Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪುರಭವನ ನಿರ್ಮಾಣದಿಂದ ಗಾಂಧಿ ಮೈದಾನಕ್ಕೇನೂ ಸಮಸ್ಯೆಯಿಲ್ಲ. ತಪ್ಪು ಮಾಹಿತಿ ಹರಡಬೇಡಿ – ಜಿಪಂ ಮಾಜಿ ಸದಸ್ಯ ಟಿ. ಬಾಬು ಶೆಟ್ಟಿ
    ಊರ್ಮನೆ ಸಮಾಚಾರ

    ಪುರಭವನ ನಿರ್ಮಾಣದಿಂದ ಗಾಂಧಿ ಮೈದಾನಕ್ಕೇನೂ ಸಮಸ್ಯೆಯಿಲ್ಲ. ತಪ್ಪು ಮಾಹಿತಿ ಹರಡಬೇಡಿ – ಜಿಪಂ ಮಾಜಿ ಸದಸ್ಯ ಟಿ. ಬಾಬು ಶೆಟ್ಟಿ

    Updated:16/12/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು,ಡಿ.16:
    ಇಲ್ಲಿನ ಗಾಂಧಿ ಮೈದಾನವು ಮಿಲಿಟರಿ ಗ್ರೌಂಡ್ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಪುರಭವನ ನಿರ್ಮಾಣದಿಂದ ಪ್ರಸ್ತುತ ಮೈದಾನದಲ್ಲಿ ನಡೆಯುತ್ತಿರುವ ಯಾವ ಚಟುವಟಿಕೆಗೂ ತೊಂದರೆಯಾಗುವುದೂ ಇಲ್ಲ. ಬಳಕೆಯಾಗದ ಮೈದಾನದ ಒಂದು ಭಾಗದಲ್ಲಷ್ಟೇ ಸಾರ್ವಜನಿಕರಿಗೆ ಉಪಯೋಗವಾಗಲಿರುವ ಪುರಭವನ ನಿರ್ಮಾಣವಾಗಲಿದೆ. ಸ್ಥಳಕ್ಕೆ ಬಂದು ವಾಸ್ತವಾಂಶ ಅರಿಯದೇ ಕೆಲವರು ತಪ್ಪು ಮಾಹಿತಿ ಹರಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಜಿಪಂ ಮಾಜಿ ಸದಸ್ಯ ಟಿ. ಬಾಬು ಶೆಟ್ಟಿ ಹೇಳಿದರು.

    Click Here

    Call us

    Click Here

    Watch Video

    ಅವರು ಬೈಂದೂರಿನಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಅಭಿವೃದ್ಧಿ ಹೊಂದುತ್ತಿರುವ ಬೈಂದೂರು ತಾಲೂಕಿಗೆ ಸಂಸದರು, ಶಾಸಕರ ಪ್ರಯತ್ನದಿಂದ ಹೆಚ್ಚಿನ ಅನುದಾನ ದೊರೆತಿದ್ದು ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾರ್ವಜನಿಕರ ಸಹಕಾರವೂ ಮುಖ್ಯವಾಗಿದೆ ಎಂದರು.

    3.45 ಎಕ್ರೆ ಜಾಗ ಕ್ರೀಡಾ ಇಲಾಖೆ & 1.50 ಎಕ್ರೆ ನಗರಾಭಿವೃದ್ಧಿ ಇಲಾಖೆಗೆ ಈಗಾಗಲೇ ಹಸ್ತಾಂತರವಾಗಿದೆ. 4.95ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ಪುರಭವನ ನಿರ್ಮಾಣ ಕಾರ್ಯ ಸದ್ಯದಲ್ಲಿಯೇ ಆರಂಭವಾಗಲಿದೆ. ಕ್ರೀಡಾ ಇಲಾಖೆಯ ಮೂಲಕ ಮೈದಾನ ಅಭಿವೃದ್ಧಿಗಾಗಿ ಪ್ರತ್ಯೇಕ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ಅನುದಾನ ಮಂಜೂರಾಗುವುದು ಬಾಕಿಇದೆ ಎಂದರು.

