Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ಕೋಟಿ-ಚೆನ್ನಯ ಕ್ರೀಡೋತ್ಸವ ಉದ್ಘಾಟನೆ
    ಊರ್ಮನೆ ಸಮಾಚಾರ

    ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ಕೋಟಿ-ಚೆನ್ನಯ ಕ್ರೀಡೋತ್ಸವ ಉದ್ಘಾಟನೆ

    Updated:19/01/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಸ್ಪರ್ಧಾತ್ಮಕ ಯುಗದಲ್ಲಿ ಸ್ವರ್ಧಾ ಮನೋಭಾವ ಬೆಳೆಸಿಕೊಳ್ಳುವುದೂ ಅಗತ್ಯ: ಸೂರ್ಯ ಎಸ್. ಪೂಜಾರಿ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮುಂಬಯಿ,ಜ.11:
    ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ, ಸೋಲು ಗೆಲುವು ಮುಖ್ಯವಲ್ಲ. ಇಂದಿನ ಈ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ ಇದರ ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ ನುಡಿದರು.

    ಅವರು ಜ.8 ರಂದು ಸಯನ್ ಪೂರ್ವ ಜಿಟಿಬಿ ನಗರದಲ್ಲಿರುವ ಗುರುನಾನಾಕ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ ಕುಂದಾಪುರ ಬಿಲ್ಲವ ಕೋಟಿ-ಚೆನ್ನಯ ಕ್ರೀಡೋತ್ಸವದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಪಾಲಕರು ತಮ್ಮ ಮಕ್ಕಳಿಗೆ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿ ಅವರನ್ನು ಸಮುದಾಯ ಸಂಘಟನೆಗಳಲ್ಲಿ ಸಕ್ರಿಯಗೊಳ್ಳುವಂತೆ ಮಾಡಬೇಕು. ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದಾಗ ಇನ್ನು ಹಲವಾರು ಕಾರ್ಯಕ್ರಮಗಳನ್ನು ನೀಡುವ ಪ್ರೇರಣೆ ದೊರೆಯುತ್ತದೆ ಎಂದರು.

    ಮುಖ್ಯ ಅತಿಥಿ ಅಂತರಾಷ್ಟ್ರೀಯ ಕರಾಟೆ ಪಟು ವಿಜಯ ಪೂಜಾರಿ ಕೋಟ ಮಾತನಾಡಿ, ನಾನು ಮಹಾನಗರಕ್ಕೆ ಬಂದು ಕ್ಯಾಂಟೀನ್ ಮತ್ತು ಹೋಟೆಲ್ಗಳಲ್ಲಿ ದುಡಿದು ಏನಾದರೂ ಸಾಧಿಸಬೇಕೆನ್ನುವ ಉದ್ದೇಶದಿಂದ ಕ್ರೀಡಾ ಕ್ಷೇತ್ರಕ್ಕೆ ಬಂದೆ ಕರಾಟೆಯು ನನ್ನನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿತು ಈಗಾಗಲೆ ನಾನು ೫೮ ಚಿನ್ನದ ಪದಕ, 38 ಬೆಳ್ಳಿ ಪದಕ ಮತ್ತು 45 ಕಂಚಿನ ಪದಕಗಳನ್ನು ಪಡೆದಿದ್ದೇನೆ ಎಂದು ಹೇಳಲು ಸಂತೋಷವಾಗುತ್ತಿದೆ ಹಾಗೇಯೇ ನಮ್ಮ ಸಮುದಾಯದ ಯುವ ಜನರು ಒಂದು ನಿರ್ದಿಷ್ಟವಾದ ಗುರಿಯೊಂದಿಗೆ ಮುನ್ನೆಡೆಯಿರಿ ಯಶಸ್ಸು ನಿಮ್ಮದಾಗಲಿದೆ ಎಂದರು

    ಗೌರವ ಅತಿಥಿಗಳಾದ ನಗರದ ಖ್ಯಾತ ಶಿಶುತಜ್ಞ ಡಾ| ಶೇಖರ್ ಹೆಮ್ಮಾಡಿ ಮಾತನಾಡಿ, ಕ್ರೀಡೆಯಿಂದ ಆರೋಗ್ಯ ವೃದ್ಧಿ ಯಾಗುವುದರೊಂದಿಗೆ ಮನಸ್ಸು ಮತ್ತು ದೇಹದ ಸಮತೋಲನ ಕಾಪಾಡಿಕೊಳ್ಳಬಹುದು ನಮ್ಮ ಕುಂದಾಪುರ ಬಿಲ್ಲವ ಸಂಘ ಸಮಾಜ ಬಾಂಧವರ ಆರೋಗ್ಯದ ದೃಷ್ಠಿಯಿಂದ ಹಾಗೂ ಒಗ್ಗಟ್ಟಿಗಾಗಿ ಪ್ರತಿವರ್ಷ ಅದ್ಧೂರಿಯಾಗಿ ಕ್ರೀಡಾಕೂಟವನ್ನು ಆಯೋಜಿಸುತ್ತಿದೆ ಇದರ ಸದುಪಯೋಗವನ್ನು ಸಮಾಜ ಬಾಂಧವರು ಪಡೆದುಕೊಳ್ಳಬೇಕು ತಾವೆಲ್ಲರೂ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಸಮಾಜ ಬಾಂಧವರೊಂದಿಗೆ ಬೆರೆಯುವ ಅವಕಾಶ ಸಿಗುತ್ತದೆ ಎಂದರು

