Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಾಂಜೂರಿಯ ಮೂಲಕ ಮನಸ್ಸು ಕಟ್ಟುವ ಕಾರ್ಯ, ಲಕ್ಷಾಂತರ ಮಂದಿ ಭಾಗಿ – ಡಾ. ಎಂ ಮೋಹನ ಆಳ್ವ
    alvas nudisiri

    ಜಾಂಜೂರಿಯ ಮೂಲಕ ಮನಸ್ಸು ಕಟ್ಟುವ ಕಾರ್ಯ, ಲಕ್ಷಾಂತರ ಮಂದಿ ಭಾಗಿ – ಡಾ. ಎಂ ಮೋಹನ ಆಳ್ವ

    Updated:26/12/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಜಾಂಬೂರಿ ಕೇವಲ ಜನಜಾತ್ರೆಯಾಗದೇ ಸ್ಕೌಟ್ಸ್ ಗೈಡ್ಸ್ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ವೇದಿಕೆಯನ್ನಾಗಿ ನಿರ್ಮಿಸಲಾಗಿತ್ತು. ವಿದ್ಯಾರ್ಥಿಗಳಿಗಷ್ಟೇ ಮೀಸಲಾಗಿರಿಸಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರೂ ಭಾಗವಹಿಸುವಂತೆ ಮಾಡಲಾಗಿದೆ. ಪರಿಣಾಮವಾಗಿ ಏಳು ದಿನಗಳ ಉತ್ಸವದಲ್ಲಿ ಲಕ್ಷಾಂತರ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ಕೌಟ್ಸ್ ಗೈಡ್ಸ್ ಮಹತ್ವ ಅರಿಯುವ ಜೊತೆಗೆ, ಸಾಂಸ್ಕೃತಿಕ ಸೊಬಗನ್ನು ಸವಿಯುವಂತಾಯಿತು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು.

    Click Here

    Call us

    Click Here

    https://youtu.be/gYrtVV0w8v4

    ಅವರು ಸೋಮವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಡಿಮೆ ಅವಧಿಯಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜನೆ ಸವಾಲೇ ಆದರೂ, ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿರುವ ಒಂದಿಷ್ಟು ಮೂಲಭೂತ ಸೌಕರ್ಯದ ಕಾರಣದಿಂದ ಆಯೋಜನೆ ಸುಲಭಸಾಧ್ಯವಾಯಿತು. 60,000 ಕ್ಕೂ ಅಧಿಕ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು, 13,000 ದಷ್ಟು ಅಧಿಕಾರಿಗಳು, ಸ್ವಯಂ ಸೇವಕರು ಜಾಂಬೂರಿಯಲ್ಲಿ ಭಾಗವಹಿಸಿದ್ದರು. ಅಲ್ಲದೇ ಪ್ರತ್ಯೇಕವಾಗಿ ಸಾವಿರಾರು ಸಾರ್ವಜನಿಕರು ಜಾಂಬೂರಿಯ ಸವಿಯನ್ನು ಸವಿದಿದ್ದಾರೆ. ಶನಿವಾರ – ಭಾನುವಾರ ಎರಡೂ ದಿನ 1 ಲಕ್ಷಕ್ಕೂ ಅಧಿಕ ಮಂದಿ ಸಾರ್ವಜನಿಕರು ಭೇಟಿ ನೀಡಿರುವುದು ಸಂತಸ ತಂದಿದೆ ಎಂದರು.

    ಜಾಂಬೂರಿಯ ಮೂಲಕ ಪ್ರತಿಯೊಬ್ಬರಲ್ಲೂ ಸ್ಕೌಟ್ಸ್ ಗೈಡ್ಸ್ ಬಗ್ಗೆ ಅರಿವು ಮೂಡಿಸುವುದು ನಮ್ಮ ಉದ್ದೇಶವಾಗಿತ್ತು. ಇಲ್ಲಿಗೆ ಭೇಟಿ ನೀಡಿರುವ ಲಕ್ಷಾಂತರ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಮುಂದಿನ ದಿನದಲ್ಲಿ ಅದರ ಬಗ್ಗೆ ಒಂದಿಷ್ಟು ಯೋಚಿಸುವಂತೆ ಮಾಡಲಿದೆ ಎಂದರು.

    ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ನಿರಂತರವಾಗಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲು ಜಂಗಲ್ ಟ್ರಯಲ್, ಚಾಲೆಂಜ್ ವ್ಯಾಲಿ, ಫನ್ ಗೇಮ್, ವಿವಿಧ ವಿಷಯ ಪರಿಣತರಿಂದ ತರಬೇತಿ, ಸ್ವಚ್ಛತಾ ಅಭಿಯಾನ, ಜಾದೂ ಪ್ರದರ್ಶನ, ಸಿನಿಮಾ ಪ್ರದರ್ಶನ, ವಿವಿಧ ರಾಜ್ಯಗಳ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಗಳು ಬೆಳಗ್ಗಿನ ಅವಧಿಯಲ್ಲಿ ನಡೆದರೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು. ಪ್ರತಿನಿತ್ಯವೂ ಆಯಾ ರಾಜ್ಯಗಳ ಆಹಾರಕ್ರಮಕ್ಕೆ ಅನುಸಾರವಾಗಿ ಬೆಳಿಗ್ಗೆ ಉಪಹಾರ, ಮಧ್ಯಾಹ ಹಾಗೂ ರಾತ್ರಿ ಊಟ, ಸಂಜೆಯ ತಿನಿಸು ವ್ಯವಸ್ಥೆ ಮಾಡಲಾಗಿತ್ತು. ಎಲ್ಲಿಯೂ ತೊಡಕಾಗದಂತೆ ಕಾರ್ಯಕ್ರಮ ಜರುಗಿದೆ ಎಂದರು.

