Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿಂದುತ್ವ ಯಾರ ಮನೆ ಆಸ್ತಿಯಲ್ಲ. ಭಾವನೆ ಜೊತೆ ಆಟವಾಡುವ ಬಿಜೆಪಿಗೆ ಜನರ ಬದುಕಿನ ಬಗ್ಗೆ ಚಿಂತೆ ಇಲ್ಲ: ಡಿ.ಕೆ. ಶಿವಕುಮಾರ್
    ಊರ್ಮನೆ ಸಮಾಚಾರ

    ಹಿಂದುತ್ವ ಯಾರ ಮನೆ ಆಸ್ತಿಯಲ್ಲ. ಭಾವನೆ ಜೊತೆ ಆಟವಾಡುವ ಬಿಜೆಪಿಗೆ ಜನರ ಬದುಕಿನ ಬಗ್ಗೆ ಚಿಂತೆ ಇಲ್ಲ: ಡಿ.ಕೆ. ಶಿವಕುಮಾರ್

    Updated:23/04/20232 Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಹಿಂದೂತ್ವ ಎಂಬುದು ಯಾರ ಮನೆಯ ಆಸ್ತಿಯೂ ಅಲ್ಲ. ನಾನೂ ಹಿಂದೂನೇ. ಬಿಜೆಪಿ ಬದುಕಿನ ಬಗ್ಗೆ ಚಿಂತನೆ ಮಾಡದೇ, ಭಾವನೆ ಜೊತೆಗೆ ಆಟವಾಡುತ್ತಿದೆ. ಬೆಲೆ ಏರಿಕೆ, ಉದ್ಯೋಗ, ಭವಿಷ್ಯದ ಬಗ್ಗೆ ಅವರಿಗೆ ಚಿಂತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಯಡ್ತರೆ ಜೆ.ಎನ್.ಆರ್. ಸಭಾಭವನದಲ್ಲಿ ಜರುಗಿದ ಬೈಂದೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹತ್ತಾರು ಸರಕಾರಿ ಉದ್ದಿಮೆ ಸ್ಥಾಪನೆ, ಜನರ ಸಶಕ್ತಿಕರಣಕ್ಕೆ ನೂರಾರು ಯೋಜನೆಗಳನ್ನು ತಂದಿತ್ತು. ಹಾಗಾಗಿಯೇ ಇಂದು ದೇಶ ಪ್ರಗತಿಯ ಹಾದಿಯಲ್ಲಿದೆ. ಆದರೆ ಬಿಜೆಪಿ ಸರಕಾರ ಜನರಿಗೆ ಉಪಯೋಗ ಆಗುವ ಯಾವ ಯೋಜನೆಯನ್ನೂ ಜಾರಿ ಮಾಡಿಲ್ಲ. ಬದಲಿಗೆ ಭಾವನೆ ಜೊತೆಗೆ ಆಟವಾಡುತ್ತಿದೆ. ಅವರು ಹಿಂದೂಗಳು ಮುಂದು ಎಂದರೆ, ನಾವೆಲ್ಲರೂ ಸೇರಿ ಒಂದು ಎಂದು ಕಾಂಗ್ರೆಸ್ ಹೇಳುತ್ತದೆ. ಎಲ್ಲಾ ಧರ್ಮ, ಜನಾಂಗ, ಜಾತಿ ಸೇರಿಯೇ ಒಂದು ದೇಶವಾಗಿದೆ ಎಂದರು.

    ಕಷ್ಟಕಾಲದಲ್ಲಿ ಜೊತೆಗಿರುವವರೆಲ್ಲ ನಮ್ಮ ನಾಯಕರು. ಹೊಸಬರು ಹಳಬರು ಎಂಬ ಭೇದ ಬೇಡ. ವಯಸ್ಸಾದವರನ್ನು ಮನೆಯಿಂದ ಹೊರ ಹಾಕಲು ಸಾಧ್ಯವಿಲ್ಲ. ಹಾಗೆಯೇ ವಯಸ್ಸಾದವರನ್ನು ಪಕ್ಷದಿಂದಲೂ ಹೊರಹಾಕಲು ಸಾಧ್ಯವಿಲ್ಲ. ಎಲ್ಲರೂ ಜೊತೆಗೂಡಿ ಸಾಗುವುದೇ ಗೆಲುವು ಎಂದರು.