    Click here

    Click here

    Click here

    Call us

    Call us

    ಸಂಘದ ಮಾಜಿ ಅಧ್ಯಕ್ಷರು ನ್ಯಾಯವಾದಿ ಆನಂದ ಎಮ್. ಪೂಜಾರಿ ಮಾತನಾಡುತ್ತಾ ಸಂಘದ ಕ್ರೀಡಾ ಕೂಟದಲ್ಲಿ ಪುಟಾಣಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಈ ಕ್ರೀಡೋತ್ಸವಕ್ಕೆ ಮೆರಗು ತಂದಿದ್ದಾರೆ ಮುಂಬರುವ ದಿನಗಳಲ್ಲಿ ಈ ಪುಟಾಣಿಗಳು ಶ್ರೇಷ್ಠ ಕ್ರೀಡಾ ಪಟುಗಳಾಗಿ ಸಂಘಕ್ಕೆ ಹೆಸರು ತರುವುದರಲ್ಲಿ ಸಂದೇಹವಿಲ್ಲ ಎಂದರು

    ಮುಖ್ಯ ಅತಿಥಿ ತಿಮ್ಮಪ್ಪ ಸಿ. ಪೂಜಾರಿ ಏಳಜಿತ್ ಹಾಗೂ ಯುವ ಆಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷೆ ದೀಪಾ ವೈ. ಪೂಜಾರಿ ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು

    ವೇದಿಕೆಯಲ್ಲಿದ್ದ ಗಣ್ಯರು ದೀಪ ಪ್ರಜ್ವಲಿಸಿ ಧ್ವಜಾರೋಹಣಗೈದು ಬಲೂನುಗಳನ್ನು ಆಕಾಶಕ್ಕೆ ಹಾರಿಸಿ ಕುಂದಾಪುರ ಬಿಲ್ಲವ ಕೋಟಿ-ಚೆನ್ನಯ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು. ಕ್ರೀಡಾಳುಗಳಿಂದ ಆಕರ್ಷಕ ಪಥ ಸಂಚಲನ ನೆಡೆಯಿತು. ಮುಖ್ಯ ಅತಿಥಿ ಕರಾಟೆ ಪಟು ವಿಜಯ ಪೂಜಾರಿ ಕೋಟ ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು ನಿವೃತ್ತ ಶಿಕ್ಷಕ ಕ್ರೀಡಾ ಕೂಟದ ತೀರ್ಪುಗಾರ ಅಮರೀಶ್ ಪಾಟೀಲ್ ಕ್ರೀಡಾ ಪತಿಜ್ಞಾ ವಿಧಿ ಬೋಧಿಸಿದರು

    ಸಂಘದ ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾದ ಉದ್ಯಮಿ ತಿಮ್ಮಪ್ಪ ಸಿ. ಪೂಜಾರಿ ಏಳಜಿತ್, ಕರಾಟೆ ಪಟು ವಿಜಯ ಪೂಜಾರಿ ಕೋಟ, ಶಿಶು ತಜ್ಞ ಡಾ| ಶೇಖರ ಹೆಮ್ಮಾಡಿ, ಮಾಜಿ ಅಧ್ಯಕ್ಷರಾದ ನ್ಯಾಯವಾದಿ ಆನಂದ ಎಂ. ಪೂಜಾರಿ ಸಂಘದ ಉಪಾಧ್ಯಕ್ಷ ನರಸಿಂಹ ಎಮ್. ಬಿಲ್ಲವ, ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ ಎನ್. ಪೂಜಾರಿ, ಗೌರವ ಕೋಶಾಧಿಕಾರಿ ರಾಜಶ್ರೀ ಪಿ. ಸಾಲ್ಯಾನ್, ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷೆ ಮಲ್ಲಿಕಾ ಎಸ್. ಪೂಜಾರಿ, ಯುವ ಅಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷೆ ದೀಪಾ ವೈ. ಪೂಜಾರಿ, ಕಾರ್ಯದರ್ಶಿ ಮನೀಷಾ ಎಮ್. ಪೂಜಾರಿ, ಧಾರ್ಮಿಕ ಮತ್ತು ಸಾಮಾಜಿಕ ಸಮಿತಿಯ ಕಾರ್ಯಾಧ್ಯಕ್ಷ ಶ್ರೀಧರ ವಿ. ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ವೇದಿಕೆಯಲ್ಲಿದ್ದ ಗಣ್ಯರಿಗೆ ಯುವ ಅಭ್ಯುದಯ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಪುಷ್ಪಗುಚ್ಚ ನೀಡಿ ಗೌರವಿಸಿದರು. ರಾಜಶ್ರೀ ಸಾಲ್ಯಾನ್, ದಿವ್ಯಾ ಪೂಜಾರಿ, ಜ್ಯೋತಿ ಪೂಜಾರಿ ಪ್ರಾರ್ಥಿಸಿದರು, ಉಪಾಧ್ಯಕ್ಷ ನರಸಿಂಹ ಎಂ. ಬಿಲ್ಲವ ಸ್ವಾಗತಿಸಿದರೆ ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ ಎನ್. ಪೂಜಾರಿ ಪ್ರಾಸ್ತಾವಿಕ ನುಡಿಗಳನ್ನಾಡಿ ಕಾರ್ಯಕ್ರಮದ ನಿರ್ವಹಣೆಗೈದರು ಸಂಘದ ಜತೆ ಕಾರ್ಯದರ್ಶಿ ಹರೀಶ್ ಎನ್. ಪೂಜಾರಿ ವಂದಿಸಿದರು ಬಳಿಕ ಸದಸ್ಯರು ಮತ್ತು ಸದಸ್ಯರ ಮಕ್ಕಳ ವಿವಿಧ ವಯೋಮಿತಿಗೆ ಅನುಗುಣವಾಗಿ ವೈವಿಧ್ಯಮಯ ಸ್ಪರ್ಧೆಗಳನ್ನು ಆರಂಭಿಸಲಾಯಿತು

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು

    05/12/2025

    ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d