ಕರಾವಳಿ ಭಾಗದ ಅಭಿವೃದ್ಧಿಗೆ ರಾಜ್ಯ ಬಿಜೆಪಿ ವಿಶೇಷ ಆದ್ಯತೆ ನೀಡಿದೆ: ಸಂಸದ ತೇಜಸ್ವಿ ಸೂರ್ಯ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಕೇಂದ್ರ ಹಾಗೂ ರಾಜ್ಯ ಸರಕಾರದ ಸಾಧನೆಗಳು ಜನಸಾಮಾನ್ಯರ ಮನಸ್ಸಿನಲ್ಲಿದೆ. ಯುವಕರ, ದಮನಿತರ ಧ್ವನಿಯಾಗಿ ಸಂಘದ ಒಬ್ಬ ಸಾಮಾನ್ಯ ಕಾರ್ಯಕರ್ತ ಗುರುರಾಜ ಗಂಟಿಹೊಳೆಯವರಿಗೆ ಪಕ್ಷ ಅವಕಾಶ ನೀಡಿದೆ.ಇದು ಕಾರ್ಯಕರ್ತರ ಗೆಲುವಾಗಬೇಕು. ಬೈಂದೂರು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ನಿಶ್ಚಿತವಾದ ಬಹುಮತ ಗಳಿಸಲಿದೆ ಎಂದು ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದರು.

Call us

Click Here

ಅವರು ಬೈಂದೂರು ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಬಹುತೇಕ ಹೊಸ ಅಭ್ಯರ್ಥಿಗಳಿಗೆ ಬಿಜೆಪಿ ಅವಕಾಶ ನೀಡಿದೆ.ಮರವಂತೆ ಮೀನುಗಾರರ ಚುನಾವಣೆ ಬಹಿಷ್ಕಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಕೇಂದ್ರ ಹಾಗೂ ರಾಜ್ಯ ಸರಕಾರ ಮೀನುಗಾರರ ಅಭಿವೃದ್ದಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.ಕರಾವಳಿ ಭಾಗದ ಅಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಾಗಿದೆ.ಮೀನುಗಾರರ ವಿಶ್ವಾಸದೊಂದಿಗೆ ಬಿಜೆಪಿ ಭರವಸೆ ಈಡೇರಿಸಲಿದೆ ಎಂದರು.

ಬಿಜೆಪಿ ಸ್ಟಾರ್ ಪ್ರಚಾರಕಿ ಶ್ರುತಿ ಮಾತನಾಡಿ ಬಂದೂರು ಕ್ಷೇತ್ರ ಈ ಬಾರಿ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದೆ.ಸಂಘದ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಅವಕಾಶ ನೀಡಿರುವುದು ಅದು ಬಿಜೆಪಿಯಿಂದ ಮಾತ್ರ ಸಾಧ್ಯ. ಹೀಗಾಗಿ ಕಾರ್ಯಕರ್ತರು ಸಂಘಟನಾತ್ಮಕ ಹೋರಾಟದ ಮೂಲಕ ಬಿಜೆಪಿ ಗೆಲುವು ಸಾಧ್ಯಸಲಿದೆ ಎಂದರು.

ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ, ಬೈಂದೂರು ಮಂಡಲದ ಚುನಾವಣಾ ಪ್ರಭಾರಿ ಕ್ಯಾ. ಬ್ರಿಜೇಶ್ ಚೌಟ, ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಸದಾನಂದ ಉಪ್ಪಿನಕುದ್ರು ಉಪಸ್ಥಿತರಿದ್ದರು.

Leave a Reply