Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನೇದರ್‌ಲ್ಯಾಂಡ್ಸ್ ವಿವಿಯಿಂದ ಪಿ.ಎಚ್.ಡಿ ಪಡೆದ ಮೊದಲ ಭಾರತೀಯ ವೈದ್ಯ ಡಾ. ರೋಹಿತ್ ಶೆಟ್ಟಿ
    ಊರ್ಮನೆ ಸಮಾಚಾರ

    ನೇದರ್‌ಲ್ಯಾಂಡ್ಸ್ ವಿವಿಯಿಂದ ಪಿ.ಎಚ್.ಡಿ ಪಡೆದ ಮೊದಲ ಭಾರತೀಯ ವೈದ್ಯ ಡಾ. ರೋಹಿತ್ ಶೆಟ್ಟಿ

    Updated:12/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ತಾಲೂಕಿನ ಶಿರೂರಿನ ಮೂಲದ ವೈದ್ಯ, ನಾರಾಯಣ ನೇತ್ರಾಲಯದ ಉಪಾಧ್ಯಕ್ಷ ಡಾ.ರೋಹಿತ್ ಶೆಟ್ಟಿ ‘ಕಣ್ಣೀರು ಮತ್ತು ಕೆರಟೊಕೊನಸ್’ ಎಂಬ ವಿಷಯದಲ್ಲಿ ಭಾರತದಲ್ಲೇ ಪ್ರಥಮ ಬಾರಿ ಪಿ.ಎಚ್.ಡಿ.ಪದವಿ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ರೋಹಿತ್ ಶೆಟ್ಟಿ ನೆದರ್ಲ್ಯಾಂಡ್ಸ್ ಮಾಸ್ಟ್ರಿಚ್ ವಿಶ್ವವಿದ್ಯಾನಿಲಯದಿಂದ ವೈದ್ಯಕೀಯ ಕ್ಷೇತ್ರದಲ್ಲಿ ಪಿ.ಎಚ್.ಡಿ. ಪದವಿ ಪಡೆದ ಮೊಟ್ಟಮೊದಲ ಭಾರತೀಯ ವೈದ್ಯ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಮನುಕುಲದ ಉನ್ನತಿಗೆ ಶ್ರಮಿಸಬೇಕೆನ್ನುವ ಅವರ ಆಂತರ್ಯದ ತುಡಿತವು ಅವರನ್ನು ಕಣ್ಣೀರಿನ ಕುರಿತಾದ ಈ ಅಪರೂಪದ ಸಂಶೋಧನೆಯನ್ನು ಕೈಗೊಳ್ಳುವಲ್ಲಿ ಪ್ರೇರಣೆಯನ್ನು ನೀಡಿತ್ತು.

    Click Here

    Call us

    Click Here

    ಡಾ.ರೋಹಿತ್ ಅವರ ಸಂಶೋಧನೆಯು ಕೆರಟೊಕೊನಸ್ ಎಂದು ಕರೆಯಲ್ಪಡುವ ಕಣ್ಣಿಗೆ ಸಂಬಂಧಿಸಿದ ರೋಗವನ್ನು ಪತ್ತೆಹಚ್ಚಲು ಮತ್ತು ಕ್ರಮೇಣ ಅಭಿವೃದ್ಧಿ ಹೊಂದುವ ಗುಣವನ್ನು ಹೊಂದಿರುವ ಈ ರೋಗವನ್ನು ತಡೆಯಲು ಸಹಾಯ ಮಾಡುತ್ತದೆ.

