Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನೆಂಪು: ಸ್ವಯಂ ಪ್ರೇರಿತ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ
    ಊರ್ಮನೆ ಸಮಾಚಾರ

    ನೆಂಪು: ಸ್ವಯಂ ಪ್ರೇರಿತ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕೊಲ್ಲೂರು: ನಿರಂತರವಾಗಿ ರಕ್ತದಾನ ಶಿಬಿರಗಳ ಆಯೋಜಿಸುವ ಮೂಲಕ ಇವತ್ತು ಗ್ರಾಮಾಂತರ ಪ್ರದೇಶಗಳಲ್ಲಿಯೂ ರಕ್ತದಾನದ ಅರಿವು ಮೂಡಿದ್ದ, ಜಿಲ್ಲೆಯಾದ್ಯಂತ ಜನತೆ ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡುವುದರ ಮೂಲಕ ಉಡುಪಿ ಜಿಲ್ಲೆ ಇವತ್ತು ರಕ್ತದಾನಿಗಳ ಜಿಲ್ಲೆ ಎಂದು ಘೋಷಿಸಲ್ಪಟ್ಟಿದೆ. ಈಗಾಗಳೆ ಮೊಗವೀರ ಯುವ ಸಂಘಟನೆ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ವಿವಿಧ ಸಂಘ ಸಂಸ್ಥೆಗಳ ನೆರವಿನಿಂದ ೬೦ ಸಾವಿರ ಯೂನಿಟ್ ರಕ್ತ ಸಂಗ್ರಹ ಮಾಡುವ ಮೂಲಕ ಸಾಧನೆ ಮಾಡಿದೆ ಎಂದು ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಇದರ ಅಧ್ಯಕ್ಷ ಸದಾನಂದ ಬಳ್ಕೂರು ಹೇಳಿದರು.

    Click Here

    Call us

    Click Here

    ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ರಕ್ತನಿಧಿ, ಕೆಎಂಸಿ ಮಣಿಪಾಲ, ಜಿಲ್ಲಾಡಳಿತ ಉಡುಪಿ ಮತ್ತು ಶ್ರೀ ವಿನಾಯಕ ಯುವಕ ಸಂಘ ರಿ, ನೆಂಪು ಇವರ ಸಹಯೋಗದಲ್ಲಿ ನೆಂಪುವಿನ ಸ.ಪ.ಪೂ.ಕಾಲೇಜಿನಲ್ಲಿ ನqದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಅಧ್ಯಕ್ಷ ವಾಸು ಜಿ.ನಾಯ್ಕ್ ಮಾತನಾಡಿ, ರಕ್ತದಾನ ಶಿಬಿರಗಳು ಇನ್ನೂ ತೀರಾ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಅಗತ್ಯವಿದೆ. ಅಂಥಹ ಗ್ರಾಮೀಣ ಪ್ರದೇಶದಲ್ಲಿ ರಕ್ತದಾನದ ಅರಿವು ಮೂಡಿಸಲು ಸ್ಥಳೀಯ ಸಂಘ ಸಂಸ್ಥೆಗಳು ಹೆಚ್ಚು ಉತ್ಸಾಹ ತೋರಬೇಕು ಎಂದರು.

    ನೆಂಪು ಶ್ರೀ ವಿನಾಯಕ ಯುವಕ ಸಂಘದ ಅಧ್ಯಕ್ಷ ಸಂತೋಷ್ ಮಂಗಲಸಕಟ್ಟೆ, ಬೆಂಗಳೂರು ಉದ್ಯಮಿ ಶಿವರಾಮ ಮಂಗಲಸನಕಟ್ಟೆ, ಮುಂಬಯಿ ಉದ್ಯಮಿ ರಾಜು ಮೆಂಡನ್ ಬಳ್ಳಿಹಿತ್ಲು, ಬೆಂಗಳೂರು ಉದ್ಯಮಿ ಸೀತಾರಾಮ ಶೆಟ್ಟಿ ನೆಂಪು, ನಿಟ್ಟೆ ವಿದ್ಯಾಸಂಸ್ಥೆಯ ರಾಘವೇಂದ್ರ ಭಟ್ ನೆಂಪು, ಜನತಾ ರೋಡ್‌ಲೈನ್ಸ್‌ನ ಗೋಪಾಲ ನಾಯ್ಕ್ ಶಾರಾಳ, ಸ.ಪ.ಪೂ.ಕಾಲೇಜು ನೆಂಪು ಇಲ್ಲಿಯ ಪ್ರಾಂಶುಪಾಲರಾದ ಕೆ.ಟಿ.ಶಿವರಾಮ್, ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ರಕ್ತನಿಧಿ ವಿಭಾಗದ ಡಾ.ವಿಜಯರಾಮ ಶೆಟ್ಟಿ, ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಸ್ಥಾಪಕಾಧ್ಯಕ್ಷ ಉದಯಕುಮಾರ್ ಹಟ್ಟಿಯಂಗಡಿ, ಆನಂದ ಮೊಗವೀರ ಉಪಸ್ಥಿತರಿದ್ದರು.

    ಮೊಗವೀರ ಯುವ ಸಂಘಟನೆಯ ಕಾನೂನು ಸಲಹೆಗಾರರಾದ ಮಂಜುನಾಥ್ ಆರ್.ಆರಾಟೆ ಸ್ವಾಗತಿಸಿದರು. ಉಪನ್ಯಾಸಕ ಮಂಜುನಾಥ ಚಂದನ್ ನೆಂಪು ಕಾರ್ಯಕ್ರಮ ನಿರ್ವಹಿಸಿ, ಶ್ರೀ ವಿನಾಯಕ ಯುವಕ ಮಂಡಲದ ಕಾರ್ಯದರ್ಶಿ ಮಂಜುನಾಥ ವಂದಿಸಿದರು. ಮುಂಬಯಿ ಉದ್ಯಮಿ ರಾಜು ಮೆಂಡನ್ ಬಳ್ಳಿಹಿತ್ಲು, ಮತ್ತು ಚೇತನ್ ಬಿ.ಕುಂದರ್ ಅವರನ್ನು ಸನ್ಮಾನಿಸಲಾಯಿತು. ಎರಡು ಕಿಡ್ನಿ ವೈಫಲ್ಯಗೊಂಡವರಿಗೆ ಆರ್ಥಿಕ ನೆರವಿನ ಚೆಕ್ ವಿತರಿಸಲಾಯಿತು. ಯುವಕ ಮಂಡಲದ ವತಿಯಿಂದ ರೂ.೧೦ ಸಾವಿರ ನೆರವು ವಿತರಿಸಲಾಯಿತು. ೩ ಜನರಿಗೆ ವೈದ್ಯಕೀಯ ಸಹಾಯಧನ ನೀಡಲಾಯಿತು.

    Click here

    Click here

    Click here

    Call us

    Call us

    Kolluru
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    17/12/2025

    ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.