ಕೆಪಿಸಿಸಿ ಸದಸ್ಯತ್ವಕ್ಕೆ ಕೆ. ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯತ್ವಕ್ಕೆ (ಕೆಪಿಸಿಸಿ) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ರಾಜೀನಾಮೆ ನೀಡಿದ್ದಾರೆ.

Call us

Click Here

ಎಐಸಿಸಿ ಕಾರ್ಯದರ್ಶಿ, ಕೇರಳ ಶಾಸಕ ರೋಸಿ ಎಂ. ಜಾನ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವ ನಾರಾಯಣ್ ಅವರು ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಭೇಟಿ ನೀಡಿದ ಮರುದಿನವೇ ರಾಜೀನಾಮೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ನಾಲ್ಕು ಭಾರಿ ಶಾಸಕರು, ಎರಡು ಭಾರಿ ವಿಧಾನ ಪರಿಷತ್ ಸದಸ್ಯರು ಹಾಗೂ ಒಂದು ಅವಧಿಗೆ ವಿಧಾನಪರಿಷತ್ ಸಭಾಪತಿಯಾಗಿ ಸೇವೆ ಸಲ್ಲಿಸಿ ಕೆಲ ದಿನಗಳಿಂದ ಸಕ್ರೀಯ ರಾಜಕಾರಣದಿಂದ ದೂರ ಉಳಿದು ರೈತ ಸಂಘದಲ್ಲಿ ಸಕ್ರೀಯವಾಗಿದ್ದ ಪ್ರತಾಪ್‌ಚಂದ್ರ ಶೆಟ್ಟಿ ಅವರು, ಈಗ ಕೆಪಿಸಿಸಿ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.

ಸದ್ಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯರಾಗಿ ಮುಂದುವರಿಯಲಿರುವ ಅವರು, ಉತ್ಸಾಹಿಗಳಿಗೆ ಅವಕಾಶ ಮಾಡಿಕೊಡಲು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

Leave a Reply