Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು – ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ರೂ. 1012.75 ಕೋಟಿ ಅನುದಾನ ಮಂಜೂರು
    ಊರ್ಮನೆ ಸಮಾಚಾರ

    ಬೈಂದೂರು – ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ರೂ. 1012.75 ಕೋಟಿ ಅನುದಾನ ಮಂಜೂರು

    Updated:21/12/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಬೈಂದೂರಿನಿಂದ ಕೊಲ್ಲೂರು, ನಗರ, ಹೊಸನಗರ, ಆನಂದಪುರ, ಶಿಕಾರಿಪುರ, ಮಾಸೂರು, ರಟ್ಟೆಹಳ್ಳಿ, ಮೂಲಕ ರಾಣೆಬೆನ್ನೂರಿಗೆ ಹೋಗುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 766(ಸಿ)ಯನ್ನು ಸಂಪೂರ್ಣವಾಗಿ ಅಗಲೀಕರಣ ಮಾಡಿ ಅಭಿವೃದ್ಧಿಗೊಳಿಸಲು ಕೇಂದ್ರ ಭೂಸಾರಿಗೆ ಮಂತ್ರಾಲಯವು ಸಕಾರಾತ್ಮಕವಾಗಿ ಸ್ಪಂದಿಸಿದೆ.

    Click Here

    Call us

    Click Here

    2022-23ನೇ ಸಾಲಿಗೆ ಬೈಂದೂರಿನಿಂದ ಹಾಲ್ಕಲ್ ಜಂಕ್ಷನ್ ಮತ್ತು ಕೊಲ್ಲೂರು ಮೂಲಕ ನಾಗೋಡಿ ವರೆಗಿನ 40.40 ಕಿ.ಮೀ ಉದ್ದದ ರಸ್ತೆಯನ್ನು ದ್ವಿಪಥ ರಸ್ತೆಯನ್ನಾಗಿ ಅಗಲೀಕರಣ ಮಾಡಿ ಅಭಿವೃದ್ಧಿಗೊಳಿಸುವ ರೂ 394.05ಕೋಟಿ ಮೊತ್ತದ ಡಿ.ಪಿ.ಆರ್ಗೆ ಕೇಂದ್ರ ಭೂಸಾರಿಗೆ ಮಂತ್ರಾಲಯವು ಮಂಜೂರಾತಿ ನೀಡಿದೆ. ಸದರಿ ಹೆದ್ದಾರಿಯ ಶಿಕಾರಿಪುರ ಪಟ್ಟಣಕ್ಕೆ 6.576 ಕಿ.ಮೀ ಉದ್ದದ ಬೈಪಾಸ್ ರಸ್ತೆ ನಿರ್ಮಾಣ ಮಾಡಲು 66.44 ಕೋಟಿ ಮೊತ್ತದ ಡಿ.ಪಿ.ಆರ್ ಹಾಗೂ ಹೊಸನಗರ ಮಾವಿನಕೊಪ್ಪ ವೃತ್ತದಿಂದ ಹೊಸನಗರ ಬೈಪಾಸ್, ಶರಾವತಿ ಹಿನ್ನೀರಿಗೆ 1.54 ಕಿ.ಮೀ ಮತ್ತು 0.72 ಕಿ.ಮೀ ಉದ್ದದ 2 ಭಾರೀ ಸೇತುವೆಗಳ ನಿರ್ಮಾಣದೊಂದಿಗೆ ಆಡುಗೋಡಿವರೆಗೆ 13.82 ಕಿ.ಮೀ ಉದ್ದದ ಬದಲೀ ರಸ್ತೆ ನಿರ್ಮಾಣ ಮಾಡುವ ರೂ 313.56 ಕೋಟಿಯ ಡಿ.ಪಿ.ಆರ್ಗೆ ಮಂಜೂರಾತಿ ನೀಡಲಾಗಿದ್ದು ಬಾಕಿ ಉಳಿದ ಹೆದ್ದಾರಿ ಅಗಲೀಕರಣ ಮಾಡಲು ಡಿ.ಪಿ.ಆರ್ ತಯಾರಿಸಲು ಸಹ ಕೇಂದ್ರ ಭೂಸಾರಿಗೆ ಮಂತ್ರಾಲಯವು ಆದೇಶಿಸಿದೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/

    ಕಳೆದ ವರ್ಷ ಸದರಿ ಹೆದ್ದಾರಿಯ 7 ಕಿರು ಸೇತುವೆಗಳ ಹಾಗು ಹಾಗು 27.70 ಕಿ.ಮೀ ಉದ್ದದ ದ್ವಿಪಥ ರಸ್ತೆ ನಿರ್ಮಾಣದ ರೂ ಒಟ್ಟು ರೂ 238.70 ಕೋಟಿಗಳ ಡಿ.ಪಿ.ಆರ್ಗೆ ಮಂಜೂರಾತಿ ನೀಡಿದ್ದು ಕಾಮಗಾರಿಗಳು ಈಗಾಗಲೇ ಪ್ರಗತಿಯಲ್ಲಿದೆ.

