Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿನ್ಯಾಸ ಕ್ಷೇತ್ರದಲ್ಲಿ ವಿಪುಲ ಅವಕಾಶ – ಹಿರಿಯ ಗ್ರಾಫಿಕ್ ವಿನ್ಯಾಸಗಾರ ತಿಮ್ಮೇಶ್ ಮಲ್‌ಶೆಟ್ಟಿ
    alvas nudisiri

    ವಿನ್ಯಾಸ ಕ್ಷೇತ್ರದಲ್ಲಿ ವಿಪುಲ ಅವಕಾಶ – ಹಿರಿಯ ಗ್ರಾಫಿಕ್ ವಿನ್ಯಾಸಗಾರ ತಿಮ್ಮೇಶ್ ಮಲ್‌ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ’ಜಾಗತಿಕವಾಗಿ ಸೌಂದರ್ಯ ಪ್ರಜ್ಞೆ ಹೆಚ್ಚಿದ್ದು, ವಿನ್ಯಾಸ ಕ್ಷೇತ್ರದಲ್ಲೂ ಅವಕಾಶಗಳು ವಿಪುಲವಾಗಿವೆ. ವಿನ್ಯಾಸದ ಸೃಜನಶೀಲತೆ ಹಾಗೂ ತಾಂತ್ರಿಕತೆಯನ್ನು ಕರಗತ ಮಾಡಿಕೊಂಡರೆ ಅವಕಾಶಗಳು ಹೇರಳವಾಗಿವೆ’ ಎಂದು ಹಿರಿಯ ಗ್ರಾಫಿಕ್ ವಿನ್ಯಾಸಗಾರ ತಿಮ್ಮೇಶ್ ಮಲ್‌ಶೆಟ್ಟಿ ಹೇಳಿದರು.

    Click Here

    Call us

    Click Here

    ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ’ಅಭಿವ್ಯಕ್ತಿ’ ವಿದ್ಯಾರ್ಥಿ ವೇದಿಕೆ ಗುರುವಾರ ಹಮ್ಮಿಕೊಂಡಿದ್ದ ಪುಟ ವಿನ್ಯಾಸ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

    ’ನಡೆಯುವವರು ಎಡವುತ್ತಾರೆಯೇ ಹೊರತು ಕುಳಿತವರಲ್ಲ. ಹೀಗಾಗಿ ಏಳುಬೀಳುಗಳ ಬಗ್ಗೆ ಚಿಂತಿಸಬಾರದು. ತಪ್ಪಿನಿಂದಲೇ ನಾವು ತಿಳಿದುಕೊಳ್ಳಲು ಸಾಧ್ಯ. ಹೊಸತನವನ್ನು ಬೆಳೆಸಿಕೊಳ್ಳಲು ಸಾಧ್ಯ ಜೀವನವೇ ಒಂದು ಪ್ರಯೋಗಾಲಯ. ಪ್ರತಿನಿತ್ಯ ಪ್ರಯತ್ನಿಸಿ’ ಎಂದರು.

    ’ನಮ್ಮ ನಿತ್ಯದ ನಡವಳಿಕೆಯ ಮೇಲೆ ನಮ್ಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಯಾವುದೇ ಕೃತಿಯನ್ನು ನೋಡಲು ಸುಲಭ. ಆದರೆ, ಆ ಕೆಲಸದ ಹಿಂದೆ ಸಾಕಷ್ಟು ಪರಿಶ್ರಮ ಇರುತ್ತದೆ. ಪರಿಶ್ರಮದಿಂದ ಪರಿಪೂರ್ಣತೆ ಹೊಂದಲು ಸಾಧ್ಯ’ ಎಂದ ಅವರು, ’ಇನ್‌ಡಿಸೈನ್, ಇಲ್ಲಸ್ಟ್ರೇಟರ್, ಫೋಟೊಶಾಪ್ ಸೇರಿದಂತೆ ವಿನ್ಯಾಸದ ವಿವಿಧ ಸಾಫ್ಟ್‌ವೇರಗಳ ಬಳಕೆಯ ಪ್ರಾತ್ಯಕ್ಷಿಕೆ ನೀಡಿದರು.

    ’ಈಗ ಕೇವಲ ಸುದ್ದಿ ನೀಡಿದರೆ ಸಾಲದು. ಅದು ಕ್ಷಣದಲ್ಲಿ ಓದುಗರನ್ನು ಸೆಳೆಯುವಂತೆ ವಿನ್ಯಾಸ ನೀಡುವುದೂ ಅವಶ್ಯ. ಈ ಕೆಲಸಗಳಿಗೆ ಸೃಜನಶೀಲತೆ ಜೊತೆ ಸಂಯಮ ಅತಿಮುಖ್ಯ’ ಎಂದ ಅವರು ಕ್ಷೇತ್ರದಲ್ಲಿನ ತಮ್ಮ ಅನುಭವ ಹಂಚಿಕೊಂಡರು.

    Click here

    Click here

    Click here

    Call us

    Call us

    ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ ಮಾತನಾಡಿ, ’ವಿದ್ಯಾರ್ಥಿಗಳಿಗೆ ಕ್ಷೇತ್ರದ ತಜ್ಞರ ಜೊತೆಗಿನ ಸಂವಹನವು ಅತಿ ಅವಶ್ಯವಾಗಿದೆ. ಇದು ವೃತ್ತಿಪರತೆ ಹೆಚ್ಚಿಸಲು ಸಹಕಾರಿಯಾಗಿದೆ’ ಎಂದರು.

    ಅಭಿವ್ಯಕ್ತಿ ವೇದಿಕೆಯ ವಿದ್ಯಾರ್ಥಿ ಸಂಯೋಜಕಿ ದಿಶಾ, ವಿಭಾಗದ ಸಹ ಪ್ರಾಧ್ಯಾಪಕ ಡಾ.ಶ್ರೀನಿವಾಸ ಹೊಡೆಯಾಲ, ಸಹಾಯಕ ಪ್ರಾಧ್ಯಾಪಕರಾದ ಸುಶ್ಮಿತಾ ಜಯಾನಂದ, ಹರ್ಷವರ್ಧನ ಪಿ.ಆರ್, ನಿಶಾನ್ ಕೋಟ್ಯಾನ್, ದೀಕ್ಷಿತಾ ಇದ್ದರು. ವಿದ್ಯಾರ್ಥಿಗಳಾದ ಕವನ ಕಾಂತಾವರ ನಿರೂಪಿಸಿ, ಅವಿನಾಶ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    19/12/2025

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.