Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಾಂಬೂರಿಯಲ್ಲಿ ವಿವಿಧ ರಾಜ್ಯಗಳ ರೋವರ್ಸ್ ರೇಂಜರ್ಸ್ಸ್ ಕಲಾ ವೈವಿಧ್ಯ
    alvas nudisiri

    ಜಾಂಬೂರಿಯಲ್ಲಿ ವಿವಿಧ ರಾಜ್ಯಗಳ ರೋವರ್ಸ್ ರೇಂಜರ್ಸ್ಸ್ ಕಲಾ ವೈವಿಧ್ಯ

    Updated:26/12/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ವಿದ್ಯಾಗಿರಿ:
    ವಿವಿಧ ರಾಜ್ಯಗಳ ಸಂಸ್ಕೃತಿ – ಸಾಂಸ್ಕೃತಿಕ ಪ್ರದರ್ಶನಕ್ಕೆ ಆಳ್ವಾಸ್ ವಿದ್ಯಾಸಂಸ್ಥೆಯ ಕೆ.ವಿ. ಸುಬ್ಬಣ್ಣ ಬಯಲು ರಂಗಮಂದಿರ ಸಾಕಿಯಾಯಿತು.

    Click Here

    Call us

    Click Here

    ಈಸ್ಟರ್ನ್ ರೈಲ್ವೆಯ ರೋವರ್ಸ್ಸ್ ಮತ್ತು ರೇಂಜರ್ಸ್ಸ್ ಕಲಾವಿದರು ಸ್ವಾತಂತ್ರ್ಯ ಅಮೃತಮಹೋತ್ಸವದ ಸವಿ ನೆನಪಿನಲ್ಲಿ ಹೋರಾಡಿ ಮಡಿದ ವೀರ ಯೋಧರಿಗೆ ನೃತ್ಯದ ಮುಖೇನ ಗೌರವ ನಮನ ಸಲ್ಲಿಸಿದರು. ಶ್ವೇತ ವರ್ಣದ ವಸ್ತ್ರ ಮತ್ತು ತ್ರಿವರ್ಣ ಧ್ವಜದೊಂದಿಗಿನ ಅವರ ನೃತ್ಯ ಪ್ರದರ್ಶನ ಭಾರತ ಮಾತೆಯ ಪ್ರಭಾವಳಿಯನ್ನು ಪ್ರತಿಬಿಂಬಿಸಿತು.

    ಡೊಳ್ಳು ಕುಣಿತದಲ್ಲಿ ಗಂಡು ಹೆಣ್ಣೆಂಬ ಬೇಧ ಭಾವವಿಲ್ಲದೆ ರಾಯಚೂರಿನ ವಿದ್ಯಾರ್ಥಿಗಳು ಕುಣಿದ ರೀತಿ ಪ್ರೇಕ್ಷಕರಲ್ಲೂ ತಾವೂ ಡೊಳ್ಳು ನುಡಿಸಬೇಕು ಎನ್ನುವ ಹುಮ್ಮಸ್ಸು. ಅದರಲ್ಲೂ ಆ ತಂಡದ ಮಾರ್ಗದರ್ಶಕರು ವೇದಿಕೆಯ ಬದಿಯಲ್ಲಿಯೇ ನಿಂತು ಕೈ ಸನ್ನೆಯಲ್ಲಿಯೇ ತಮ್ಮ ಮಕ್ಕಳಿಗೆ ಧೈರ್ಯ ತುಂಬಿದರು.

    ಕರ್ನಾಟಕವೂ ಸೇರಿದಂತೆ ಹೊರ ರಾಜ್ಯಗಳ ಪ್ರಾದೇಶಿಕ ಸಂಸ್ಕೃತಿ ಬಿಂಬಿಸುವ ವಿಭಿನ್ನ ಉಡುಗೆ-ತೊಡುಗೆಗಳೊಂದಿಗೆ ಮಿಂಚುತ್ತಿದ್ದ ವಿದ್ಯಾರ್ಥಿಗಳು ಯಾವಾಗ ವೇದಿಕೆಗೆ ಹೋಗುತ್ತೇವೋ ಎಂದು ಕಾತುರದಿಂದ ಕಾಯುತ್ತಿರುವುದು ಒಂದೆಡೆಯಾದರೆ, ವೇದಿಕೆ ಎಡಭಾಗದಲ್ಲಿ ಕೆಲ ವಿದ್ಯಾರ್ಥಿಗಳ ಗುಂಪು ನೃತ್ಯದ ತಯಾರಿಯನ್ನು ಮಾಡುವ ಉತ್ಸಾಹದಲ್ಲಿದ್ದರು. ಹಿಮಾಚಲ ಪ್ರದೇಶ, ಒಡಿಸ್ಸಾ, ಈಸ್ಟರ್ನ್ ರೈಲ್ವೆ ಸೇರಿದಂತೆ ಕರ್ನಾಟಕದ ಪ್ರತೀ ಜಿಲ್ಲೆಯಿಂದ ತಲಾ ಒಂದು ತಂಡ ನೃತ್ಯ ವೈಭವದ ಮೂಲಕ ತಮ್ಮ ಪ್ರತಿಭಾ ಪ್ರದರ್ಶನಗೊಳಿಸಿದರು.

    ಕುದುರೆ ಏರಿ ಸೂರ್ಯ ಬಂದಾನೆ’ ಎಂದು ಬಾಗಲಕೋಟೆಯ ವಿದ್ಯಾರ್ಥಿಗಳು ಕೋಲಾಟವಾಡಿದರು. ಒಂದೇ ನೃತ್ಯದಲ್ಲಿ ಬೇರೆ ಬೇರೆ ಹಾಡುಗಳನ್ನು ಹೊಂದಿಸಿ ಅವುಗಳಿಗೆ ತಕ್ಕನಾಗಿ ನರ್ತಿಸಿರುವುದು ಪತ್ರಿಭಾ ಪ್ರದರ್ಶನದ ಮೆರುಗನ್ನು ಹೆಚ್ಚಿಸಿತು. ಉಡುಪಿ, ಶಿವಮೊಗ್ಗ, ಬಳ್ಳಾರಿ, ರಾಮನಗರ, ಚಿಕ್ಕಮಗಳೂರು,ಕಲಬುರ್ಗಿ, ಬೆಳಗಾಂ, ಯಾದಗಿರಿ, ಹಾವೇರಿ ಜಿಲ್ಲೆಯ ವಿದ್ಯಾರ್ಥಿಗಳು ಪ್ರತಿಭಾ ಪ್ರದರ್ಶನದಲ್ಲಿ ಸೈ ಎನಿಸಿಕೊಂಡರು.

    Click here

    Click here

    Click here

    Click Here

    Call us

    Call us

    • ವರದಿ: ರಕ್ಷಾ ಕೋಟ್ಯಾನ್, ದ್ವಿತೀಯ ವರ್ಷ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ ಉಜಿರೆ
    SDM Ujire Students
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

    21/04/2026

    ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್‌

    20/04/2026
    Leave A Reply Cancel Reply

    ten − 9 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.