    ಜಾಂಬೂರಿಯ ಪ್ರಮುಖ ಆಕರ್ಷಣೆಯಾಗಿದ್ದ ಕೃಷಿಸಿರಿ, ವಿಜ್ಞಾನ ಮೇಳ, ಪುಸ್ತಕಮೇಳ, ಕಲಾಮೇಳ, ಆಹಾರೋತ್ಸವ ಮೇಳ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಸಾರ್ವಜನಿಕರಿಗೆ ಪ್ರತ್ಯೇಕ ಕಾರ್ಯಕ್ರಮ ವ್ಯವಸ್ಥೆ ಮಾಡಲಾಗಿತ್ತು. ಕಲಾವೇಳದಲ್ಲಿ ಪ್ರಖ್ಯಾತ ಕಲಾವಿದರು ಭಾಗಹಿಸಿದ್ದರು. ಛಾಯಾಚಿತ್ರ ಪ್ರದರ್ಶನಗಳು ಸಾರ್ವಜನಿಕರು ಗಮನ ಸೆಳೆದಿದ್ದವು. ಎಲ್ಲಾ ವಿಭಾಗದ ಕಾರ್ಯಕ್ರಮಗಳು, ಪ್ರದರ್ಶನಗಳು ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ ಎಂದರು.

    Click here

    Click here

    Click here

    Call us

    Call us

    ಪಿಳಿಕುಳದಲ್ಲಿ ಯುವಶಕ್ತಿ ಕೇಂದ್ರ:
    ಮುಂದಿನ ಒಂದು ವರ್ಷದಲ್ಲಿ ಜಾಂಬೂರಿಯ ನೆನಪಿಗೆ ಒಂದು ಯುವಶಕ್ತಿ ಕೇಂದ್ರ ನಿರ್ಮಿಸಲುವ ಯೋಜನೆಯಿದ್ದು, ಸರಕಾರದ ನೆರವು ಅಗತ್ಯವಿದೆ. ಮಂಗಳೂರಿನಲ್ಲಿ ಸ್ಕೌಟ್ಸ್ ಗೈಡ್ಸ್, ಎನ್‌ಸಿಸಿ, ಎನ್‌ಎಸ್‌ಎಸ್ ಶಿಬಿರ, ಪೊಲೀಸ್ ಕವಾಯತು, ಮಿಲಿಟರಿ ಪೆರೆಡ್ ಮೊದಲಾದ ಉದ್ದೇಶಗಳಿಗೆ ಕನಿಷ್ಠ 1000 ಮಂದಿ ಉಳಿದುಕೊಳ್ಳಬಹುದಾದ ಮೈದಾನದ ಅಗತ್ಯವಿದ್ದು, ಪಿಳಿಕುಳದಲ್ಲಿ ಸ್ಕೌಟ್ಸ್ ಗೈಡ್ಸ್ ಮೀಸಲಿರಿಸಿದ ಜಾಗದಲ್ಲಿ ನೂತನ ಕಟ್ಟಡ ನಿರ್ಮಿಸಲು ಯೋಜಿಸಲಾಗಿದೆ ಎಂದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್ ಕಾನೂನು ಕಾಲೇಜು: ಎನ್‌ಎಸ್‌ಎಸ್ ಮತ್ತು ರೆಡ್‌ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ

    09/11/2025

    ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್‌ನ 13 ವಿದ್ಯಾರ್ಥಿಗಳು ಉತ್ತೀರ್ಣ  

    08/11/2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು: ವಿಟಿಯು ರಾಜ್ಯಮಟ್ಟದ ವೇಟ್ ಲಿಫ್ಟಿಂಗ್ ಮತ್ತು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಾಂಪಿಯನ್ಸ್

    07/11/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಆಳ್ವಾಸ್ ಕಾನೂನು ಕಾಲೇಜು: ಎನ್‌ಎಸ್‌ಎಸ್ ಮತ್ತು ರೆಡ್‌ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ
    • ಇಸ್ರೇಲ್‌ನ ಜನತೆಯ ಮನಗೆದ್ದ ಬೆಂಗಳೂರಿನ ಯಕ್ಷದೇಗುಲ ಯಕ್ಷಗಾನ ವೈಭವ
    • ತ್ರಾಸಿ ಬಳಿ ನಿಂತಿದ್ದ ಲಾರಿಯಲ್ಲಿ ಚಾಲಕನ ಮೃತದೇಹ ಪತ್ತೆ
    • ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯ್ದ 21 ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ ವಿತರಣೆ
    • ಗುಜ್ಜಾಡಿ: ನಾಯಿಗಳಿಗೆ ಹಾಗೂ ಬೆಕ್ಕುಗಳಿಗೆ ಉಚಿತ ರೇಬಿಸ್ ನಿರೋಧಕ ಲಸಿಕಾ ಶಿಬಿರ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d