Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಲ್ಲಾ ವರ್ಗದವರಿಗೂ ನ್ಯಾಯ ದೊರಕಿಸಿಕೊಟ್ಟಿದ್ದು ಬಿಜೆಪಿ ಸರಕಾರ ಮಾತ್ರ – ಸಚಿವ ಕೋಟ ಶ್ರೀನಿವಾಸ ಪೂಜಾರಿ
    ಊರ್ಮನೆ ಸಮಾಚಾರ

    ಎಲ್ಲಾ ವರ್ಗದವರಿಗೂ ನ್ಯಾಯ ದೊರಕಿಸಿಕೊಟ್ಟಿದ್ದು ಬಿಜೆಪಿ ಸರಕಾರ ಮಾತ್ರ – ಸಚಿವ ಕೋಟ ಶ್ರೀನಿವಾಸ ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಬಡವರು, ದುರ್ಬಲರ ಏಳಿಗೆಗಾಗಿ ಭಾರತೀಯ ಜನತಾ ಪಕ್ಷ ಹತ್ತಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಫಲವಾಗಿ ರಾಜ್ಯದಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರಲಿದ್ದೇವೆ. ಕರಾವಳಿಯಲ್ಲಿ 19 ಸೀಟುಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ ಎಂದು ಸಚಿವ ಕೊಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಬೈಂದೂರು ಬಿಜೆಪಿ ಕಛೇರಿಯಲ್ಲಿ ಆಯೋಜಿಸಲಾದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಬೈಂದೂರು ಕ್ಷೇತ್ರದ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಜನರ ನಡುವೆಯೇ ಸಾಮಾನ್ಯರಂತೆ ಬದುಕಿದವರು. ಅವರ ಬಗ್ಗೆ ಕ್ಷೇತ್ರದ ಜನರು ಪ್ರೀತಿ ತೋರುತ್ತಿದ್ದಾರೆ. ವಿಧಾನಸೌಧದಲ್ಲಿ ಇಂತಹ ವ್ಯಕ್ತಿಗಳು ಇದ್ದರೆ ಸೊಬಗು. ಈ ಭಾರಿ ಗುರುರಾಜ ಗಂಟಿಹೊಳೆ ಅವರ ಗೆಲುವು ನಿಶ್ಚಿತ ಎಂದರು.

    ಹಾಲಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಪ್ರಚಾರದಲ್ಲಿ ಸಕ್ರಿಯವಾಗಿಲ್ಲದಿರುವ ಬಗ್ಗೆ ಪ್ರತಿಕ್ರಿಯಿಸಿ ಉಡುಪಿ ಶಾಸಕ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಹಾಗೂ ಕುಂದಾಪು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಜೆಪಿಯ ಅಭ್ಯರ್ಥಿಯನ್ನು ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಅದರಂತೆ ಬೈಂದೂರು ಶಾಸಕರೂ ಆಶೀರ್ವಾದ ಮಾಡಲಿದ್ದಾರೆ ಎಂಬ ಭರವಸೆ ಇದೆ ಎಂದರು. ಪಕ್ಷ ತೊರೆದ ಬಾಬು ಶೆಟ್ಟಿ ಅವರು ಎಲ್ಲರಂತೆಯೇ ನನಗೆ ಆತ್ಮೀಯರಾಗಿದ್ದವರು. ಅವರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

    ಕಾಂಗ್ರೆಸ್ ನಾಯಕರು ನಾನೂ ಹಿಂದು ಎನ್ನುತ್ತಿದ್ದಾರೆ. ಬಿಜೆಪಿ ಪಕ್ಷ ಹಿಂದುತ್ವದ ಗುತ್ತಿಗೆ ಪಡೆದಿಲ್ಲ ನಿಜ. ಆದರೆ ನಾನು ಹಿಂದು ಎನ್ನುವ ಕಾಂಗ್ರೆಸ್ ನಾಯಕರು ಗೋಹತ್ಯೆ ನಿಷೇಧ ಹಾಗೂ ಮತಾಂತರ ನಿಷೇಧ ಕಾನೂನು ಪರವಾಗಿ ನಿಂತರೆ ಅವರ ಮಾತಿಗೊಂದು ಬೆಲೆ ಬರಲಿದೆ ಎಂದ ಸಚಿವರು ಕೇಸರಿ ಶಾಲು ಕಂಡರೆ ಅಲರ್ಜಿ ಎನ್ನುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಕೇಸರಿ ಪ್ರೀತಿ ಹುಟ್ಟಿರುವುದು ಚುನಾವಣಾ ತಂತ್ರ ಎಂದರು.

    ಈ ವೇಳೆ ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ. ಜ್ಯೋತಿ ಪಾಂಡ್ಯ ಸೇಥ್, ಜಿಲ್ಲಾ ಪ್ರಭಾರಿ ಶ್ಯಾಮಲಾ ಎಸ್. ಕುಂದರ್, ಮಾಜಿ ತಾಪಂ ಉಪಾಧ್ಯಕ್ಷ ಮಹೇಂದ್ರ ಪೂಜಾರಿ, ಜಿಪಂ ಮಾಜಿ ಸದಸ್ಯ ಸುರೇಶ್ ಬಟವಾಡಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಜ್ವಲ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆನಂದ ಖಾರ್ವಿ, ಬೈಂದೂರು ಬಿಜೆಪಿ ಮಾಧ್ಯಮ ಸಂಚಾಲಕ ಶ್ರೀಗಣೇಶ್ ಗಾಣಿಗ ಉಪ್ಪುಂದ ಇದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    twelve + eight =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.