    ಮಾಜಿ ತಾಪಂ ಸದಸ್ಯ ಸದಾಶಿವ ಡಿ ಪಡುವರಿ ಮಾತನಾಡಿ ಸಾರ್ವಜನಿಕರ ಉಪಯೋಗಕ್ಕೆ ಬಾರದ ಜಾಗದಲ್ಲಿ ಪುರಭವನ ನಿರ್ಮಿಸಿ ಪ್ರಯೋಜನವೂ ಇಲ್ಲ. ನಾವೆಲ್ಲರೂ ಗಾಂಧಿ ಮೈದಾನದಲ್ಲಿ ಆಡಿ ಬೆಳೆದವರು. ಮೈದಾನದ ಯಾವ ಭಾಗ ಉಪಯೋಗವಾಗುತ್ತಿದೆ ಎಂಬ ಅರಿವೂ ಎಲ್ಲರಿಗೂ ಇದೆ. ಯಾರೋ ನಾಲ್ಕು ಮಂದಿ ಮಾಡುತ್ತಿರುವ ವಿರೋಧವನ್ನು ಸಾರ್ವಜನಿಕರ ಅಭಿಪ್ರಾಯದಂತೆ ಬಿಂಬಿಸುವುದು ಸರಿಯಲ್ಲ ಎಂದರು.

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಧರ್ಮದರ್ಶಿ ಜಯಾನಂದ ಹೋಬಳಿದಾರ್ ಮಾತನಾಡಿ, ಬೈಂದೂರು ಪುರಭವನ ನಿರ್ಮಾಣದಿಂದ ಯಾರೋಬ್ಬರಿಗೂ ಸಮಸ್ಯೆಯಾಗದು. ಹಿಂದೆ ನಮಗೂ ಮೈದಾನ ಕಿರಿದಾಗಲಿದೆ ಎಂಬ ಸಂಶಯವಿತ್ತು. ಆದರೆ ಗಡಿಗುರುತು ಹಾಕಿದ ಬಳಿಕ ಗೊಂದಲ ನಿವಾರಣೆಯಾಗಿದ್ದು, ನಗರದ ಹೃದಯಭಾಗದಲ್ಲಿ ಪುರಭವನ ನಿರ್ಮಾಣವಾಗುವುದರಿಂದ ಎಲ್ಲರಿಗೂ ಅನುಕೂಲವಾಗಲಿದೆ ಎಂದರು.

    Click here

    Click here

    Click here

    Call us

    Call us

    ಜಿಪಂ ಮಾಜಿ ಸದಸ್ಯ ಸುರೇಶ್ ಬಟವಾಡಿ ಮಾತನಾಡಿ ಪುರಭವನವನ್ನು ಯಾವುದೋ ಮೂಲೆಯಲ್ಲಿ ನಿರ್ಮಿಸಲು ಸಾಧ್ಯವಿಲ್ಲ. ಜನರಿಗೆ ಉಪಯೋಗವಾಗದ ಕಟ್ಟಡ ಪಾಳು ಬಂಗಲೆಯಂತಾಗುವುದು. ನಗರ ಪ್ರದೇಶದಲ್ಲಿಯೇ ಇದ್ದರೆ ಎಲ್ಲಾ ಕಾರ್ಯಕ್ರಮಗಳಿಗೂ ಅದು ಉಪಯೋಗವಾಗಲಿದೆ ಎಂದರು.

    ಈ ವೇಳೆ ತಾಪಂ ಮಾಜಿ ಸದಸ್ಯರಾದ ಪುಪ್ಪರಾಜ್ ಶೆಟ್ಟಿ, ಪ್ರಸನ್ನ ಕುಮಾರ್ ಉಪ್ಪುಂದ, ಗೋವಿಂದ ಮಟ್ನಕಟ್ಟೆ, ಗಣೇಶ್ ಕಾರಂತ್, ನಾಗರಾಜ ಯಡ್ತರೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಶಿಕ್ಷಣ ಅವಶ್ಯಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    23/12/2025

    ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ

    23/12/2025

    ಕಾಂಗ್ರೆಸ್ ಪುಡಾರಿಗಳಿಂದ ಬಿಜೆಪಿ ಯುವಮೋರ್ಚಾ ಜಿಲ್ಲಾದ್ಯಕ್ಷರ ವಿರುದ್ದ ಅಪಪ್ರಚಾರ: ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ

    23/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಶಿಕ್ಷಣ ಅವಶ್ಯಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
    • ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ
    • ಕಾಂಗ್ರೆಸ್ ಪುಡಾರಿಗಳಿಂದ ಬಿಜೆಪಿ ಯುವಮೋರ್ಚಾ ಜಿಲ್ಲಾದ್ಯಕ್ಷರ ವಿರುದ್ದ ಅಪಪ್ರಚಾರ: ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ
    • ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.