ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ – ಕುಂದಾಪುರ ತಾಲೂಕು ಘಟಕದಿಂದ ‘ಸೌಹಾರ್ದ ಇಫ್ತಾರ್ ಕೂಟ’ ಆಯೋಜನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕುಂದಾಪುರ ತಾಲೂಕು ಘಟಕದ ವತಿಯಿಂದ ತ್ರಾಸಿಯ ಮಸ್ಜಿದ್ ಎ ರಹಮತ್ ನಲ್ಲಿ ತಾಲೂಕು ಅಧ್ಯಕ್ಷರಾದ ಎಸ್. ದಸ್ತಗೀರ್ ಕಂಡ್ಲೂರು ರವರ ಅಧ್ಯಕ್ಷತೆಯಲ್ಲಿ ಪವಿತ್ರ ರಮಝಾನ್ ತಿಂಗಳ ಪ್ರಯುಕ್ತ “ಸೌಹಾರ್ದ ಇಫ್ತಾರ್ ಕೂಟ” ಮತ್ತು ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

Call us

Click Here

ಜಿಲ್ಲಾ ಸಮಿತಿ ಸದಸ್ಯರಾದ ಹುಸೇನ್ ಕೊಡಿಬೇಂಗ್ರೆ ವಿಷಯ ಮಂಡಿಸಿದರು. ಅತಿಥಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಮುಹಮ್ಮದ್ ರಫೀಕ್ ಗಂಗೊಳ್ಳಿ, ಜಮಾಅತುಲ್ ಮುಸ್ಲಿಮೀನ್ ಗಂಗೊಳ್ಳಿಯ ಅಧ್ಯಕ್ಷರಾದ ಹಸೈನಾರ್ ಗಂಗೊಳ್ಳಿ, ಮಸ್ಜಿದ್ ಎ ರಹಮತ್ ತ್ರಾಸಿಯ ಕಾರ್ಯದರ್ಶಿ ಮಾಸ್ಟರ್ ರಫೀಕ್, ಜೈ ಭೀಮ್ ಅಧ್ಯಕ್ಷರಾದ ಜಗದೀಶ್ ಗಂಗೊಳ್ಳಿ ವೇದಿಕೆ ಮೇಲೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತಾಲೂಕು ಕೋಶಾಧಿಕಾರಿ ಮುಜಾವರ್ ಅಬು ಮುಹಮ್ಮದ್ ಕುಂದಾಪುರ, ಜಿಲ್ಲಾ ಸಮಿತಿ ಸದಸ್ಯರಾದ ಶಾಬಾನ್ ಹಂಗಳೂರು, ಜಿ. ರೆಹಾನ್ ತ್ರಾಸಿ, ತಾಲೂಕು ಸಮಿತಿ ಸದಸ್ಯರಾದ ಝಹೀರ್ ನಾಖುದಾ ಗಂಗೊಳ್ಳಿ, ಅಬ್ದುಲ್ ಖಾದರ್ ಮೂಡಗೋಪಾಡಿ, ಮುಹಮ್ಮದ್ ರಫೀಕ್ ವಂಡ್ಸೆ, ಸ್ಥಳೀಯ ಜಮಾಅತ್ ಸದಸ್ಯರು, ಜೈ ಭೀಮ್ ಗಂಗೊಳ್ಳಿಯ ಕಾರ್ಯಕರ್ತರು ಮತ್ತು ಹಿಂದುಳಿದ ವರ್ಗಗಳ ಸಮಾಜ ಬಾಂಧವರು ಉಪಸ್ಥಿತರಿದ್ದರು. ಎಸ್. ಮುನೀರ್ ಅಹ್ಮದ್ ಕಂಡ್ಲೂರು ನಿರೂಪಿಸಿದರು. ಕಾರ್ಯಕ್ರಮದ ನಂತರ ಸಹ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Leave a Reply