Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರಕಾರದ ಯೋಜನೆಗಳು ಸಮರ್ಪಕ ಅನುಷ್ಠಾನದಿಂದ ಆದರ್ಶ ಗ್ರಾಮ ಸಾಕಾರ: ಆಸ್ಕರ್
    ಊರ್ಮನೆ ಸಮಾಚಾರ

    ಸರಕಾರದ ಯೋಜನೆಗಳು ಸಮರ್ಪಕ ಅನುಷ್ಠಾನದಿಂದ ಆದರ್ಶ ಗ್ರಾಮ ಸಾಕಾರ: ಆಸ್ಕರ್

    Updated:25/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಶಿರೂರಿನಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

    Click Here

    Call us

    Click Here

    ಬೈಂದೂರು: ಶಿರೂರು ಗ್ರಾಮದಲ್ಲಿನ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಅಂಗವಿಕಲರು, ನಿರ್ಗತಿಕರು, ಅಶಿಕ್ಷಿತ ಮಕ್ಕಳು ಹಾಗೂ ಇತರೆ ಫಲಾನುಭವಿಗಳಿಗೆ ನೂರಕ್ಕೆ ನೂರರಷ್ಟು ಸರಕಾರಿ ಸೌಲಭ್ಯಗಳು ದೊರೆತಾಗ ಮಾತ್ರ ಆದರ್ಶ ಗ್ರಾಮ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತದೆ. ಆ ನಿಟ್ಟಿನಲ್ಲಿ ಇಲ್ಲಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೆಲಸ ಮಾಡಬೇಕಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಹೇಳಿದರು.

    ಅವರು ಶಿರೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಂಸದರ ಆದರ್ಶ ಗ್ರಾಮ ಯೋಜನೆಯ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಈಗಾಗಲೇ ಶಿರೂರು ಗ್ರಾಮದ ಆಸ್ಪತ್ರೆ, ರಸ್ತೆ, ಸೇತುವೆ, ಕುಡಿಯುವ ನೀರು, ಮೀನುಗಾರಿಕಾ ಜಟ್ಟಿ ಮುಂತಾದವುಗಳಿಗೆ ಅನುದಾನ ಮಂಜೂರು ಮಾಡಲಾಗಿದ್ದು ಕೆಲಸ ಪ್ರಗತಿಯಲ್ಲಿದೆ. ಗ್ರಾಮದ ಜನರು ಆರ್ಥಿಕವಾಗಿ ಸಬಲರಾಗುವ ನಿಟ್ಟಿನಲ್ಲಿ ಹೈನುಗಾರಿಕೆ, ಕೋಳಿ ಸಾಕಣೆಯಂತಹ ಸಣ್ಣ ಉದ್ದಿಮೆಗಳತ್ತ ಗಮನಹರಿಸಬೇಕು. ಮಹಿಳಾ ಸಂಘಟನೆ, ಯುವ ಸಂಘಟನೆಗಳ ಬಲವರ್ಧನೆಯಾಗಬೇಕು. ಇವೆಲ್ಲವೂ ಆದರ್ಶ ಗ್ರಾಮದ ಕನಸಿಗೆ ಪೂರಕವಾದವುಗಳು ಎಂದರು. ಇಂದಿನ ಸಭೆಯಲ್ಲಿ ಸಭೆಯಲ್ಲಿ ಚರ್ಚಿತವಾದ ವಿಚಾರಗಳು ಮುಂದಿನ ಸಭೆಯೊಳಗೆ ಕಾರ್ಯರೂಪಕ್ಕೆ ಬರಬೇಕು ಎಂದವರು ನಿರ್ದೇಶನ ನೀಡಿದರು. (ಕುಂದಾಪ್ರ ಡಾಟ್ ಕಾಂ ವರದಿ)

    ಬಳಿಕ ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ ಶಿರೂರಿನ ಮೂಲಭೂತ ಸೌಕರ್ಯಗಳನ್ನು ಪೂರೈಸುವ ದೃಷ್ಟಿಯಲ್ಲಿ ಇಂದಿನ ಸಭೆಯಲ್ಲಿ ಹಲವಾರು ವಿಚಾರಗಳು ಪ್ರಸ್ತಾಪವಾಗಿದೆ. ರಸ್ತೆಯ ಡಾಂಬರೀಕರಣ, ದಾರಿದೀಪ ಸಮಸ್ಯೆ ಬಗೆಹರಿಸಲು ವಿದ್ಯುತ್ ಇಲಾಖಾ ಸಿಬ್ಬಂದಿ ಹಾಗೂ ಉಪಕೇಂದ್ರ ಸ್ಥಾಪನೆಗೆ ಈಗಾಗಲೇ ಹಸಿರು ನಿಶಾನೆ ದೊರೆತಿದೆ. ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ವೆಂಟೆಡ್ ಡ್ಯಾಂ ಸ್ಥಾಪಿಸಲು ಹಾಗೂ ಆಸ್ಪತ್ರೆಯ ಕಟ್ಟಡ ಕಾಮಗಾರಿಯನ್ನು ಶೀಘ್ರ ಚಾಲನೆಗೊಳಿಸಲು ಜಿಲ್ಲಾಧಿಕಾರಿಯಿಂದ ಶೀಘ್ರ ಅನುಮತಿ ದೊರಕಿಸಿಕೊಡುವ ಕೆಲಸವಾಗಬೇಕಿದೆ ಎಂದರು. (ಕುಂದಾಪ್ರ ಡಾಟ್ ಕಾಂ ವರದಿ)

    ಸಭೆಯಲ್ಲಿದ್ದ ಗ್ರಾಮಸ್ಥರು ತಮ್ಮ ಕುಂದು ಕೊರತೆಗಳನ್ನು ಹೇಳಿಕೊಂಡರು. ಅಧಿಕಾರಿಗಳು ಆ ಯೋಜನೆಯ ಪ್ರಗತಿಯ ಹಂತ ಹಾಗೂ ಕಾರ್ಯಯೋಜನೆಯ ಬಗ್ಗೆ ತಿಳಿಸಿದರು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ತಾ.ಪಂ ಸದಸ್ಯರಾದ ರಾಜು ಪೂಜಾರಿ, ರಮೇಶ ಗಾಣಿಗ ಕೊಲ್ಲೂರು, ಸಾವಿತ್ರಿ ಅಳ್ವೆಗದ್ದೆ, ಗ್ರಾ,ಪಂ ಉಪಾಧ್ಯಕ್ಷ ನಾಗೇಶ್ ಅಳ್ವೆಗದ್ದೆ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಜಿ. ಎಂ. ವಾಮದೇವ್, ಜಿಲ್ಲಾ ಆರೋಗ್ಯಾಧಿಕಾರಿ ರೋಹಿಣಿ, ಬೈಂದೂರು ವಿಶೇಷ ತಹಶೀಲ್ದಾರ್ ಕಿರಣ ಗೌರಯ್ಯ, ನೋಡೆಲ್ ಅಧಿಕಾರಿ ಚಂದ್ರಶೇಖರ ನಾಯ್ಕ್, ಕಾಂಗ್ರೆಸ್ ಮುಖಂಡ್ ಎಂ. ಎ. ಗಪೂರ್, ಶಿರೂರು ಪಂಚಾಯತ್‌ನ ಸದಸ್ಯರುಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗವೇಣಿ ನಿರೂಪಿಸಿದರು.

    Oskar Meeting photo -Sunil Byndoor (2)

    Byndoor Byndoor MLA News Shiruru
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    1 × 4 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.