Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿಗೆ ಅಪ್ಪಣ್ಣ ಹೆಗ್ಡೆ ಜೀವಮಾನ ಸಾಧನಾ ಪ್ರಶಸ್ತಿ
    ಊರ್ಮನೆ ಸಮಾಚಾರ

    ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿಗೆ ಅಪ್ಪಣ್ಣ ಹೆಗ್ಡೆ ಜೀವಮಾನ ಸಾಧನಾ ಪ್ರಶಸ್ತಿ

    Updated:04/01/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಆಧ್ಯಾತ್ಮ ರಹಸ್ಯ ಮಾಸಪತ್ರಿಕೆ, ಬೀಜಾಡಿ ಗೋಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ಯಕ್ಷಕಲಾ ಸಂಘ, ಕೋಟೇಶ್ವರ ಓಂಶಾಂತಿ ಪ್ರೊಡೆಕ್ಷನ್, ಕುಂದಾಪುರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಪತ್ರಿಕಾ ಕೃಷಿಯಲ್ಲಿ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ ಶ್ರೀ ಅಪ್ಪಣ್ಣ ಹೆಗ್ಡೆ ಜೀವಮಾನ ಶ್ರೇಷ್ಠ ಸಾಧನಾ ಪ್ರಶಸ್ತಿ ಹಾಗೂ 10 ಸಾವಿರ ನಗದು ಪುರಸ್ಕಾರಕ್ಕೆ ವಿಜಯವಾಣಿ ಹಿರಿಯ ವರದಿಗಾರ ಆರ್. ಶ್ರೀಪತಿ ಹೆಗಡೆ ಹಕ್ಲಾಡಿ ಆಯ್ಕೆ ಆಗಿದ್ದಾರೆ.

    Click Here

    Call us

    Click Here

    ನೇರ, ದಿಟ್ಟ ವರದಿಗಾರಿಕೆಯ ಮೂಲಕ ಪತ್ರಿಕಾರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಹಿರಿಯ ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ, ಅವರ ಹತ್ತಾರು ವರದಿಗಳು ಮಹತ್ತರ ಸಾಮಾಜಿಕ ಬದಲಾವಣೆಗೆ ಕಾರಣವಾಗಿರುವುದಲ್ಲದೇ, ಆಡಳಿತಯಂತ್ರವನ್ನು ನಿರಂತರವಾಗಿ ಎಚ್ಚರಿಸುತ್ತಲೇ ಬಂದಿದೆ.

    ಹಕ್ಲಾಡಿ ಅವರಿಗೆ ಕರ್ನಾಟಕ ರಾಜ್ಯ ಕಲಾವಿದರ ಕಲ್ಯಾಣ ವೇದಿಕೆಯು ಕೊಡಮಾಡುವ `ಕಡಲ ತೀರದ ಭಾರ್ಗವ ಡಾ. ಕೆ. ಶಿವರಾಮ ಕಾರಂತ ಸದ್ಭಾವನಾ ರಾಜ್ಯ ಪ್ರಶಸ್ತಿ’, ಮಾನವ ಹಕ್ಕು ಮಂಡಳಿ- ಬೆಂಗಳೂರು ಸಂಸ್ಥೆಯು ಕೊಡಮಾಡುವ ರಾಜ್ಯ ಮಟ್ಟದ ‘ಟಿಪ್ಪು ಸುಲ್ತಾನ್ ಸದ್ಭಾವನಾ ಪ್ರಶಸ್ತಿ’, ಬಿಜಾಪುರದ ಶ್ರೀ ಬಸವೇಶ್ವರ ಕರ್ಮವೀರ ಕಲಾ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯು ಕೋಡಮಾಡುವ ‘ಬಸವ ಜ್ಯೋತಿ ರಾಜ್ಯ ಪ್ರಶಸ್ತಿ’, ಕಾರ್ಮಿಕ ವೇದಿಕೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ, ಪುರಸ್ಕಾರಗಳು ದೊರೆತಿವೆ.