    ರಾಷ್ಟ್ರೀಯ ಹೆದ್ದಾರಿ 766(ಸಿ) ಸಂಪೂರ್ಣ ಅಗಲೀಕರಣ ಮಾಡಿ ಅಭಿವೃದ್ಧಿಗೊಳಿಸಲು ಕ್ರಮವಹಿಸಿ ಈವರೆಗೂ ಒಟ್ಟು 1012.75 ಕೋಟಿರೂಗಳನ್ನು ಮಂಜೂರು ಮಾಡಿದ ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಜೈರಾಂ ಗಡ್ಕರಿಯವರನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಖುದ್ದು ಭೇಟಿಯಾಗಿ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

    ಶಿವಮೂಗ್ಗ ಲೋಕಸಭಾ ಕ್ಷೇತ್ರದ ಪ್ರಮುಖ ರಾಜ್ಯ ಹೆದ್ದಾರಿಗಳ ಅಭಿವೃದ್ಧಿಗೆ ಒಪ್ಪಿಗೆ:
    ಜಿಲ್ಲೆಯ ಪ್ರಮುಖ ರಾಜ್ಯ ಹೆದ್ದಾರಿಗಳಾದ 1) ಶಿವಮೊಗ್ಗ- -ಹೊನ್ನಾಳಿ- ಮಲೆಬೆನ್ನೂರು-ಹರಿಹರ- ಹರಪನಹಳ್ಳಿ-ಮರಿಯಮ್ಮನಹಳ್ಳಿ ರಸ್ತೆ 2) ಶಿವಮೊಗ್ಗ-ಶಿಕಾರಿಪುರ-ಶಿರಾಳಕೊಪ್ಪ-ಹಾನಗಲ್-ತಡಸ ರಸ್ತೆ 3) ಆಯನೂರು-ರಿಪ್ಪನ್ಪೇಟೆ-ಹುಂಚ-ತೀರ್ಥಹಳ್ಳಿ-ಮಾಸ್ತಿಕಟ್ಟೆ-ಕುಂದಾಪುರ ರಸ್ತೆ ಹಾಗೂ 4)ಸಾಗರ – ಸೊರಬ – ಶಿರಾಳಕೊಪ್ಪ- ಆನವಟ್ಟಿ ರಸ್ತೆಗಳನ್ನು ಸಹ ಮೇಲ್ದರ್ಜೆಗೇರಿಸಿ 4 ಪಥದ ರಸ್ತೆಗಳನ್ನಾಗಿ ಅಗಲೀಕರಣಗೊಳಿಸಿಕೊಡಲು ಸಹ ಕೋರಲಾಗಿದ್ದು ಸನ್ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಸದರಿ ಹೆದ್ದಾರಿಗಳ ಅಗಲೀಕರಣ ಮಾಡಿ ಅಭಿವೃದ್ಧಿಗೊಳಿಸಲು ಒಪ್ಪಿಗೆ ನೀಡಲಾಗಿದೆ.

    Click here

    Click here

    Click here

    Call us

    Call us

    ಶಿವಮೊಗ್ಗ ನಗರ ಉತ್ತರ ಭಾಗದ ಬೈಪಾಸ್ ರಸ್ತೆಗೆ ಒಪ್ಪಿಗೆ:
    ಈ ಸಂದರ್ಭದಲ್ಲಿ ಸನ್ಮಾನ್ಯ ಕೇಂದ್ರ ಭೂಸಾರಿಗೆ ಸಚಿವರಿಗೆ ಶಿವಮೊಗ್ಗ ನಗರದ ಉತ್ತರ ಭಾಗದ ಭಾಕಿ ಉಳಿದ 15 ಕಿ.ಮೀ ಉದ್ದದ ಬೈಪಾಸ್ ರಸ್ತೆಗೆ ಮಂಜೂರಾತಿ ನೀಡಿ ಶಿವಮೊಗ್ಗ ನಗರಕ್ಕೆ 34 ಕಿ.ಮೀ ಉದ್ದದ ರಿಂಗ್ ರಸ್ತೆ ಪೂರ್ಣಗೊಳಿಸಲು ನೆರವು ನೀಡಲು ಕೋರಲಾಗಿದ್ದು ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸದಸ್ಯರಿಗೆ ಶಿವಮೊಗ್ಗ ನಗರದ ಉತ್ತರಬಾಗದ ಬೈಪಾಸ್ ರಸ್ತೆಗೆ ಮಂಜೂರಾತಿ ದೊರಕಿಸಿಕೊಡಲು ಕ್ರಮವಹಿಸಲು ಸೂಚಿಸಿರುತ್ತಾರೆ ಎಂದು ಸಂಸದರು ತಿಳಿಸಿದ್ದಾರೆ.

    ಇದನ್ನೂ ಓದಿ:
    ► ಮೀನುಗಾರಿಕೆಗೆ ಬಾಕಿ ಉಳಿದ ಸೀಮೆಎಣ್ಣೆ ಶೀಘ್ರ ಬಿಡುಗಡೆಗೊಳಿಸಲು ಸಂಸದ ಬಿ.ವೈ. ರಾಘವೇಂದ್ರ ಮನವಿ – https://kundapraa.com/?p=63741 .

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.