    [quote bgcolor=”#ffffff” arrow=”yes”]dr_rohit_shetty_3ನಾರಾಯಣ ನೇತ್ರಾಲಯದ ಉಪಾಧ್ಯಕ್ಷ ಹಾಗೂ ಖ್ಯಾತ ನೇತ್ರಶಾಸ್ತ್ರಜ್ಞರಾಗಿರುವ ಡಾ.ರೋಹಿತ್ ಶೆಟ್ಟಿ ಬೆಂಗಳೂರಿನ ಕೆಂಪೇಗೌಡ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ ತಮ್ಮ ವೈದ್ಯಕೀಯ ಶಿಕ್ಷಣವನ್ನು ಪೂರೈಸಿ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣವನ್ನು (DBN) ಬೆಂಗಳೂರಿನ ಸೇಂಟ್ ಜೋನ್ಸ್ ನ್ಯಾಶನಲ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಸಂಸ್ಥೆಯಲ್ಲಿ ಪಡೆದುಕೊಂಡಿದ್ದಾರೆ. ಅಂತೆಯೆ, ನ್ಯೂರೊ-ಆಪ್ಥಲ್ಮಾಲಜಿ ಅಬ್ಸರ್ವರ್ ಶಿಪ್ ಅನ್ನು ಯುಸಿ ಇರ‍್ವಿನ್ (ಯುಎಸ್‌ಎ) ಹಾಗೂ ರಿಫ್ರ್ಯಾಕ್ಟಿವ್ ಸರ್ಜರಿ ಅಬ್ಸರ್ವರ್ ಶಿಪ್ ಅನ್ನು ಜರ್ಮನಿಯ ಯುನಿವರ್ಸಿಟಿ ಆಫ್ ಮೇಯಂಝ್ ನಲ್ಲಿ ಪೂರೈಸಿದ್ದಾರೆ. ಅವರು ತಮ್ಮ FRCS (Glasgow), ಕೋರ್ಸನ್ನು 2006ರಲ್ಲಿ ಪೂರ್ಣಗೊಳಿಸಿದ್ದಾರೆ. ಅವರು KOS, ASCRS, ಹಾಗೂ ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಎಲೆಕ್ಟ್ರೊಫಿಜಿಯಾಲಜಿ ಆಂಡ್ ವಿಶನ್ ಸಂಸ್ಥೆಗಳ ಸದಸ್ಯರೂ ಆಗಿದ್ದಾರೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪೂರ್ವಾವಲೋಕಿತ ಜರ್ನಲ್ಲುಗಳಲ್ಲಿ ಸುಮಾರು 100ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ. ರಿಫ್ರೇಟಿವ್ ಸರ್ಜರಿ, ಕ್ಲಿನಿಕಲ್ ಎಲೆಕ್ಟ್ರೊಫಿಜಿಯಾಲಜಿ, ನ್ಯೂರೊ-ಆಪ್ಥಲ್ಮಾಲಜಿ ಮತ್ತು ಕ್ಲಿನಿಕಲ್ ರಿಸರ್ಚ್ ಕ್ಷೇತ್ರಗಳಲ್ಲಿ ಆಸಕ್ತಿಯನ್ನು ಹೊಂದಿದ್ದಾರೆ. [ಕುಂದಾಪ್ರ ಡಾಟ್ ಕಾಂ] [/quote]

    ಡಾ.ರೋಹಿತ್ ಶೆಟ್ಟಿ ಅವರು ತಮ್ಮ ಸಂಶೋಧನೆಯ ಭಾಗವಾಗಿ ಕಣ್ಣೀರಿನ ಸ್ಯಾಂಪಲ್ಲುಗಳ ಮೇಲೆ ವ್ಯಾಪಕವಾದ ಅಧ್ಯಯನವನ್ನು ಕೈಗೊಂಡು ಕೆಲವೇ ಹನಿ ಕಣ್ಣೀರುಗಳಿಂದ ಅನೇಕ ಹೊಸ ಸಂಗತಿಗಳನ್ನು ಪತ್ತೆಹಚ್ಚಬಹುದು ಎಂಬುದನ್ನು ಕಂಡುಹಿಡಿದು ಸಾಬೀತುಪಡಿಸಿದ್ದಾರೆ. ಕಣ್ಣಿನ ತೀವ್ರ ತೊಂದರೆಯಿಂದ ತಮ್ಮ ಬಳಿ ಬರುತ್ತಿದ್ದ ಯುವ ರೋಗಿಗಳು ಮತ್ತು ನಿರಂತರವಾಗಿ ತಲೆನೋವಿನಿಂದ ಬಳಲುತ್ತಿದ್ದ ರೋಗಿಗಳನ್ನು ತಮ್ಮ ವೈದ್ಯವೃತ್ತಿಯ ಆರಂಭದಲ್ಲಿ ಪರಿಶೀಲಿಸತೊಡಗಿದಾಗ ಅವರಿಗೆ ಈ ವಿಷಯದ ಕುರಿತ ಸಂಶೋಧನೆಯನ್ನು ಮಾಡುವ ಪ್ರೇರಣೆ ಉಂಟಾಗಿತ್ತು. ಕೆರಟೊಕೊನಸ್ ಪದವು ಗ್ರೀಕ್ ಮೂಲದ್ದಾಗಿದ್ದು ಕೆರಟೊ ಅಂದರೆ ಕೊಂಬು ಅಥವಾ ಕಾರ್ನಿಯಾ ಮತ್ತು ಕೊನಸ್ ಅಂದರೆ ಶಂಕು ಎಂಬ ಅರ್ಥವನ್ನು ನೀಡುತ್ತದೆ.

