ಮಕ್ಕಳ ಪ್ರತಿಭೆ ಆನಾವರಣಕ್ಕೆ ಥೀಮ್ ಪಾರ್ಕ್ ವೇದಿಕೆ: ಪೂರ್ಣಿಮಾ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಮಕ್ಕಳ ಸಂಬಂಧಿತ ಕಾರ್ಯಕ್ರಮಗಳು ಮಕ್ಕಳ ಭೌತಿಕ ವಿಕಸನಕ್ಕೆ ಸಹಕಾರಿಯಾಗಿದ್ದು ಕಾರಂತರ ಆಸಕ್ತಿಯಂತೆ ಮಕ್ಕಳಿಗಾಗಿ ವಿವಿಧ ವಿನೂತನ ಕಾರ್ಯಕ್ರಮಗಳ ಆಯೋಜನೆ, ಪುರಸ್ಕಾರಗಳು ಮಕ್ಕಳಲ್ಲಿನ ಹೊಸ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರೆಪಿಸುತ್ತದೆ ಈ ನಿಟ್ಟಿನಲ್ಲಿ ಮಕ್ಕಳ ಪ್ರತಿಭೆ ಅನಾವರಣಕ್ಕೆ ಥೀಮ್ ಪಾರ್ಕ್ ವೇದಿಕೆಯಾಗಿ ರೂಪುಗೊಳ್ಳುತ್ತಿರುವುದು ಸಂತಸದ ವಿಷಯ ಎಂದು ಉಡುಪಿ ಜಿಲ್ಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ ಅವರು ಹೇಳಿದರು.

Call us

Click Here

ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ, ಡಾ|| ಶಿವರಾಮ ಕಾರಂತ ಅನೌಪಚಾರಿಕ ಶಿಕ್ಷಣ ಕೇಂದ್ರ ಕೋಟ ಇವರ ಆಶ್ರಯದಲ್ಲಿ ನಡೆದ ಕಾರಂತರ ಇಪ್ಪತ್ತೈದನೇ ಪುಣ್ಯ ಸ್ಮರಣೆ ಅಂಗವಾಗಿ ಮಕ್ಕಳ ಸಾಂಸ್ಕೃತಿಕ -ಸಾಹಿತ್ಯಿಕ ರಸಗವಳ ಅನೂಹ್ಯ-೨೦೨೨ (ನಾವೀನ್ಯದ ಗೌಜಿ) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.

ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ದಿನೇಶ್, ವಿವೇಕ ಬಾಲಕಿಯರ ಫ್ರೌಡಶಾಲೆ ಮುಖ್ಯೋಪಾದ್ಯಾಯರಾದ ಶ್ರೀ ಜಗದೀಶ್ ಹೊಳ್ಳ, ಕೋಟತಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಜಯರಾಮ್ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಕೋಟ ವಿವೇಕ ಬಾಲಕಿರ ಫ್ರೌಡಶಾಲಾ ವಿದ್ಯಾರ್ಥಿನಿಯರಿಂದ ಅಮರ ಸುಳ್ಯ ಕ್ರಾಂತಿ-೧೯೩೭ ಯಕ್ಷಗಾನ ತಾಳಮದ್ದಳೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Leave a Reply