Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉಪ ಕಲಾತ್ಮಕ ನಿರ್ದೇಶಕರಾಗಿ ಡಾ. ಪ್ರದೀಪ ಕುಮಾರ ಶೆಟ್ಟಿ ಕೆಂಚನೂರು ಆಯ್ಕೆ
    ಊರ್ಮನೆ ಸಮಾಚಾರ

    ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉಪ ಕಲಾತ್ಮಕ ನಿರ್ದೇಶಕರಾಗಿ ಡಾ. ಪ್ರದೀಪ ಕುಮಾರ ಶೆಟ್ಟಿ ಕೆಂಚನೂರು ಆಯ್ಕೆ

    Updated:06/02/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಪ್ರತಿಷ್ಠಿತ 14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉಪ ಕಲಾತ್ಮಕ ನಿರ್ದೇಶಕ (ಡೆಪ್ಯುಟಿ ಆರ್ಟಿಸ್ಟಿಕ್ ಡೈರೆಕ್ಟರ್)ರನ್ನಾಗಿ ಡಾ. ಪ್ರದೀಪ ಕುಮಾರ ಶೆಟ್ಟಿ ಕೆಂಚನೂರು ಇವರನ್ನು ಕರ್ನಾಟಕ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.

    Click Here

    Call us

    Click Here

    ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯಡಿಯಲ್ಲಿ ಬರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯು ಈ ಉತ್ಸವವನ್ನು ಮಾರ್ಚ್ 16ರಿಂದ 23ರ ವರೆಗೆ ಬೆಂಗಳೂರಿನ ಒರಿಯನ್ ಮಾಲ್ನಲ್ಲಿರುವ ಪಿ.ವಿ.ಆರ್ನಲ್ಲಿ ಸಂಘಟಿಸಲಿದೆ. ಪ್ಯಾರಿಸ್ನಲ್ಲಿರುವ FIAP ಸಂಸ್ಥೆಯು ಮನ್ನಿಸಿರುವ ಭಾರತದ 5 ಫಿಲಂ ಫೆಸ್ಟಿವಲ್ನಲ್ಲಿ ಒಂದಾಗಿರುವ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು (ಬಿಫೆಸ್) ಅಂತರಾಷ್ಟ್ರೀಯ ಮನ್ನಣೆಯನ್ನು ಹೊಂದಿರುವ ಕೆಲವೇ ಕೆಲವು ಮುಖ್ಯ ಫೆಸ್ಟಿವಲ್ಗಳಲ್ಲಿ ಒಂದಾಗಿದೆ.

    ಪುಣೆಯ ಫಿಲಂ ಆ್ಯಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ನಲ್ಲಿ ಅಪ್ರಿಸಿಶಿಯೇಶನ್ (ಸಿನೆಮಾ ರಸಗ್ರಹಣ) ಮತ್ತು ಕೊಲ್ಕತ್ತಾದ ಸತ್ಯಜಿತ್ ರೇ ಫಿಲಂ ಇನ್ಸ್ಟಿಟ್ಯೂಟ್ನಿಂದ ಸೌಂಡ್ ಅಥವಾ ಶಬ್ದಗ್ರಹಣದಲ್ಲಿ ತರಬೇತಿ ಹೊಂದಿರುವ ಪ್ರದೀಪ ಅವರು ಅಹ್ಮದಾಬಾದಿನಲ್ಲಿರುವ ಕೇಂದ್ರ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾದ ಎನ್.ಐ.ಡಿ., ಆರ್.ವಿ. ವಿಶ್ವವಿದ್ಯಾಲಯ, ಮಣಿಪಾಲ ವಿಶ್ವವಿದ್ಯಾಲಯ, ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಹಾಗೂ ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಸಿನಿಮಾ ಅಧ್ಯಯನದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಕನ್ನಡ ಸಿನಿಮಾ ಅಧ್ಯಯನದಲ್ಲಿ ಪಿ.ಹೆಚ್.ಡಿ. ಹೊಂದಿರುವ ಪ್ರದೀಪ್ ವಿಶ್ವ ಸಿನಿಮಾ, ಭಾರತೀಯ ಸಿನಿಮಾ ಮತ್ತು ಕನ್ನಡ ಸಿನಿಮಾ ಕುರಿತಂತೆ ಒಟ್ಟು ಆರು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. 2016ರಲ್ಲಿ ರಾಷ್ಟ್ರಪತಿಗಳ ಬೆಳ್ಳಿ ಪದಕ (ರಜತ ಕಮಲ) ಪ್ರಶಸ್ತಿ ಪಡೆದ ಗುಲ್ವಾಡಿ ಟಾಕೀಸ್ ನಿರ್ಮಾಣದ ” ರಿಸರ್ವೇಶನ್ “ಸಿನಿಮಾದ ಚಿತ್ರಕಥೆಯ ಲೇಖಕರೂ ಆಗಿದ್ದಾರೆ. ನಿಟ್ಟೆ ಯುನಿವರ್ಸಿಟಿ ಮತ್ತು ಸುರತ್ಕಲ್ನ ಎನ್.ಐ.ಟಿ.ಕೆಯ ಫಿಲ್ಮ್ ಫೆಸ್ಟಿವಲ್ ಪ್ರೋಗ್ರಾಮರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಸಿನಿಮಾ ಚರಿತ್ರೆ ಹಾಗೂ ಚರಿತ್ರೆ ಅಧ್ಯಯನದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು 2018ರಲ್ಲಿ ಕೇಂದ್ರ ಸರ್ಕಾರದ ಸಂಸ್ಥೆ ICHRನ ಫೆಲೋ ಆಗಿ ಕೂಡಾ ಆಯ್ಕೆಯಾಗಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವೃದ್ಧೆ ನಾಪತ್ತೆ

    19/12/2025

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.