    ಸುತ್ತಮುತ್ತಲಿನ ವಸ್ತುಗಳನ್ನು ಕಾಣುವಲ್ಲಿ, ಡ್ರೈವಿಂಗ್ ಮಾಡುವುದು, ಟಿವಿ ನೋಡುವುದು ಅಥವಾ ಪುಸ್ತಕ ಓದುವುದು ಮುಂತಾದ ಸರಳ ಕೆಲಸಗಳನ್ನು ಮಾಡುವಲ್ಲಿಯೂ ಕೆರಟೊಕೊನಸ್ ತೊಂದರೆಯು ತೀವ್ರವಾದ ಪ್ರಭಾವವನ್ನು ಉಂಟುಮಾಡುತ್ತಿದ್ದುದನ್ನು ಡಾ.ರೋಹಿತ್ ಅವರು ತಮ್ಮ ರೋಗಿಗಳಲ್ಲಿ ಗಮನಿಸಿದ್ದರು. [ಕುಂದಾಪ್ರ ಡಾಟ್ ಕಾಂ]

    Click here

    Click here

    Click here

    Call us

    Call us

    [box type=”custom” bg=”#ffffff” radius=”5″ border=”#65a332″]ಕೆರಟೊಕೊನಸ್ ಎಂದರೇನು?

    ಕಣ್ಣಿನ ಮುಂಭಾಗದ ಮೇಲ್ಮೈ ಕಾರ್ನಿಯಾವು ಅಸ್ವಾಭಾವಿಕವಾಗಿ ಊದಿಕೊಳ್ಳುತ್ತ ಸಾಗುವ ಸ್ಥಿತಿ ಕೆರಟೊಕೊನಸ್. ಈ ಸ್ಥಿತಿಯಲ್ಲಿ ಬೆಳಕು ರೆಟಿನಾದ ಮೇಲೆ ಸರಿಯಾಗಿ ಬೀಳದೇ ದೃಷ್ಟಿ ಮಂಜಾಗತೊಡಗುತ್ತದೆ. ಈ ತೊಂದರೆಯನ್ನು ಕನ್ನಡಕದ ಮೂಲಕವಾಗಲೀ ಅಥವಾ ಅಂತಿಮ ಹಂತದಲ್ಲಿ ಕೂಡ ಕಾಂಟ್ಯಾಕ್ಟ್ ಲೆನ್ಸುಗಳಿಂದಲಾಗಲೀ ಸರಿಪಡಿಸುವುದು ಸಾಧ್ಯವಿಲ್ಲ.

    ಕೆಲವು ಪ್ರಕರಣಗಳಲ್ಲಿ ಇದೊಂದು ಆನುವಂಶಿಕ ರೋಗವಾಗಿರುತ್ತದೆ. ಕೆಲವು ಸಂದರ್ಭಗಳಲ್ಲಿ ಇದು ಪಾಲಕರಲ್ಲಿ ಕೂಡ ಕಂಡುಬರುತ್ತದೆ ಅಥವಾ ಅಲರ್ಜಿ ಹೊಂದಿರುವ ಚಿಕ್ಕಮಕ್ಕಳಲ್ಲಿ ಕಂಡುಬಂದು ಕಣ್ಣುಗಳನ್ನು ಉಜ್ಜಿಕೊಳ್ಳುವಂತೆ ಪ್ರೇರೇಪಿಸಿ ಸಮಸ್ಯೆಯನ್ನು ತೀವ್ರಗೊಳಿಸುತ್ತದೆ. ಈ ಸಮಸ್ಯೆಯನ್ನು ಹೊಂದಿರುವ ಸುಮಾರು 50ಕ್ಕಿಂತಲೂ ಹೆಚ್ಚು ರೋಗಿಗಳನ್ನು ನಮ್ಮ ಕ್ಲಿನಿಕ್ಕಿನಲ್ಲಿ 2007ನೇ ವರ್ಷವೊಂದರಲ್ಲಿಯೇ ಪತ್ತೆಹಚ್ಚಿದ್ದೇವೆ. ಈಗ ಈ ಸಂಖ್ಯೆ ದಿನವೊಂದಕ್ಕೆ 8 ರಿಂದ 10 ರೋಗಿಗಳು ನಮ್ಮಲ್ಲಿ ಬರುವಷ್ಟು ಪ್ರಮಾಣದಲ್ಲಿ ಹೆಚ್ಚಿದೆ. 35ಕ್ಕಿಂತಲೂ ಕಡಿಮೆ ವಯೋಮಾನದವರಲ್ಲಿ ಇದು ಅತಿ ಸಾಮಾನ್ಯ ಎಂಬಂತಾಗಿದ್ದು ಅವರಲ್ಲಿ ಹೆಚ್ಚಿನವರು ನಗರ ಪ್ರದೇಶಗಳವರಾಗಿರುತ್ತಾರೆ. ಅವರಲ್ಲಿ ಕೇವಲ 1% ದಷ್ಟು ರೋಗಿಗಳು ಮಾತ್ರ ಆನುವಂಶಿಕ ರೋಗದಿಂದ ಬಳಲುತ್ತಾರೆ. ಉಳಿದ 99%ರಷ್ಟು ರೋಗಿಗಳು ಕಂಪ್ಯೂಟರ್, ಎಲೆಕ್ಟ್ರಾನಿಕ್ ಗ್ಯಾಜೆಟ್ ಗಳು ಮತ್ತು ಸ್ಮಾರ್ಟ್ ಫೋನ್ ಅಡಿಕ್ಷನ್ ನಿಂದಾಗಿ ಉಂಟಾಗುವ ಅಲರ್ಜಿಗಳಿಂದ ಬಳಲುತ್ತಾರೆ, ಆಕಾರಣಕ್ಕಾಗಿ ಕಣ್ಣುಗಳ ಆದ್ರತೆ ಕಡಿಮೆಯಾಗಿ ತುರಿಕೆಯುಂಟಾಗುತ್ತದೆ ಎಂದು ಡಾ.ಶೆಟ್ಟಿ ಅವರು ಹೇಳುತ್ತಾರೆ.

