Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೌಟ್ಸ್-ಗೈಡ್ಸ್ ಅಂತರರಾಷ್ಟ್ರೀಯ ಜಾಂಬೂರಿ: ಬೃಹತ್ ಸ್ವಚ್ಛತಾ ಅಭಿಯಾನ
    alvas nudisiri

    ಸೌಟ್ಸ್-ಗೈಡ್ಸ್ ಅಂತರರಾಷ್ಟ್ರೀಯ ಜಾಂಬೂರಿ: ಬೃಹತ್ ಸ್ವಚ್ಛತಾ ಅಭಿಯಾನ

    Updated:22/12/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಭಾರತ್ ಸೌಟ್ಸ್-ಗೈಡ್ಸ್ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಭಾಗವಾಗಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜಾಂಬೂರಿಯ ಎರಡನೇ ದಿನವಾದ ಗುರುವಾರ 8 ಕಡೆಗಳಲ್ಲಿ ಸುಮಾರು 5,000 ಸ್ಕೌಟ್ಸ್-ಗೈಡ್ಸ್ ಪ್ರಶಿಕ್ಷಾರ್ಥಿಗಳು ಹಾಗೂ ಇನ್ನಿತರ ಸ್ವಯಂಸೇವಕರು ಸ್ವಚ್ಛತಾ ಕಾರ್ಯ ಕೈಗೊಂಡರು.

    Click Here

    Call us

    Click Here

    ವಿದ್ಯಾರ್ಥಿಗಳ ಜತೆಗೆ ಗ್ರಾಮ ಪಂಚಾಯತ್ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಸ್ಥಳೀಯ ಶಾಲಾ ಕಾಲೇಜುಗಳ ಎನ್‌ಎಸ್‌ಎಸ್ ಹಾಗೂ ಎನ್‌ಸಿಸಿ ಸ್ವಯಂಸೇವಕರು ಹಾಗೂ ಸಾರ್ವಜನಿಕರು ಸ್ವಚ್ಛತೆಯಲ್ಲಿ ಭಾಗವಹಿಸಿದರು.

    ದ.ಕ ಜಿಲ್ಲಾಧಿಕಾರಿ ರವಿ ಕುಮಾರ್ ಎಂ. ಆರ್, ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಪ್ರಾಂಶುಪಾಲ ಡಾ. ಕುರಿಯನ್, ಅಕ್ಷಯ್ ಜೈನ್, ನಿತಿನ್, ಕುಮಾರಸ್ವಾಮಿ, ದೀಪಕ್ ಕೊಳಕೆ, ಮೂಸಾ ಶರೀಫ್, ನಿತಿನ್ ಪೂಜಾರಿ, ಅಮರ್ ಕೋಟೆ, ತನ್ವಿ ರೈ, ರಂಜಿತಾ ಆಚಾರ್ಯ, ಸುಧಾಕರ್ ಪೂಂಜಾ ಇನ್ನಿತರರು ಈ ಸ್ವಚ್ಚತಾ ಅಭಿಯಾನದ ನೇತೃತ್ವ ವಹಿಸಿದರು.

    ನೇತ್ರಾವತಿ ತಂಡ
    ೬೫೦ ವಿದ್ಯಾರ್ಥಿಗಳು ಹಾಗೂ ಇನ್ನಿತರ ಸ್ಥಳೀಯರನ್ನೊಳಗೊಂಡ ನೇತ್ರಾವತಿ ತಂಡವು ವಾಮಂಜೂರಿನಿಂದ ಗುರುಪುರದವರೆಗೆ ರಸ್ತೆಯ ಇಕ್ಕೆಲಗಳನ್ನು ಸ್ವಚ್ಚಗೊಳಿಸಿದರು.

