. ಹಾಗಾಗಿ ದೇಶದಲ್ಲಿ ಕ್ರೀಡೆ ಅತ್ಯಂತ ಕಡೆಗಣಿಸಲ್ಪಟ್ಟ ಕ್ಷೇತ್ರವಾಗಿದೆ. ಶಿಕ್ಷಣ ಇಲಾಖೆಯು ಕ್ರೀಡೆಗೆ ಒತ್ತು ಕೊಟ್ಟಲ್ಲಿ ಮಾತ್ರ ದೇಶದ ಕ್ರೀಡಾ ಕ್ಷೇತ್ರ ಉತ್ತುಂಗಕ್ಕೇರುವುದು ಎಂದರು.

    Click here

    Click here

    Click here

    Call us

    Call us

    ರಾಷ್ಟ್ರೀಯ ವಾಲಿಬಾಲ್ ಪಟು ಹೆಮ್ಮಾಡಿಯ ರೈಸನ್ ಬೆನೆಟ್ ರೆಬೆಲ್ಲೋ ಅವರನ್ನು ಸಮ್ಮಾನಿಸಲಾಯಿತು. ಕ್ರೀಡಾ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

    ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಸ್ರೂರು ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಉದ್ಯಮಿಗಳಾದ ಉದ್ಯಮಿಗಳಾದ ಎಂ. ಮಹೇಶ್ ಹೆಗ್ಡೆ, ಎಂ. ದಿನೇಶ್ ಹೆಗ್ಡೆ, ಪ.ಪೂ. ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ, ಸೌಕೂರು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ಮಂಜಯ್ಯ ಶೆಟ್ಟಿ ಸಬ್ಲಾಡಿ, ಹೊಂಬಾಡಿ-ಮಂಡಾಡಿ ಗ್ರಾ.ಪಂ. ಅಧ್ಯಕ್ಷ ಸತೀಶ್ ಮಡಿವಾಳ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜೀವನ್ ಶೆಟ್ಟಿ, ಪಂದ್ಯಾಟದ ರಾಜ್ಯ ವೀಕ್ಷಕ ಮಹಾಂತೇಶ, ಕ್ರೀಡಾ ನಿರ್ದೇಶಕ ದಿನೇಶ್ ಶೆಟ್ಟಿ, ಉದ್ಯಮಿಗಳಾದ ಜಯಶೀಲ ಶೆಟ್ಟಿ ಘಟಪ್ರಭ, ಯುವ ಮೆರಿಡಿಯನ್ ಉದಯ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    ಎಕ್ಸಲೆಂಟ್ ಪ.ಪೂ. ಕಾಲೇಜು ಪ್ರಾಂಶುಪಾಲ ಡಾ| ರಮೇಶ ಶೆಟ್ಟಿ ಪ್ರಸ್ತಾವಿಸಿದರು. ಸುಜ್ಞಾನ್ ಟ್ರಸ್ಟ್ ಕೋಶಾಧಿಕಾರಿ ಭರತ್ ಶೆಟ್ಟಿ ಸ್ವಾಗತಿಸಿ, ಟ್ರಸ್ಟ್ ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ ವಂದಿಸಿದರು. ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ ಅನುಜ್ ಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿ, ಶಿಕ್ಷಕ ಸತೀಶ್ ಶೆಟ್ಟಿ ಚಿತ್ರಪಾಡಿ ನಿರೂಪಿಸಿದರು.

    ಆಕರ್ಷಕ ಪುರಮೆರವಣಿಗೆ:
    ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆಗೂ ಮುನ್ನ ಆಕರ್ಷಕ ಪುರಮೆರವಣಿಗೆ ಜರುಗಿತು. ರಾಜ್ಯದ 31 ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಪುರಮೆರವಣಿಗೆಯಲ್ಲಿ ಭಾಗವಹಿಸಿದ್ದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಉಮೇಶ್ ಪುತ್ರನ್ ಮೆರವಣಿಗೆಯ ನಾಮಫಲಕ ಅನಾವರಣಗೊಳಿಸಿದರು. ಪ.ಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾವುಟ ಹಾರಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಎಂ.ಎಂ. ಹೆಗ್ಡೆ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಎಂ. ಮಹೇಶ್ ಹೆಗ್ಡೆ, ಎಕ್ಸಲೆಂಟ್ ಪ.ಪೂ. ಕಾಲೇಜು ಪ್ರಾಂಶುಪಾಲ ಡಾ| ರಮೇಶ ಶೆಟ್ಟಿ, ಸುಜ್ಞಾನ್ ಟ್ರಸ್ಟ್ ಕೋಶಾಧಿಕಾರಿ ಭರತ್ ಶೆಟ್ಟಿ, ಟ್ರಸ್ಟ್ ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ, ವಿವಿಧ ಕಾಲೇಜುಗಳ ಉಪನ್ಯಾಸರುಗಳು, ಮೊದಲಾದವರು ಉಪಸ್ಥಿತರಿದ್ದರು.

    ಘಟೋತ್ಕಚ, ಗೋರಿಲ್ಲಾ, ಬೌನ್ಸರ್, ಹೊನ್ನಾವರದ ಬ್ಯಾಂಡ್ ಸೆಟ್, ಕೋಡಿ ಗೊಂಬೆ, ಎಸ್ಸಿಸಿ ಸೇವಾದಳ, ಯಕ್ಷಗಾನ ವೇಷ, ಕೇರಳ ಚಂಡೆ, ತಟ್ಟಿರಾಯ, ೆಕ್ಸಲೆಂಟ್ ವಿದ್ಯಾರ್ಥಿಗಳ ಹೂಗಳ ಪ್ರದರ್ಶನ, ಹುಲಿವೇಷ, ಕುಂದಾಪುರ ಕೊರಗರ ಡೋಲು. ಸ್ಕೌಟ್ & ಗೌಡ್ಸ್ ಮೆರವಣಿಗೆಯ ಮೆರಗು ಹೆಚ್ಚಿಸಿದವು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d