    ಗೋಪಾಲ ಪೂಜಾರಿ ಅವರು ಅಧಿಕಾರ ಇರಲಿ, ಇಲ್ಲದೇ ಇರಲಿ ಜನರಿಗಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ. ಅವರ ವ್ಯಾಪಾರ ವ್ಯವಹಾರ ನಷ್ಟದಲ್ಲಿದ್ದರೂ ಲೆಕ್ಕಿಸದೇ ಜನಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಅವರು ಬೈಂದೂರು ಕಾಂಗ್ರೆಸ್ ಪಕ್ಷದ ಸರ್ವಸಮ್ಮತ ನಾಯಕ ಎಂಬುದಕ್ಕೆ ಎಂಎಲ್ಎ ಅಭ್ಯರ್ಥಿಗೆ ಅರ್ಜಿ ಹಾಕದಿರುವುದೇ ಸಾಕ್ಷಿಯಾಗಿದ್ದು, ಚುನಾವಣೆಯಲ್ಲಿಯೂ ಅತ್ಯಧಿಕ ಬಹುಮತದೊಂದಿಗೆ ಗೆದ್ದು ಬರಲಿದ್ದಾರೆ ಎಂದರು.

    ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಮಾತನಾಡಿ, ಕಳೆದ ಅವಧಿಯಲ್ಲಿ ಬಿಜೆಪಿ ಅಪಪ್ರಚಾರದಿಂದಲೇ ಗೆದ್ದು ಬಂದಿತ್ತು. ಪ್ರತಿಭಾರಿ ಇಂತಹ ಸುಳ್ಳು ಕಥೆಯನ್ನು ಸೃಷ್ಟಿಮಾಡುವ ಕೆಲಸ ಬಿಜೆಪಿ ಮಾಡುತ್ತಿದೆ. ಶಿವಮೊಗ್ಗದ ಹರ್ಷ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಅವರ ಕುಟುಂಬಕ್ಕೆ ಬಿಜೆಪಿ ನಾಯಕರು ಹಣ ಕೊಟ್ಟು ಬಂದಿದ್ದಾರೆ. ಆದರೆ ಅದೇ ಪಕ್ಷದ ಕಾರ್ಯಕರ್ತ ಉದಯ ಗಾಣಿಗನನ್ನು ಬಿಜೆಪಿಯ ಮುಖಂಡರೇ ಕೊಲೆ ಮಾಡಿದ್ದಲ್ಲದೇ ಅವರ ಕುಟುಂಬವನ್ನು ಸಂಕಷ್ಟಕ್ಕೆ ನೂಕಿದೆ. ಮುಂದೆ ಬಿಜೆಪಿಯ ಇಂತಹ ಕುತಂತ್ರ ನಡೆಯುವುದಿಲ್ಲ. ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.

    Click here

    Click here

    Click here

    Call us

    Call us

    ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಮುಖಂಡ, ಜಿಪಂ ಮಾಜಿ ಸದಸ್ಯ ಕೆ. ಬಾಬು ಶೆಟ್ಟಿ, ಜಿಪಂ ಮಾಜಿ ಸದಸ್ಯ ಶಂಕರ ಪೂಜಾರಿ, ಮಾಜಿ ತಾಪಂ ಸದಸ್ಯರುಗಳಾದ ವೆಂಕಟ ಪೂಜಾರಿ, ಸದಾಶಿವ ಪಡುವರಿ, ದಸ್ತಗಿರಿ ಸಾಹೇಬ್, ಹೇರೂರು ಗ್ರಾಪಂ ಅಧ್ಯಕ್ಷ ಸುರೇಶ್ ನಾಯ್ಕ್, ಬಿಜೆಪಿ ಮುಖಂಡ ವಂಡ್ಸೆ ದೀಪಕ್ ಕುಮಾರ್ ಶೆಟ್ಟಿ ಸೇರಿದಂತೆ ಹಲವು ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

    ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಬಿಜೆಪಿ ಮುಖಂಡ ಕೆ. ಬಾಬು ಶೆಟ್ಟಿ ಮಾತನಾಡಿ, 32 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿ ದುಡಿದಿದ್ದೇನೆ. ಆದರೆ ಬಿಜೆಪಿ ಪಕ್ಷ ನಮಗೆ ನಂಬಿಸಿ ಮೋಸ ಮಾಡಿದೆ. ಎಲ್ಲಾ ಅರ್ಹತೆ ಇದ್ದರೂ ಆಸೆ ತೋರಿಸಿ ಕೊನೆಗೆ ನಿರಾಸೆಗೊಳಿಸುತ್ತಲೇ ಬಂದಿದೆ. ಹಾಗಾಗಿ ಪಕ್ಷ ಬಿಡುವ ನಿರ್ಧಾರ ಕೈಗೊಂಡು, ಕೆ. ಗೋಪಾಲ ಪೂಜಾರಿ ಅವರ ಕೈಗಳನ್ನು ಬಲಪಡಿಸಲು ನಾವೆಲ್ಲರೂ ಬಂದಿದ್ದೇವೆ ಎಂದರು.

    ವೇದಿಕೆಯಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಎಂ.ಎ. ಗಪೂರ್, ಯು.ಬಿ. ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ, ಎಸ್. ರಾಜು ಪೂಜಾರಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ರಘುರಾಮ ಶೆಟ್ಟಿ, ಮದನ್ ಕುಮಾರ್ ಉಪ್ಪುಂದ, ಪ್ರದೀಪ್ ಶೆಟ್ಟಿ ಗುಡಿಬೆಟ್ಟು, ಪ್ರಸನ್ನ ಕುಮಾರ್ ಶೆಟ್ಟಿ ಕೆರಾಡಿ, ಗೌರಿ ದೇವಾಡಿಗ, ಡಾ. ಸುಬ್ರಹ್ಮಣ್ಯ ಭಟ್, ಮಣಿಕಂಠ ದೇವಾಡಿಗ, ರಿಯಾಜ್ ಅಹಮ್ಮದ್, ಮಹಾಲಿಂಗ ನಾಯ್ಕ್, ಸತೀಶ್ ಕೆ.ವಿ., ಸುಬ್ರಹ್ಮಣ್ಯ ಪೂಜಾರಿ, ವಿಜಯ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೂಡ್ಲುಕಟ್ಟೆ: ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್‌ ಕಾರ್ಯಕ್ರಮ

    22/12/2025

    ಕುಂದಾಪುರ: ಜೂಜಾಟದಲ್ಲಿ ತೊಡಗಿದ್ದ 3 ಮಂದಿಯ ಬಂಧನ

    22/12/2025

    ಸಹಕಾರ ಭಾರತಿ ಅಭ್ಯಾಸ ವರ್ಗ: ಜನರಿಗೆ ಹೆಚ್ಚು ಸಹಕಾರ ನೀಡುವುದೇ ಗುರಿಯಾಗಲಿ – ಶಾಸಕ ಕಿರಣ್ ಕುಮಾರ್ ಕೊಡ್ಗಿ

    22/12/2025

    2 Comments

    1. Jay on 24/04/2023 7:18 pm

      Caste politics, minority reservations politics, religion politics maadode Evans matte evana so called janara dhwani aagiro congress party… 10 years inda power alli illa… congress party members kai alli money illa.. evaga looti maadoke matte evara account tumbisikolloke chance kaita idare…

      Mosa maadode aaitu… janara duddo nungi 1012 crores aasti … this is legal amount…

      If he is so clean n loyal.. let him show his account details and the source of this income… corrupt

      Reply
    2. Rbnayak on 24/04/2023 8:33 am

      Aadare minority vote matra evara aasti mattu adaridale rajakiyadalli illiyavarege baduki ulidaddu.

      Reply
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಮೂಡ್ಲುಕಟ್ಟೆ: ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್‌ ಕಾರ್ಯಕ್ರಮ
    • ಕುಂದಾಪುರ: ಜೂಜಾಟದಲ್ಲಿ ತೊಡಗಿದ್ದ 3 ಮಂದಿಯ ಬಂಧನ
    • ಸಹಕಾರ ಭಾರತಿ ಅಭ್ಯಾಸ ವರ್ಗ: ಜನರಿಗೆ ಹೆಚ್ಚು ಸಹಕಾರ ನೀಡುವುದೇ ಗುರಿಯಾಗಲಿ – ಶಾಸಕ ಕಿರಣ್ ಕುಮಾರ್ ಕೊಡ್ಗಿ
    • ದೇವಾಡಿಗ ನವೋದಯದ ಸಂಘ ಬೆಂಗಳೂರು: ದಿನದರ್ಶಿಕೆ ಬಿಡುಗಡೆ ಸಮಾರಂಭ
    • ಕೋಡಿಕನ್ಯಾಣದಲ್ಲಿ ವೈಭವದ ಉಂಜಲೋತ್ಸವ ಸಂಪನ್ನ, ತಿರುಮಲಾಧೀಶನ್ನು ಕಣ್ತುಂಬಿಕೊಂಡ ಭಕ್ತರು

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.