Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಂಬೂರಿಯಲ್ಲಿ ಜೀವನ ಪಾಠ ಕಲಿಸಿದ ತುಳುಹಾಸ್ಯ
    alvas nudisiri

    ಜಂಬೂರಿಯಲ್ಲಿ ಜೀವನ ಪಾಠ ಕಲಿಸಿದ ತುಳುಹಾಸ್ಯ

    Updated:26/12/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ವಿದ್ಯಾಗಿರಿ:
    ಸಹಜ ನಟನೆ ಹಾಗೂ ಹಾಸ್ಯದ ಮೂಲಕ ಜೀವನ ಪಾಠಗಳನ್ನು ಜನರಿಗೆ ತಲುಪುವುದು ಒಂದು ಅಧ್ಬುತ ಕಲೆ. ಹೀಗೆ ವಿಭಿನ್ನ ಪಾತ್ರಗಳೊಂದಿಗೆ ಒಂದೂವರೆ ಗಂಟೆಗಳ ಕಾಲ ಪ್ರೇಕ್ಷಕರು ಒಂದಿಷ್ಟೂ ಕದಲದಂತೆ ಸೆಳೆದದ್ದು ಫ್ರೆಂಡ್ಸ್ ಮಂಗಳೂರು ಮತ್ತು ಪ್ರಶಂಸಾ ಕಾಪು ತಂಡದ ’ತುಳುಹಾಸ್ಯ’ ಕಾರ್ಯಕ್ರಮ.

    Click Here

    Call us

    Click Here

    ಮೂಡಬಿದ್ರೆಯ ಆಳ್ವಾಸ್ ಆವರಣದ ವಿದ್ಯಾಗಿರಿಯಲ್ಲಿ ನಡೆಯುತ್ತಿರುವ ೨೦೨೨ನೇ ಸಾಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮದ ಮೊದಲ ದಿನದಂದು ಕೃಷಿಸಿರಿ ವೇದಿಕೆಯಲ್ಲಿ ನಡೆದ ’ತುಳುಹಾಸ’ ಕಾರ್ಯಕ್ರಮ ನೆರೆದ ಜನ ಸಮೂಹವನ್ನು ನಗುವಿನ ಲೋಕಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಯಿತು.

    ಬಾಯಿ ತುಂಬ ನಗಬೇಕು ಎಂಬ ಹಾಡಿನೊಂದಿಗೆ ಉತ್ತಮ ಆರಂಭವನ್ನು ನೀಡಿದ ಪ್ರಶಂಸಾ ಕಾಪು ತಂಡದಲ್ಲಿ ಕಲಾವಿದರ ಪರದೆಯ ಹಿಂದಿನ ನಿಜವಾದ ಪರಿಶ್ರಮದ ವಿಚಾರ ಅಡಕವಾಗಿತ್ತು. ಮಕ್ಕಳಿಗೆ ಸೋಲನ್ನು ಎದುರಿಸಲು ಕಲಿಸಬೇಕು, ಅದುವೇ ಗೆಲುವಿನ ಹಾದಿಯೆಂಬ ಉತ್ತಮ ಸಂದೇಶವನ್ನು ನೀಡಿದವರು ಫ್ರೆಂಡ್ಸ್ ಮಂಗಳೂರು ತಂಡದ ಕಲಾವಿದರು.

    ಕಲಾ ತಂಡವನ್ನು ಮುನ್ನಡೆಸುವ ನಾಯಕನಿಗೆ ಇತರೆ ಕಲಾವಿದರನ್ನು ಒಗ್ಗೂಡಿಸಿ ಅಭಿನಯಿಸುವಾಗ ಯಾವೆಲ್ಲ ಎಡವಟ್ಟುಗಳಾಗುತ್ತವೆ ಎಂಬುದನ್ನು ಹಾಸ್ಯದ ಮೂಲಕ ವಿವರಿಸಿದರು. ಯಾವುದೇ ಅಂಜಿಕೆ ಇಲ್ಲದೆ ಪ್ರತೀ ಪಾತ್ರಕ್ಕೂ ಜೀವ ತುಂಬಿದ ಕಲಾವಿದರ ಪ್ರತಿಭೆ ಮೆಚ್ಚುವಂತಹದು.

    ಖಾಸಗಿ ಕಾರ್ಯಕ್ರಮದ ನಿರೂಪಣೆಯಲ್ಲಿ ತುಳುನಾಡಿನ ವಿಭಿನ್ನ ಮನಸ್ಥಿತಿಯ ಮೂವರು ಅತಿಥಿಗಳನ್ನು ಸುಂದರವಾಗಿ ಚಿತ್ರಿಸಲಾಗಿತ್ತು. ಕುಡುಕರ ಸಂಘದ ಅಧ್ಯಕ್ಷ ಬಸಪ್ಪ, ನಾಟಿ ವೈದ್ಯ ಹಾಗೂ ಸ್ತ್ರೀ ಪಾತ್ರಧಾರಿ ಉಮಾಶಂಕರ್ ನಡುವಿನ ಸಂಭಾಷಣೆ ಮತ್ತೆ ಮತ್ತೆ ಕೇಳುವಂತಿತ್ತು. ಈ ಹಾಸ್ಯಮಯ ದೃಶ್ಯವನ್ನು ವೀಕ್ಷಿಸುತ್ತಿರುವ ಪ್ರೇಕ್ಷಕರ ಪ್ರತಿಕ್ರಿಯೆಯೂ ಮನಸ್ಸಿಗೆ ಖುಷಿ ನೀಡುತ್ತಿತ್ತು.

