Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆ: ತೆರೆ ಅಪ್ಪಳಿಸಿ ದೋಣಿಗಳಿಗೆ ಹಾನಿ. ಲಕ್ಷಾಂತರ ರೂ. ನಷ್ಟ
    ಅಪಘಾತ-ಅಪರಾಧ ಸುದ್ದಿ

    ಮರವಂತೆ: ತೆರೆ ಅಪ್ಪಳಿಸಿ ದೋಣಿಗಳಿಗೆ ಹಾನಿ. ಲಕ್ಷಾಂತರ ರೂ. ನಷ್ಟ

    Updated:25/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಇಂದು ಬೆಳಗ್ಗೆ ಮರವಂತೆಯಲ್ಲಿ ಮೀನುಗಾರಿಕೆಗೆ ಹೊರಟ ಎರಡು ದೋಣಿಗಳಿಗೆ ದೊಡ್ಡ ಗಾತ್ರದ ತೆರೆಗಳು ಅಪ್ಪಳಿಸಿದ ಪರಿಣಾಮವಾಗಿ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ದೋಣಿಗಳು ಗಂಗೆಮನೆ ಪ್ರಭಾಕರ ಖಾರ್ವಿ ಮತ್ತು ಮಂಜುನಾಥ ಖಾರ್ವಿ ಅವರಿಗೆ ಸೇರಿವೆ. ತೆರೆ ಅಪ್ಪಳಿಸಿದಾಗ ಎರಡೂ ದೋಣಿಗಳು ಮಗುಚಿಕೊಂಡುವು. ಪ್ರಭಾಕರ ಖಾರ್ವಿ ಅವರ ’ವಿಶ್ವದೇವತೆ’ ಹೆಸರಿನ ದೋಣಿಯ ಬಲೆ ಎಳೆಯುವ ಯಂತ್ರ, ದೋಣಿಯ ಔಟ್‌ಬೋರ್ಡ್ ಯಂತ್ರ, ಫಿಶ್ ಫೈಂಡರ್, ವಯರ್‌ಲೆಸ್ ಹಾಳಾಗಿವೆ. ದೋಣಿಯಲ್ಲಿದ್ದ ಬಲೆ ತೇಲಿಹೋಗಿ ದಡ ಸೇರಿದಾಗ ನಿರಂತರ ಅಪ್ಪಳಿಸಿದ ತೆರೆಗಳಿಂದಾಗಿ ಮರಳಿನಲ್ಲಿ ಹೂತು ಹೋಗಿದೆ. ದೋಣಿಗೂ ಹಾನ ಸಂಭವಿಸಿದೆ. ಮರಳಿನಲ್ಲಿ ಹೂತುಹೋದ ಬಲೆಯನ್ನು ಹಿಟಾಚಿ ಯಂತ್ರ ಬಳಸಿ ಮೇಲೆತ್ತಲಾಯಿತು. ಆದರೆ ಅದರ ಬಹುಭಾಗಕ್ಕೆ ಹಾನಿಯಾಗಿದೆ. ಒಟ್ಟು ನಷ್ಟ ರೂ.10 ಲಕ್ಷ ಎಂದು ಅಂದಾಜಿಸಲಾಗಿದೆ. (ಕುಂದಾಪ್ರ ಡಾಟ್ ಕಾಂ)

    Click Here

    Call us

    Click Here

    ಮಂಜುನಾಥ ಖಾರ್ವಿ ಅವರ ವಿಶ್ವೇಶ್ವರಿ ಹೆಸರಿನ ದೋಣಿ ತೆರೆ ಅಪ್ಪಳಿಸಿದಾಗ ದಡದಲ್ಲಿದ್ದ ಕಲ್ಲಿಗೆ ಬಡಿದು ಇಬ್ಭಾಗವಾಗಿದೆ. ಬೋಟ್ ಯಂತ್ರ, ವಯರ್‌ಲೆಸ್ ಮತ್ತು ಜಿಪಿಎಸ್ ಯಂತ್ರಕ್ಕೆ ಹಾನಿಯುಂಟಾಗಿದೆ. ಆಗಿರುವ ನಷ್ಟ ರೂ ೮ ಲಕ್ಷ ಎಂದು ಅವರು ಅಂದಾಜಿಸಿದ್ದಾರೆ.

    ಹಾನಿಯ ಸುದ್ದಿ ತಿಳಿದ ತಾಲ್ಲೂಕು ಪಂಚಾಯತ್ ಸದಸ್ಯ ಎಸ್. ರಾಜು ಪೂಜಾರಿ ಬೈಂದೂರು ವಿಶೇಷ ತಹಸಿಲ್ದಾರ್ ಕಿರಣ್ ಗೌರಯ್ಯ ಮತ್ತು ಕುಂದಾಪುರ ಮೀನುಗಾರಿಕೆ ಸಹಾಯಕ ನಿರ್ದೇಶಕ ಚಂದ್ರಶೇಖರ ಅವರನ್ನು ಕರೆಸಿ ಹಾನಿಯನ್ನು ಪರಿಶೀಲಿಸಿ ಮೇಲಾಧಿಕಾರಿಗಳಿಗೆ ಅದರ ಕುರಿತು ವರದಿ ಸಲ್ಲಿಸುವ ವ್ಯವಸ್ಥೆ ಮಾಡಿದರು. ಜಿಲ್ಲಾ ಪಂಚಾಯತ್ ಸದಸ್ಯ ಕೆ. ಬಾಬು ಶೆಟ್ಟಿ, ತಾಲ್ಲೂಕು ಪಂಚಾಯತ್ ಸದಸ್ಯ ಮಹೇಂದ್ರಕುಮಾರ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ, ಮಾಜಿ ಅಧ್ಯಕ್ಷ ಎಸ್. ಜನಾರ್ದನ, ಎಂ. ನರಸಿಂಹ ಶೆಟ್ಟಿ, ಸದಸ್ಯರಾದ ನಾಗರಾಜ ಖಾರ್ವಿ, ಲೋಕೇಶ ಖಾರ್ವಿ, ಮಾಜಿ ಸದಸ್ಯ ಮನ್ಸೂರ್ ಇಬ್ರಾಹಿಂ, ಮತ್ತಿತರರು ಭೇಟಿನೀಡಿ ಪರಿಶೀಲಿಸಿದರು. (ಕುಂದಾಪ್ರ ಡಾಟ್ ಕಾಂ)

    News Maravanthe O 16-2 News Maravanthe O 16-1e

    maravanthe
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಂಗಳೂರು: ಟಿಪ್ಪರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನ ಸಾವು

    07/01/2026

    ಪಾಂಡೇಶ್ವರ: ಸ್ನಾನ ಗೃಹ ಇಣುಕಿದ ಆಗಂತುಕ. ಮಹಿಳೆ ಕೂಗಿಕೊಂಡ ಹಿನ್ನೆಲೆ ಎಸ್ಕೇಪ್

    06/01/2026

    ಕೆಎಸ್‌ಆರ್‌ಟಿಸಿ ಬಸ್ಸಿಗೆ ಟಿಪ್ಪರ್‌ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಗಂಭೀರ, 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

    05/01/2026
    Leave A Reply Cancel Reply

    ten − 2 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.