    ದೃಷ್ಟಿಹೀನತೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಆರಂಭಿಕ ಹಂತದಲ್ಲಿಯೇ ರೋಗಪತ್ತೆಮಾಡುವ ಲಕ್ಷ್ಯವನ್ನಿರಿಸಿಕೊಂಡ ಡಾ.ಶೆಟ್ಟಿ ಅವರು 2004ರಲ್ಲಿ ತಮ್ಮ ಸಂಶೋಧನೆಯನ್ನು ಆರಂಭಿಸಿದರು. ಕೆರಟೊಕೊನಸ್ನ ಜೆನೆಟಿಕ್ ಮಾಲಿಕ್ಯುಲರ್ ಮೆಕ್ಯಾನಿಸಮ್ ಹಾಗೂ ವೈದ್ಯಕೀಯ ಪ್ರತಿರಕ್ಷಾ ಶಾಸ್ತ್ರದ ಅರಿತುಕೊಳ್ಳುವಿಕೆ ಎಂಬ ಶೀರ್ಷಿಕೆಯಡಿಯಲ್ಲಿ ಅವರು 2013ರಲ್ಲಿ ನೇದರ್ಲ್ಯಾಂಡ್ಸ್ನ ಮಾಸ್ಟ್ರಿಚ್ ವಿಶ್ವವಿದ್ಯಾನಿಲಯದ ಸಹಯೋಗ ಪಡೆದು ಅಲ್ಲಿನ ಪ್ರೊ.ರುಡಿ ನ್ಯೂಯಿಟ್ಸ್ ಅವರೊಂದಿಗೆ ಕೆಲಸ ಮಾಡಿದರು. ಈ ಸಂಶೋಧನೆಯು ಅವರಿಗೆ ಪ್ರತಿಷ್ಠಿತ ಕರ್ನಲ್ ರಂಗಾಚಾರಿ ಪ್ರಶಸ್ತಿಯನ್ನು ತಂದುಕೊಟ್ಟಿದೆ. ಫೆಬ್ರುವರಿ 2015ರಲ್ಲಿ ನಡೆದ ಅಖಿಲ ಭಾರತ ಮಟ್ಟದ ನೇತ್ರಶಾಸ್ತ್ರಜ್ಞರ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದ್ದು ನೇತ್ರವಿಜ್ಞಾನ ಕ್ಷೇತ್ರದಲ್ಲಿ ಕೊಡಮಾಡುವ ಅತ್ಯುನ್ನತ ಮಟ್ಟದ ಗೌರವ ಪುರಸ್ಕಾರ ಇದಾಗಿದೆ. [ಕುಂದಾಪ್ರ ಡಾಟ್ ಕಾಂ][/box]

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು

    05/12/2025

    ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d