    ಜ.27, ಸಂಜೆ 5ಕ್ಕೆ ನಡೆಯುವ ನಮ್ಮೂರ ಹಬ್ಬ ಗೋಪಾಡಿ ಗೆಂಡೋತ್ಸವ ವೇದಿಕೆಯಲ್ಲಿ ಕೇಮಾರು ಸಾಂದೀಪನಿ ಸಾಧನಾ ಆಶ್ರಮ ಶ್ರೀ ಈಶವಿಠಲದಾಸ್ ಸ್ವಾಮೀಜಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಸ್ರೂರು ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಅಪ್ಪಣ್ಣ ಹೆಗ್ಡೆ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ, ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕನ್ನಡ ಚಲನಚಿತ್ರ ನಟ ರಮೇಶ್, ವಿದ್ಯುತ್ ಗುತ್ತಿಗೆದಾರ ಕೆ.ಆರ್.ನಾಯಕ್, ಬೀಜಾಡಿ ಗೋಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ಶ್ರೀ ಚಿಕ್ಕುಅಮ್ಮ ಸಪರಿವಾರ ದೇವಸ್ಥಾನ ಆಡಳಿತ ಮೊಕ್ತೇಸರ ಆನಂದ ಬಿಳಿಯ, ಮುಂಬೈ ನಾಗರಾಜ ಆರ್.ಸುವರ್ಣ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

    ಪರಿಸರದ 4 ಶಾಲಾ ಮಕ್ಕಳಿಗೆ ಬಹುಮಾನ ವಿತರಣೆ, ಮಂಜುನಾಥ ಕುಂದಾಪುರ ಹಾಸ್ಯ ಸಿಂಚನ, ಭಜನೆ, ಸುಗಮ ಸಂಗೀತ, ನೃತ್ಯ, ಸಾಂಸ್ಕೃತಿ ಸಂಜೆ, ಯಕ್ಷಗಾನ ನಡೆಯಲಿದೆ ಎಂದು ತಾಲೂಕು ಪತ್ರಕರ್ತ ಸಂಘ ಅಧ್ಯಕ್ಷ ಸತೀಶ್ ಕುಮಾರ್ ತಿಳಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಐಎಂಜೆ ಸಂಸ್ಥೆಗಳಲ್ಲಿ ‘ಭಾರತದ ವೈಜ್ಞಾನಿಕ ಪರಂಪರೆ’ ಕುರಿತು ವಿಶೇಷ ಉಪನ್ಯಾಸ

    10/07/2026

    ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ

    10/07/2026

    ಸಾಧನೆಯ ಹಾದಿಯಲ್ಲಿ ಸಾಧಕರ ಬದುಕು ನಮಗೆ ಮಾದರಿಯಾಗಲಿ: ಅನಂತ ಪದ್ಮನಾಭ ಭಟ್

    10/07/2026
    Leave A Reply Cancel Reply

    five × two =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಐಎಂಜೆ ಸಂಸ್ಥೆಗಳಲ್ಲಿ ‘ಭಾರತದ ವೈಜ್ಞಾನಿಕ ಪರಂಪರೆ’ ಕುರಿತು ವಿಶೇಷ ಉಪನ್ಯಾಸ
    • ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ
    • ಸಾಧನೆಯ ಹಾದಿಯಲ್ಲಿ ಸಾಧಕರ ಬದುಕು ನಮಗೆ ಮಾದರಿಯಾಗಲಿ: ಅನಂತ ಪದ್ಮನಾಭ ಭಟ್
    • ಕುಂದಾಪುರ ತಹಶೀಲ್ದಾರರಾಗಿ ವಸಂತ ಕುಮಾರ ಅಧಿಕಾರ ಸ್ವೀಕಾರ
    • ಶಕ್ತಿ ಕೇಂದ್ರದಲ್ಲಿ ಬಿಜೆಪಿಯ ಗೆಲುವಿನ ಶಕ್ತಿಯಿದೆ: ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.