    ಶರಾವತಿ ತಂಡ
    ಕಾರ್ಕಳದ 8 ರಸ್ತೆಗಳಲ್ಲಿ ಸ್ವಚ್ಚತೆ ಕೈಗೊಂಡ ಶರಾವತಿ ತಂಡದ ೨೫೦ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳು, ಭುವನೇಂದ್ರ ಕಾಲೇಜಿನ 150 ಎನ್‌ಎಸ್‌ಎಸ್ ಸ್ವಯಂಸೇವಕರು ದಾನ ಶಾಲೆ, ಗ್ಯಾಸ್ ಗೋಡೌನ್, ಆನೆಕೆರೆ, ಮೂರುಮಾರ್ಗ, ಸಾಣೂರು, ಪುಲ್ಕೇರಿ, ಅನಂತಶಯನ ರಸ್ತೆಗಳಲ್ಲಿ ಒಟ್ಟು ೫ ಕಿಮೀ ಸ್ವಚ್ಚತೆ ಹಮ್ಮಿಕೊಂಡರು.

    Click here

    Click here

    Click here

    Call us

    Call us

    ಶಾಂಭವಿ ತಂಡ
    ಮೂಲ್ಕಿ ಕಾರ್ನಾಡು ಜಂಕ್ಷನ್‌ನಿಂದ ಕಿಲ್ಪಾಡಿ ರೈಲ್ವೇ ಸ್ಟೇಷನ್‌ವರೆಗೆ, ಬಪ್ಪನಾಡು ದೇವಾಲಯದಿಂದ ಪುನರೂರಿನವರೆಗೆ ಶಾಂಭವಿ ತಂಡವು ಸುಮಾರು 7.2ಕಿ.ಮೀ ರಸ್ತೆಯನ್ನು ಸ್ವಚ್ಚಗೊಳಿಸಿದರು. ೨೫೦ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳು, 50 ಎನ್‌ಸಿಸಿ ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರ ಸ್ವಯಂಸೇವಕರು ಇದರ ಭಾಗವಾಗಿದ್ದರು.

    ಎತ್ತಿನಹೊಳೆ ತಂಡ
    ಎತ್ತಿನಹೊಳೆ ತಂಡವು ಬಂಟ್ವಾಳ-ಮೂಡುಬಿದಿರೆ ಜಂಕ್ಷನ್‌ನಿಂದ ಸೊರ್ನಾಡು ಅಂಗನವಾಡಿಯವರೆಗೆ ಸುಮಾರು 7.5 ಕೀಮೀನಷ್ಟು ರಸ್ತೆಯನ್ನು ಸ್ವಚ್ಚಗೊಳಿಸಿದರು. ೨೫೦ ಸೌಟ್ಸ್-ಗೈಡ್ಸ್ ವಿದ್ಯಾರ್ಥಿಗಳು,ಅಮ್ಟಾಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಪಂಜಿಕಲ್ ಗ್ರಾ.ಪಂ ಸದಸ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಸ್ಥಳೀಯರು ಸೇರಿದಂತೆ 800 ಮಂದಿ ಈ ಸ್ವಚ್ಛತೆಯಲ್ಲಿ ಪಾಲ್ಗೊಂಡರು.

    ಇತರ ತಂಡಗಳು
    ಹೊಸ್ಮಾರಿನ ಈದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 5 ಕೀಮೀ ಸ್ವಚ್ಚತೆಯನ್ನು ಪಯಸ್ವಿನಿ ತಂಡ, ಬೆಳ್ಮಣ್‌ನಲ್ಲಿ ಸ್ವರ್ಣಹೊಳೆ ತಂಡ ಜತೆಗೆ ಫಲ್ಗುಣಿ ಹಾಗೂ ನಂದಿನಿ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ

    08/12/2025

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025

    ಟ್ರೈ ಗ್ರಾಹಕರ ಹಕ್ಕುಗಳನ್ನು ರಕ್ಷಿಸುವ ಸಂಸ್ಥೆ: ಸೋಮಶೇಖರ್ ವಿ.ಕೆ.

    03/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ
    • ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು
    • ಕೋಟೇಶ್ವರದ ಶಿಕ್ಷಕಿಯೊಬ್ಬರ ಮನೆಯ ಕಾಪಾಟಿನಲ್ಲಿದ್ದ 18 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಕಳವು

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d