Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಂಗಳೂರು ವಿವಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಎಬಿವಿಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    ಊರ್ಮನೆ ಸಮಾಚಾರ

    ಮಂಗಳೂರು ವಿವಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಎಬಿವಿಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    Updated:16/12/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಎಬಿವಿಪಿ ಕುಂದಾಪುರ ಆಶ್ರಯದಲ್ಲಿ ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಪದವಿ ಕಾಲೇಜು, ಭಂಡಾರ್‌ಕಾರ‍್ಸ್ ಕಾಲೇಜು ಹಾಗೂ ಕೋಟೇಶ್ವರ ಕಾಗೇರಿ ವರದರಾಜ ಶೆಟ್ಟಿ ಸರಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಮಿನಿ ವಿಧಾನ ಸೌಧ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

    Click Here

    Call us

    Click Here

    ಈ ವೇಳೆ ಆಕ್ರೋಶ ಹೊರಹಾಕಿದ ವಿದ್ಯಾರ್ಥಿಗಳು ಫಲಿತಾಂಶ ಕ್ಲಪ್ತ ಸಮಯದಲ್ಲಿ ಪ್ರಕಟವಾಗುತ್ತಿಲ್ಲ. ಪರೀಕ್ಷೆ ಮುಗಿದು ವರ್ಷ ಹತ್ತಿರವಾದರೂ ಮೌಲ್ಯಮಾಪನ ನೆನೆಗುದಿಗೆ. ಅಂಕಪಟ್ಟಿ ಇಲ್ಲದೆ ವಿದ್ಯಾರ್ಥಿಗಳು ಸ್ನಾತಕೋತ್ತರ ಶಿಕ್ಷಣ, ಉದ್ಯೋಗ ದಿಂದ ವಂಚಿತರಾಗುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ನ್ಯಾಯ ಕೊಡಲಾಗದಿದ್ದರೆ ಮಂಗಳೂರು ವಿವಿ ಕುಲಪತಿ ಕುರ್ಚಿ ಖಾಲಿಮಾಡಲಿ ಎಂದು ಎಚ್ಚರಿಕೆ ನೀಡಿದರು.

    ಕೋಟೇಶ್ವರ ಕಾಗೇರಿ ವರದರಾಜ ಶೆಟ್ಟಿ ಪದವಿ ಕಾಲೇಜು ವಿದ್ಯಾರ್ಥಿ ಪ್ರಮುಖ್ ರಾಹುಲ್ ಶೆಟ್ಟಿ ಮಾತನಾಡಿ, ಅಂಕಪಟ್ಟಿ ಬರದ ಕಾರಣ ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕಲು ಆಗುತ್ತಿಲ್ಲ. ಅಂಕಪಟ್ಟಿಕೊಳ್ಳಲು ಬೈಂದೂರಿನಿಂದ ಮಂಗಳೂರು ವಿಶ್ವ ವಿದ್ಯಾಲಯಕ್ಕೆ ಹೋಗುವುದಕ್ಕೆ ಸಾವಿರಾರು ರೂ. ಖರ್ಚು ಮಾಡಿದರು ಸಹ ಅದೇ ದಿನದಲ್ಲಿ ಅಂಕಪಟ್ಟಿ ಸಿಗುವುದಿಲ್ಲ. ಎರಡು ಮೂರು ಬಾರಿ ಅಲೆಯ ಬೇಕಾಗುತ್ತದೆ. ವಿದ್ಯಾರ್ಥಿಗಳ ಸಮಸ್ಯೆ ಹದಿನೈದು ದಿನದೊಳಗೆ ಪರಿಹಾರ ಮಾಡದಿದ್ದರೆ ವಿವಿಗೆ ಮುತ್ತಿಗೆ ಹಾಕಿ ದೊಡ್ಡಮಟ್ಟದ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

    ಎಬಿವಿ ತಾಲೂಕು ಸಂಚಾಲಕ ಧನುಷ್ ಪೂಜಾರಿ ಮಾತನಾಡಿ, ಎನ್‌ಇಪಿ ಅನುಷ್ಠಾನ ಸರಿಯಾಗಿ ಮಾಡಿಲ್ಲ ಇದರಿಂದ ದೊಡ್ಡ ಮಟ್ಟದಲ್ಲಿ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದು, ವಿಶ್ವ ವಿದ್ಯಾಲಯಕ್ಕೂ ಗೊಂದಲವಿದೆ. ಸಾಮಾನ್ಯ ಕಾಲೇಜ್ ವಿಶ್ವವಿದ್ಯಾನಿಲಯಕ್ಕಿಂತ ಉತ್ತಮ ಯೋಜನೆ ಮಾಡುತ್ತಿದ್ದು, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸರಿಯಾದ ಯೋಜನೆಯಿಲ್ಲದೆ ವಿದ್ಯಾರ್ಥಿಗಳ ಅಂತತ್ರರನ್ನಾಗಿಸಿದ್ದಾರೆ ಎಂದರು.

    ವಿದ್ಯಾರ್ಥಿನಿ ಪ್ರತಿಕ್ಷಾ ಮಾತನಾಡಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ವಿದ್ಯಾರ್ಥಿಗಳು ಅಂಕಪಟ್ಟಿ ಪಡೆದುಕೊಳ್ಳಲು ಹೋದರೆ ವಿಶ್ವವಿದ್ಯಾನಿಲಯದಿಂದ ಯಾವುದೇ ಒಂದು ಪ್ರತಿಸ್ಪಂದನವಿಲ್ಲ.ಮರು ಪರೀಕ್ಷೆ ಕಟ್ಟಿದಾಗ ಫಲಿತಾಂಶ ಬರುವುದು ತುಂಬಾ ತಡವಾಗುತ್ತದೆ.ಫೇಲ್ ಆದಾಗ ವಿದ್ಯಾರ್ಥಿಗಳು ದಂಡವನ್ನು ಕಟ್ಟಿ ಮರು ಪರೀಕ್ಷೆಗೆ ಅರ್ಜಿ ಹಾಕುತ್ತಾರೆ. ಆದರೆ ಮರು ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ತಾವು ಕಟ್ಟಿದ ದಂಡದ ಶುಲ್ಕ ವಾಪಾಸು ಒಂದು ವರ್ಷವಾದರೂ ಬರುವುದಿಲ್ಲ. ಪ್ರಮೋಟ್ ಮಾಡುವುದರಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗುತ್ತಿದೆ ಎಂದರು.

    Click here

    Click here

    Click here

    Call us

    Call us

    ಬಿ ಬಿ ಹೆಗ್ಡೆ ಕಾಲೇಜ್ ಘಟಕ ಅಧ್ಯಕ್ಷ ವಿಘ್ನೇಶ್ ಶೆಟ್ಟಿ, ಭಂಡಾರ್‌ಕಾರ್ಸ್ ಕಾಲೇಜು ಘಟಕ ಅಧ್ಯಕ್ಷ ವೀಕ್ಷಿತ್, ಕಾಗೇರಿ ಕಾಲೇಜು ಘಟಕ ಅಧ್ಯಕ್ಷ ಚೇತನ್, ತಾಲೂಕು ವಿದ್ಯಾರ್ಥಿ ಒಕ್ಕೂಟ ಪ್ರಮುಖ ದ್ವನಿ, ಪ್ರಜ್ಞಾ, ಅಪೂರ್ವ ಪ್ರತಿಭಟನೆ ನೇತೃತ್ವ ವಹಿಸಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    19/12/2025

    ವೃದ್ಧೆ ನಾಪತ್ತೆ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.