    Click here

    Click here

    Click here

    Call us

    Call us

    ಮಗಳನ್ನು ಶ್ರೇಷ್ಠ ನೃತ್ಯಗಾರ್ತಿಯನ್ನಾಗಿ ಮಾಡಬೇಕೆಂಬ ತಾಯಿ ಮಾಧ್ಯಮದೊಂದಿಗೆ ತಮ್ಮ ಮನದಾಳದ ಮಾತುಗಳನ್ನು ಹಾಸ್ಯಭರಿತವಾಗಿ ಹಂಚಿಕೊಳ್ಳುತ್ತಿದ್ದರು. ಸದಾ ಕ್ರಿಕೇಟ್ ಬೆಟ್ಟಿಂಗ್‌ನಲ್ಲಿ ಮುಳುಗಿರುವ ವ್ಯಕ್ತಿಯೊಬ್ಬ ನಿರೂಪಕನನ್ನೇ ಮುಜುಗರಗೊಳಿಸಿ ಪಂದ್ಯದಲ್ಲಿ ಹಣಗಳಿಸಿದ ರೀತಿ ಆತುರದ ನಿರ್ಧಾರ ಒಳ್ಳೆಯದಲ್ಲ ಎಂಬುದನ್ನು ನಿರೂಪಿಸುತ್ತಿತ್ತು.ಹೀಗೆ ತುಳು ಸಂಭಾಷಣೆಯೊಂದಿಗೆ ಒಬ್ಬರನ್ನೊಬ್ಬರು ಕಾಲೆಳೆಯುತ್ತಿದ್ದ ದೃಶ್ಯ ಎಂತವರೂ ಒಮ್ಮೆ ವೇದಿಕೆಯತ್ತ ಇಣುಕುವಂತೆ ಮಾಡುತ್ತಿತ್ತು.

    ಕಲಾವಿದರೂ ವೇದಿಕೆಯ ತಮ್ಮ ಅನುಭವವನ್ನು ಹಂಚಿಕೊಂಡು ಹರುಷ ವ್ಯಕ್ತಪಡಿಸಿದರು. ಪ್ರತೀ ವರ್ಷವೂ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯಕ್ರಮವನ್ನು ನೀಡುತ್ತಿದ್ದು, ಈ ಬಾರಿಯೂ ಉತ್ತಮ ಅವಕಾಶವನ್ನು ಮಾಡಿಕೊಟ್ಟ ಸಂಸ್ಥೆಗೆ ಆಭಾರಿ ಎಂದು ಕಲಾವಿನ ಪ್ರಸನ್ನ ಶೆಟ್ಟಿ ಹೇಳಿದರು.

    ಪ್ರತೀ ಬಾರಿ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಬಂದಾಗ ತಮ್ಮ ಮನೆಗೆ ಬಂದ ಅನುಭವವಾಗುತ್ತದೆ. ಕಲಾವಿದರಿಗೆ ಸಂಸ್ಥೆಯ ಅಧ್ಯಕ್ಷರು ಉತ್ತಮ ಪ್ರೋತ್ಸಾಹ ನೀಡುತ್ತಾರೆ ಎಂದು ಮಂಗಳೂರು ಫ್ರೆಂಡ್ಸ್ ತಂಡದ ಕಲಾವಿದ ಮರ್ವಿನ್ ಹೇಳಿದರು.

    ಕಾರ್ಯಕ್ರಮದ ಪ್ರತೀ ಸಂಭಾಷಣೆಯೂ ಮನಸಿಗೆ ಮುದ ನೀಡುತ್ತಿದ್ದು ಜನರಿಗೆ ಅತ್ತಿತ್ತ ಕಣ್ಣು ಹಾಯಿಸಲು ಅವಕಾಶ ನೀಡಲಿಲ್ಲ. ತುಳು ಭಾಷಾ ಸೊಗಡಿನೊಂದಿಗೆ ಜನ ಸಾಮಾನ್ಯನ ಪಾತ್ರದಲ್ಲಿ ಜನರ ಮುಖದ ಮಂದಹಸವನ್ನು ಇಮ್ಮಡಿಗೊಳಿಸಿದರು.

    • ವರದಿ: ರಕ್ಷಾ ಕೋಟ್ಯಾನ್, ದ್ವಿತೀಯ ವರ್ಷ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ, ಉಜಿರೆ.
    • ಚಿತ್ರ: ಅರ್ಪಿತ್ ಇಚ್ಛೆ

    Like this:

    Like Loading...

    Related

    SDM Ujire Students
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025

    ಟ್ರೈ ಗ್ರಾಹಕರ ಹಕ್ಕುಗಳನ್ನು ರಕ್ಷಿಸುವ ಸಂಸ್ಥೆ: ಸೋಮಶೇಖರ್ ವಿ.ಕೆ.

    03/12/2025

    ಆಳ್ವಾಸ್‌ನ ಧನಲಕ್ಷ್ಮೀಗೆ ಅಭಿನಂದನಾ ಸಮಾರಂಭ

    02/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d