ಹಕ್ಲಾಡಿ ಸರಕಾರಿ ಪ್ರೌಢಶಾಯ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬೈಂದೂರು ತಾಲೂಕು ಇದರ ವತಿಯಿಂದ ಹಕ್ಲಾಡಿ ಸರಕಾರಿ ಪ್ರೌಢಶಾಲೆಯ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯೂಷನ್ ತರಗತಿಯನ್ನು ಪ್ರಾರಂಭಿಸಲಾಯಿತು.

Call us

Click Here

ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಕ್ಲಾಡಿ ಒಕ್ಕೂಟದ ಅಧ್ಯಕ್ಷ ಚಂದ್ರ ಪೂಜಾರಿ ಟ್ಯೂಷನ್ ತರಗತಿಗೆ ಬುಧವಾರ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ತಾಲೂಕು ಯೋಜನಾಧಿಕಾರಿ ವಿನಾಯಕ ಪೈ, ಶಾಲಾ ಮುಖ್ಯೋಪಾಧ್ಯಾಯ ಮಂಜುನಾಥ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಸಂಗೀತಾ, ಜನಜಾಗೃತಿ ವೇದಿಕೆ ಸದಸ್ಯ ಗಣಪಯ್ಯ ಶೆಟ್ಟಿ, ಪದಾಧಿಕಾರಿಗಳಾದ ರಾಜು ಗಾಣಿಗ, ಜ್ಞಾನವಿಕಾಸ ಸಮನ್ವಯಾಧಿಕಾರಿ ಗೀತಾ, ವಲಯ ಮೇಲ್ವಿಚಾರಕಿ ಪಾರ್ವತಿ, ಸೇವಾ ಪ್ರತಿನಿಧಿ ಜ್ಯೋತಿ, ಚಂದ್ರಹಾಸ, ಶಿಕ್ಷಕಿ ದೀಪಾ ಮತ್ತಿತರರು ಉಪಸ್ಥಿತರಿದ್ದರು.

Leave a Reply