ಕುಂಭಾಸಿ: ಸರಣಿ ಅಪಘಾತದಲ್ಲಿ ಓರ್ವ ಸ್ಕೂಟಿ ಸವಾರನ ಸಾವು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಕುಂಭಸಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಎದುರುಗಡೆ ಜೀಪು, ಸ್ಕೂಟಿ, ಬೈಕ್ ಹಾಗೂ ಸೈಕಲ್ ನಡುವೆ ಸರಣಿ ಅಪಘಾತದಿಂದ ಸ್ಕೂಟಿ ಸವಾರ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತಪಟ್ಟ ವ್ಯಕ್ತಿ ತೆಕ್ಕಟೆ ನಾಗರಾಜ್ ದೇವಾಡಿಗ ಎಂದು ಗುರುತಿಸಲಾಗಿದೆ.

Call us

Click Here

ಉಡುಪಿಯಿಂದ ಕುಂದಾಪುರ ಕಡೆಗೆ ಅತೀ ವೇಗ ಅಜಾಗೃತೆಯಿಂದ ಬಂದ ಜೀಪು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಮುಂದೆ ಸಾಗಿ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ನಂತರ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ ಬೈಕ್ ಗೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಂದಕ್ಕೆ ನುಗ್ಗಿದೆ.

ಅಪಘಾತದಲ್ಲಿ ಸ್ಕೂಟಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಗಾಯಗೊಂಡ ಬೈಕ್ ಸವಾರ ಮತ್ತು ಸೈಕಲ್ ಸವಾರನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply