Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಜೆಪಿ ಸರಕಾರ ಭ್ರಷ್ಟಾಚಾರ, ದ್ವೇಷ ರಾಜಕಾರಣದಲ್ಲಿ ಮುಳುಗಿದೆ: ಬಿ. ಕೆ. ಹರಿಪ್ರಸಾದ್
    ಊರ್ಮನೆ ಸಮಾಚಾರ

    ಬಿಜೆಪಿ ಸರಕಾರ ಭ್ರಷ್ಟಾಚಾರ, ದ್ವೇಷ ರಾಜಕಾರಣದಲ್ಲಿ ಮುಳುಗಿದೆ: ಬಿ. ಕೆ. ಹರಿಪ್ರಸಾದ್

    Updated:19/02/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಕೋವಿಡ್ ಸಂಕಷ್ಟದ ಕಾಲದಲ್ಲಿ, ಪ್ರಾಕೃತಿಕ ಅವಘಡ ನಡೆದಾಗ ಕರ್ನಾಟಕ ಜನತೆಯ ನೆರವಿಗೆ ಬಾರದ ಬಿಜೆಪಿ ಕೇಂದ್ರ ನಾಯಕರು ಚುನಾವಣೆ ಬಂದಾಗ ದಂಡಿಯಾಗಿ ಬರುತ್ತಿದ್ದಾರೆ. ಬಡವರ ಮನೆಯ ಮಕ್ಕಳನ್ನು ಧರ್ಮ ಸಂಘರ್ಷಕ್ಕೆ ನೂಕಿ ಆಟವಾಡುತ್ತಿದ್ದಾರೆ. ಕಮಿಷನ್ ವ್ಯವಹಾರದಲ್ಲಿ ಮುಳುಗಿರುವುದೇ ಕಳೆದ ನಾಲ್ಕು ವರ್ಷದ ಬಿಜೆಪಿ ಸರಕಾರದ ಸಾಧನೆಯೇ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಕುಟುಕಿದರು.

    Click Here

    Call us

    Click Here

    ಅವರು ಬೈಂದೂರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಭಾನುವಾರ ಯಡ್ತರೆಯಲ್ಲಿ ಆಯೋಜಿಸಲಾದ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆಯ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಸೂತ್ರದ ಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ. ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಕರ ನೇಮಕಾತಿ, ಅಭಿವೃದ್ಧಿ ಕಾಮಗಾರಿಯಲ್ಲಿ ಬಿಜೆಪಿ ಸರಕಾರದ ಭ್ರಷ್ಟಾಚಾರ ಯಥೇಚ್ಛವಾಗಿ ನಡೆದಿದೆ. ವಿಜಯಸಂಕಲ್ಪ ಯಾತ್ರೆ ಮಾಡಿರುವುದು ಭ್ರಷ್ಟಾಚಾರದಲ್ಲಿ ಸಾಧನೆ ಮಾಡಿದ್ದಕ್ಕಾಗಿಯೇ? ಎಂದು ಪ್ರಶ್ನಿಸಿದರು.

    ಜನರ ಸಮಸ್ಯೆಗಳ ಬಗ್ಗೆ ಮಾತನಾಡುವ ಬದಲಿಗೆ ಲವ್ ಜಿಹಾದ್, ಧರ್ಮ ಸಂಘರ್ಷದ ಬಗ್ಗೆ ಮಾತನಾಡಿ ಎನ್ನುವ ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ನಾಯಕರು ತಮ್ಮ ಮನೆಯ ಮಕ್ಕಳನ್ನು ಮುಂದೆ ಬಿಡಲಿ ಎಂದ ಅವರು, ಮಕ್ಕಳ ಹಾಗೂ ಯುವಕರ ಭವಿಷ್ಯ ಶಿಕ್ಷಣದಲ್ಲಿದೆಯಾ ಅಥವಾ ಅವರ ಚಾಕು ಚೂರಿ ಕೊಟ್ಟು ಅಪರಾಧಿಗಳನ್ನಾಗಿ ಮಾಡಬೇಕಾ ಎಂದು ನೀವು ಯೋಚಿಸಬೇಕಿದೆ ಎಂದರು.

    ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪ್ರಾಸ್ತಾವಿಕ ಮಾತನಾಡಿ ಜನರ ಸಮಸ್ಯೆಯನ್ನು ಅರಿಯುವ ಸಲುವಾಗಿ ಪ್ರಜಾಧ್ವನಿ ಯಾತ್ರೆ ಆಯೋಜಿಸಲಾಗಿದೆ. ಕಾಂಗ್ರೆಸ್ ಪ್ರನಾಳಿಕೆಯನ್ನು ಜನರಿಗೆ ತಲುಪಿಸುವುದು ಕಾಂಗ್ರೆಸ್ ಕಾರ್ಯಕರ್ತರ ಆದ್ಯತೆಯಾಗಬೇಕಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮೀ ಯೋಜನೆ ಮೂಲಕ ರೂ.2000 ಹಾಗೂ ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್ ಉಚಿತ ವಿದ್ಯುತ್, ಕರಾವಳಿಯ ಹಿಂದುಳಿದ ವರ್ಗ ಹಾಗೂ ಮೀನುಗಾರರಿಗೆ ವಿಶೇಷ ಯೋಜನೆ ಹಾಕಿಕೊಳ್ಳಲಾಗಿದೆ. ಹಿಂದುಳಿದ ಸಮುದಾಯ ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದರು.

    ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ ಮೆಡಿಕಲ್  ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಐದು ಹೊಳೆ ಜೊಡನೆ, 100 ಬೆಡ್ ಆಸ್ಪತ್ರೆ, ಬೈಂದೂರು ಏರ್‌ಪೋರ್ಟ್ ಎಲ್ಲಿದೆ. ಶಾಸಕರ ಕಛೇರಿ ಬಾಗಿಲು ತೆಗೆಯುತ್ತಿಲ್ಲ. ಐದು ವರ್ಷದಲ್ಲಿ ಅಕ್ರಮ ಸಕ್ರಮದ 2 ಮೀಟಿಂಗ್ ನಡೆದಿದೆ. 94ಸಿ ಹಕ್ಕುಪತ್ರ ಈತನಕ ಕೊಟ್ಟಿಲ್ಲ ಎಂದು ಆರೋಪಿಸಿದ ಅವರು, ತಹಶಿಲ್ದಾರರ ಕಛೇರಿ, ತಾಲೂಕು, ಐಟಿಐ ಕಾಲೇಜು, ಬಿಇಓ ಆಫೀಸ್, ಮೆಸ್ಕಾಂ ಉಪಕೇಂದ್ರ, ಕೆ‌ಎಸ್‌ಆರ್‌ಟಿಸಿ ಬಸ್ ಹಾಗೂ ಬಸ್ ನಿಲ್ದಾಣ ಮೊದಲಾದವರುಗಳು ತಾನು ಶಾಸಕನಾಗಿದ್ದಾಗ ಕಾಂಗ್ರೆಸ್ ಪಕ್ಷದ ನೀಡಿದ ಕೊಡುಗೆಯಾಗಿದೆ ಎಂದರು.

    Click here

    Click here

    Click here

    Call us

    Call us

    ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ರಾಜ್ಯ ಕಾಂಗ್ರೆಸ್ ಕಾರ್ಯದರ್ಶಿ ಎಂ.ಎ. ಗಫೂರ್, ಬೈಂದೂರು ಬ್ಲಾಕ್ ಅಧ್ಯಕ್ಷ ಮದನ್ ಕುಮಾರ್, ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕಾಂಗ್ರೆಸ್ ಮುಖಂಡರಾದ ಎಸ್. ರಾಜು ಪೂಜಾರಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ವಾಸುದೇವ ಯಡಿಯಾಳ್, ಸಂಪಿಗೇಡಿ ಸಂಜೀವ ಶೆಟ್ಟಿ, ರಘುರಾಮ ಶೆಟ್ಟಿ, ರಮೇಶ್ ಗಾಣಿಗ ಕೊಲ್ಲೂರು, ಗೌರಿ ದೇವಾಡಿಗ, ಸುಬ್ರಹ್ಮಣ್ಯ ಪೂಜಾರಿ, ಶೇಖರ ಪೂಜಾರಿ, ಮಹಾಲಿಂಗ ನಾಯ್ಕ್, ಮಾಧವ ಪೂಜಾರಿ, ಕೃಷ್ಣ ಪೂಜಾರಿ, ಸಂಜಯ್ ಪೂಜಾರಿ ಸೇರಿದಂತೆ ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತಿರಿದ್ದರು.

    ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸ್ವಾಗತಿಸಿ, ಬೈಂದೂರು ನಗರ ಕಾಂಗ್ರೆಸ್ ಅಧ್ಯಕ್ಷ ನಾಗರಾಜ ಗಾಣಿಗ ಬಂಕೇಶ್ವರ ವಂದಿಸಿದರು. ಬೈಂದೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಜಗದೀಶ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್

    23/12/2025

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ

    23/12/2025

    ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ಸಂಕಲ್ಪ್‌ ಕುಮಾರ್‌ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌

    23/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ. ತಿಪ್ಪೇಸ್ವಾಮಿ ಕೆ.ಟಿ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ
    • ಬೀಡಾಡಿ ಪ್ರಾಣಿಗಳ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.