Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಫೆ.4ರಿಂದ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ನಾಲ್ಕು ದಿನಗಳ ರಾಜ್ಯಮಟ್ಟದ ನಾಟಕೋತ್ಸವ
    ಊರ್ಮನೆ ಸಮಾಚಾರ

    ಫೆ.4ರಿಂದ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ನಾಲ್ಕು ದಿನಗಳ ರಾಜ್ಯಮಟ್ಟದ ನಾಟಕೋತ್ಸವ

    Updated:03/02/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಕಲೆ ಹಾಗೂ ಸಾಂಸ್ಕೃತಿಕ ರಂಗದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿರುವ ಬೈಂದೂರಿನ ಸುರಭಿ ಸಂಸ್ಥೆ ಪ್ರತಿವರ್ಷದಂತೆ ನಾಲ್ಕು ದಿನಗಳ ರಂಗ ಹಬ್ಬವನ್ನು ಆಯೋಜಿಸಿದೆ. ಫೆಬ್ರವರಿ 04ರಿಂದ 07ರ ವರೆಗೆ ಪ್ರತಿದಿನ ಸಂಜೆ ಗಂಟೆ 6-30ಕ್ಕೆ ಬೈಂದೂರು ಶಾರದಾ ವೇದಿಕೆಯಲ್ಲಿ ನಾಟಕೋತ್ಸವ ನಡೆಯಲಿದೆ.

    Click Here

    Call us

    Click Here

    ಫೆ.04ರಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಉತ್ಸವಕ್ಕೆ ಚಾಲನೆ ನೀಡಲಿದ್ದು, ಸಾಹಿತ್ಯ ಸಮುದಾಯ ಶಿವಮೊಗ್ಗದ ಕಾರ್ಯದರ್ಶಿ ಕೆ. ಪ್ರಭಾಕರನ್ ಜ್ಯೋತಿ ಪ್ರಜ್ವಲನಗೈಯಲಿದ್ದಾರೆ. ಕಾರ್ಯಕ್ರಮದ ನಾಲ್ಕು ದಿನಗಳ ಕಾಲ ರಂಗಭೂಮಿ ಚಿತ್ರನಟಿ ಚಂದ್ರಕಲಾ ರಾವ್, ಹಿರಿಯ ರಂಗನಟ ಗಣೇಶ್ ಕಾರಂತ್, ರಂಗನಟ ಹಾಗೂ ಚಲನಚಿತ್ರ ನಟ ರಘು ಪಾಂಡೇಶ್ವರ, ರಂಗನಟ ಯತೀಶ್ ಕೊಳ್ಳೆಗಾಲ ಅವರನ್ನು ಸನ್ಮಾನಿಸಲಾಗುತ್ತದೆ.

    ಫೆಬ್ರವರಿ 04ರ ಶನಿವಾರ ನಟ ಮಿತ್ರರು ತೀರ್ಥಹಳ್ಳಿ (ರಿ.) ಪ್ರಸ್ತುತಿಯ ನಾಟಕ ತುರುಬ ಕಟ್ಟುವ ಹದನ’ (ರಚನೆ : ಪಂಪ – ರನ್ನ – ಕುಮಾರವ್ಯಾಸ – ಪುರಂದರದಾಸರು, ಪರಿಕಲ್ಪನೆ/ನಿರ್ದೇಶನ: ಶ್ರೀಕಾಂತ್ ಕುಮಟಾ), ಫೆಬ್ರವರಿ 05ರ ರವಿವಾರ ಸುರಭಿ ರಿ. ಬೈಂದೂರು ಪ್ರಸ್ತುತಿಯ, ಡಾ. ಶಿವರಾಮ ಕಾರಂತರ ಕಾದಂಬರಿ ಆಧಾರಿತ ನಾಟಕ ’ಚೋಮನ ದುಡಿ’ (ರಂಗರೂಪ/ನಿರ್ದೇಶನ/ಸಂಗೀತ: ಗಣೇಶ್ ಮಂದರ್ತಿ), ಫೆಬ್ರವರಿ 06ರ ಸೋಮವಾರ ಸುರಭಿ ರಿ. ಬೈಂದೂರು, ಮಕ್ಕಳ ರಂಗತಂಡ ಪ್ರಸ್ತುತಿಯ ಕುಂದಾಪ್ರ ಕನ್ನಡ ನಾಟಕ ’ಮಕ್ಕಳ ರಾಮಾಯಣ’ (ಮೂಲ ಕರ್ತೃ: ಡಿ.ಆರ್. ವೆಂಕಟರಮಣ ಐತಾಳ್, ಕುಂದಾಪ್ರ ಕನ್ನಡಕ್ಕೆ/ರಂಗರೂಪ/ನಿರ್ದೇಶನ: ಗಣೇಶ್ ಮಂದರ್ತಿ), ಫೆಬ್ರವರಿ 07ರ ಮಂಗಳವಾರ ವರ್ಕ ಶಾಪ್ ಇನ್ ಮೈಸೂರು ಫಾರ್ ಥಿಯೇಟರ್ ಅಭಿನಯದ ನಾಟಕ ’ಕಾಮ್ರೆಡ್ ಕುಂಭಕರಣ’ (ಇಂಗ್ಲೀಷ್ ಮೂಲ: ರಾಮು ರಾಮನಾಥನ್, ಅನುವಾದ & ನಿರ್ದೇಶನ: ಯತೀಶ್ ಎನ್. ಕೊಳ್ಳೆಗಾಲ)

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವೃದ್ಧೆ ನಾಪತ್ತೆ

    19/12/2025

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.