ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡ ಕಿರುತೆರೆ ನಟಿ ಭೂಮಿ ಶೆಟ್ಟಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಕಿರುತೆರೆ ನಟಿ, ಬಿಗ್ ಬಾಸ್ ಸ್ಪರ್ಧಿ ಭೂಮಿ ಶೆಟ್ಟಿ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಪರವಾಗಿ ಗಂಗೊಳ್ಳಿ ಭಾಗದಲ್ಲಿ ಮತಯಾಚನೆ ಮಾಡಿದರು.

Call us

Click Here

ಗಂಗೊಳ್ಳಿಯ ಲೈಟ್ ಹೌಸ್, ಕಂಚುಗೋಡು, ಸಂನ್ಯಾಸಿ ಬಲೆ ಮೊದಲಾದ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು. ಈ ವೇಳೆ ಗಂಗೊಳ್ಳಿ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಕಂಚುಗೋಡು, ಶಕ್ತಿಕೇಂದ್ರ ಅಧ್ಯಕ್ಷ ಚಂದ್ರ ಖಾರ್ವಿ, ಸೂರಜ್ ಖಾರ್ವಿ, ಗೋಪಾಲ ಖಾರ್ವಿ, ಶಾಂತಿ ಖಾರ್ವಿ, ವಿರೇಂದ್ರ ಶೆಟ್ಟಿ, ಧನಂಜಯ ಉಪ್ಪುಂದ ಮೊದಲಾದವರು ಉಪಸ್ಥಿತರಿದ್ದರು.

Leave a Reply