Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಮಾಜಿಕ ಜಾಲತಾಣಗಳ ಜಾಹೀರಾತಿಗೆ ಪೂರ್ವಾನುಮತಿ ಕಡ್ಡಾಯ: ಡಿಸಿ ಕೂರ್ಮಾರಾವ್ ಎಂ
    ಉಡುಪಿ ಜಿಲ್ಲೆ

    ಸಾಮಾಜಿಕ ಜಾಲತಾಣಗಳ ಜಾಹೀರಾತಿಗೆ ಪೂರ್ವಾನುಮತಿ ಕಡ್ಡಾಯ: ಡಿಸಿ ಕೂರ್ಮಾರಾವ್ ಎಂ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಏ.15:
    ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಧಿಸಿದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತುಗಳನ್ನು ಪ್ರದರ್ಶಿಸಲು ಪೂರ್ವಾನುಮತಿ ಕಡ್ಡಾಯವಾಗಿ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.

    Click Here

    Call us

    Click Here

    ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಪ್ರಚಾರಪಡಿಸುವ ಪೂವಾನುಮತಿ ಕುರಿತ ಕಾರ್ಯಗಾರದಲ್ಲಿ ಮಾತನಾಡಿ, ರಾಜಕೀಯ ಪಕ್ಷಗಳು ಚುನಾವಣೆಗೆ ಸ್ಪರ್ಧಿಸಿವ ಆಭ್ಯರ್ಥಿಗಳು, ಚುನಾವಣಾ ಜಾಹೀರಾತುಗಳನ್ನು ಪ್ರಚಾರ ಮಾಡುವ ಮುನ್ನ ಜಿಲ್ಲಾ ಎಂಸಿಎಂಸಿ ಸಮಿತಿಯಿಂದ ಪೂರ್ವ ಪ್ರಾಮಾಣೀಕರಣ ಪಡೆದು ಪ್ರದರ್ಶಿಸಬೇಕು ಎಂದರು.

    ಜಾಹೀರಾತಿನಲ್ಲಿ ಇತರರಿಗೆ ದೂರುವುದು, ಅಸ್ಪಷ್ಟ ಅಥವಾ ಮಾನ ಹಾನಿಕರ, ಹಿಂಸೆ ಪ್ರಚೋದನೆ, ನ್ಯಾಯಾಲಯ ನಿಂದನೆ, ರಾಷ್ಟ್ರದ ಏಕತೆ ಸಾರ್ವಭೌಮತ್ವಕ್ಕೆ ವಿರುದ್ದ ಹೇಳಿಕೆ ಸೇರಿದಂತೆ ಧಾರ್ಮಿಕ ಕ್ಷೇತ್ರಗಳ ಚಿತ್ರಣ, ದೇಶದ ಸೇನಾಪಡೆಯ ಹಾಗೂ ಸೇನಾ ವ್ಯಕ್ತಿಗಳ ಚಿತ್ರ ಮತ್ತಿತರ ನಿರ್ಬಂಧಿತ ವಿಷಯಗಳನ್ನು ಒಳಗೊಂಡಿರಬಾರದು ಎಂದರು.

    ಕಾರ್ಯಗಾರದಲ್ಲಿ ತರಬೇತಿ ನೀಡಿದ ಮಾಸ್ಟರ್ ಟ್ರೇನರ್ ಡಾ.ಅಶೋಕ್ ಕಾಮತ್ ಮಾತನಾಡಿ, ಅರ್ಜಿ ಸಲ್ಲಿಸುವವರು ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು, ಅರ್ಜಿಯ ಜೊತೆಯಲ್ಲಿ ಜಾಹಿರಾತು ಒಳಗೊಂಡ ಸಿ.ಡಿ.ಯ ಎರಡು ಪ್ರತಿ, ಅದರಲ್ಲಿನ ಧ್ವನಿ ಮುದ್ರಣದ ದೃಢೀಕರಣ ಪ್ರಮಾಣಪತ್ರ, ಜಾಹೀರಾತು ವಿಷಯದ ಶೀರ್ಷಿಕೆಗಳನ್ನು ಒಳಗೊಂಡಿರಬೇಕು.

    ಅರ್ಜಿ ಸಲ್ಲಿಸುವವರು ಅಭ್ಯರ್ಥಿಯಾದಲ್ಲಿ ಅದನ್ನು ಪ್ರಚಾರಪಡಿಸುವ 3 ದಿನಗಳ ಮೊದಲೇ ಸಲ್ಲಿಸಿ ಪೂರ್ವಾನುಮತಿ ಪಡೆಯಬೇಕು ಎಂದ ಅವರು ಅದರ ತಯಾರಿಕೆಗೆ ತಗಲುವ ವೆಚ್ಚ, ಮಾಧ್ಯಮಗಳಲ್ಲಿ ಪ್ರಚಾರಪಡಿಸಲು ತಗಲುವ ವೆಚ್ಚವನ್ನು ಚೆಕ್ ಮೂಲಕ ಪಾವತಿಸಿದ ವಿವರಗಳನ್ನು ನಮೂದಿಸಬೇಕು.

    Click here

    Click here

    Click here

    Call us

    Call us

    ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಪ್ರಚಾರಪಡಿಸುವುದು ಸೇರಿದಂತೆ ಚಿತ್ರಣ ತಯಾರಿಕೆಯ ವೆಚ್ಚಗಳನ್ನು ಅಭ್ಯರ್ಥಿಯ ಚುನಾವಣಾ ವೆಚ್ಚಕ್ಕೆ ಭರಿಸಲಾಗುವುದು. ಅಭ್ಯರ್ಥಿಯ ಪರವಾಗಿ ಯಾವುದೇ 3ನೇ ವ್ಯಕ್ತಿಗಳು ಜಾಹೀರಾತು ಪೂರ್ವ ಪ್ರಾಮಾಣೀಕರಣ ಅನುಮತಿ ಕೋರಿ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ಮಾನ್ಯತೆ ಮಾಡುವುದಿಲ್ಲ ಎಂದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಅಭಿಷೇಕ್ ರಂಜನ್ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರ್ಕಾರಿ, ಸರ್ಕಾರೇತರ ಸಂಸ್ಥೆಗಳ ದೈನಂದಿನ ಚಟುವಟಿಕೆಯಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯ: ಜಿಲ್ಲಾಧಿಕಾರಿ

    20/12/2025

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.